ವಿಷಯಕ್ಕೆ ಹೋಗಿ

ಸೆ 19 ರಾಜ್ಯದಾದ್ಯಂತ ಇ -ಲೋಕ ಅದಾಲತ್ -ನ್ಯಾಯಮೂರ್ತಿ ಅರ್ವಿಂದ್ ಕುಮಾರ್

ಸೆ.19 ರಂದು ರಾಜ್ಯಾದ್ಯಂತ ಇ -ಲೋಕ ಅದಾಲತ್: ನ್ಯಾ|| ಅರವಿಂದ ಕುಮಾರ್.

ಹಾಸನ,ಆ.28(ಕರ್ನಾಟಕ ವಾರ್ತೆ):- 
ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಸೆ.19 ರಂದು  ಇ -ಲೋಕ ಅದಾಲತ್ ಏರ್ಪಡಿಸಲಾಗಿದ್ದು, ರಾಜಿ ತೀರ್ಮಾನದ ಮೂಲಕ ಸಾವಿರಾರು ಪ್ರಕರಣಗಳ ಇತ್ಯರ್ಥ ನಿರೀಕ್ಷಿಸಲಾಗಿದೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರು ಹಾಗೂ ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್ ಅವರು ತಿಳಿಸಿದ್ದಾರೆ.

ಬೆಂಗಳೂರಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕವೇ ಎಲ್ಲಾ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸುದ್ದಿಗೋಷ್ಠಿ ನಡೆಸಿದ ಅವರು  ಕೊವಿಡ್-19 ಹಿನ್ನಲೆಯಲ್ಲಿ ಎಲ್ಲರಿಗೂ ಹಲವು ರೀತಿಯ ಸಮಸ್ಯೆಗಳು ಎದುರಾಗಿವೆ. ನ್ಯಾಯಾಲಯಗಳಲ್ಲಿ ವಿಚಾರಣೆಗಳು ತಡವಾಗುತ್ತಿವೆ ಹಾಗಾಗಿ ಬಾಕಿ ಇರುವ ರಾಜಿ ಸಂಧಾನದ ಮೂಲಕ ಬಗೆ ಹರಿಸಬಹುದಾದ ಪ್ರಕರಣಗಳನ್ನು ವಿಲೇವಾರಿ ಮಾಡಿ ತ್ವರಿತ ನ್ಯಾಯ ಒದಗಿಸಲು ಇ-ಲೋಕ ಅದಾಲತ್ ವ್ಯವಸ್ಥೆ ಮಾಡಲಾಗಿದೆ ಎಂದರು.

ಸೆಪ್ಟಂಬರ್ 19 ರಂದು ಪ್ರಪ್ರಥಮವಾಗಿ ಇ -ಲೋಕ ಅದಾಲತ್ ಜಾರಿಗೊಳಿಸಲಾಗುತ್ತಿದೆ. ತಂತ್ರಜ್ಞಾನದ ಬಳಕೆ ಮೂಲಕ ಕಕ್ಷಿದಾರರು ತಮ್ಮ ವಕೀಲರ ಮೂಲಕ ಅಥವಾ ನೇರವಾಗಿ ರಾಜಿಸಂಧಾನದಲ್ಲಿ ಪಾಲ್ಗೊಂಡು ನ್ಯಾಯಲಯದ ತೀರ್ಪು ಪಡೆಯಬಹುದಾಗಿದೆ ಎಂದು ಅವರು ಹೇಳಿದರು.
 
ಸರ್ವರಿಗೂ ಒಂದೇ ರೀತಿಯ ನ್ಯಾಯ ಒದಗಿಸಲಾಗುವುದು. ಇಲ್ಲಿ ನೀಡುವ ತೀರ್ಮಾನವನ್ನು ಇತರ ನ್ಯಾಯಲಯಗಳಲ್ಲಿ ಪ್ರಶ್ನಿಸುವಂತಿಲ್ಲ. ಹೆಚ್ಚಾಗಿ ಅಪಘಾತ ಪ್ರಕರಣಗಳು, ಚೆಕ್ ಬೌನ್ಸ್ ಮತ್ತಿತರ ಸಿವಿಲ್ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗುವುದು. ಈಗಾಗಾಲೇ ಇನ್ಸ್ಯೂರೆನ್ಸ್ ಕಂಪನಿಗಳ ಪ್ರತಿನಿಧಿಗಳೊಂದಿಗೂ ಚರ್ಚಿಸಲಾಗಿದೆ. 8-9 ವರ್ಷಗಳ ಹಿಂದೆ ಅಪಘಾತಗಳು ಇನ್ನೂ ಪರಿಹಾರವಾಗಿಲ್ಲ. ಇವುಗಳನ್ನು ಇ -ಲೋಕ ಅದಾಲತ್ ಮೂಲಕ ಶೀಘ್ರ ಪರಿಹಾರ ಒದಗಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಎಂದು ಅವರು ತಿಳಿಸಿದರು.

 ಯಾವುದಾದರು ಕೇಸ್‍ಗಳ ಇತ್ಯರ್ಥ ಮಾಡಿಕೊಳ್ಳಲು ಕೋರ್ಟ್ ಅಥವಾ ಕಚೇರಿಗಾಗಲಿ ಹೋಗುವ ಅವಶ್ಯಕತೆ ಇಲ್ಲ ಅವರ ಸ್ಥಾನದಲ್ಲಿಯೇ ಕುಳಿತು ತಮ್ಮ ಲಾಯರ್ ಮುಖಾಂತರ ಎಲ್ಲಾ ರೀತಿಯ ಮೂಲಾಧಾರಗಳನ್ನು ಇನ್ಸ್ಯರೆನ್ಸ್ ಕಂಪನಿಗಳಿಗೆ ತಲುಪಿಸಿದರೆ ಅವರು ನಿಯಮಾನುಸಾರ ನೀಡಬೇಕಾದ ಪರಿಹಾರ ನೀಡುತ್ತಾರೆ ಎಂದು ನಾ|| ಅರವಿಂದ ಕುಮಾರ್ ಅವರು ಮಾಹಿತಿ ನೀಡಿದರು.
ಕರ್ನಾಟಕ ಉಚ್ಚ ನ್ಯಾಯಾಲಯದ ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಅಲೋಕ್ ಆರಾಧ್ಯ ಅವರೂ ಕೂಡ 
ಇ- ಲೋಕ ಅದಾಲತ್‍ನ ಉದ್ದೇಶ ಹಾಗೂ ಆಶಯಗಳ ಬಗ್ಗೆ ವಿವರಿಸಿದರು.

ಕಕ್ಷಿದಾರರ, ಪ್ರತಿವಾದಿಗಳು, ವಕೀಲರುಗಳು ಹಾಗೂ ನ್ಯಾಯಾಧೀಶರುಗಳು 
ಇ- ಲೋಕ ಅದಾಲತ್‍ನ ಯಶಸ್ವಿಗೆ ಸಹಕರಿಸಬೇಕು ಎಂದರು.
 
ವೀಡಿಯೋ ಸಂವಾದ ಮುಗಿದ ನಂತರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ನ್ಯಾ|| ಶಿವಣ್ಣ ಅವರು ಜಿಲ್ಲೆಯ ಇ- ಲೋಕ್ ಅದಾಲತ್ ವ್ಯವಸ್ಥೆಗಳ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದರು ಜಿಲ್ಲೆಯಲ್ಲಿ ಹಲವು ರೀತಿಯ 65,908 ಪ್ರಕರಣಗಳು ಬಾಕಿ ಇವೆ ಇದರಲ್ಲಿ, ರಾಜಿಗೆ ಯಾವ ಪ್ರಕರಣಗಳು ಕಾನೂನು ಮಿತಿಯಲ್ಲಿ ಯೋಗ್ಯವಾಗಿವೆಯೋ ಅವುಗಳನ್ನು ಇತ್ಯರ್ಥ ಮಾಡಲಾಗುತ್ತದೆ. ಈ ಬಾರಿ ಇ -ಲೋಕ ಅದಾಲತ್‍ನಲ್ಲಿ ವಿಲೇವಾರಿ ಮಾಡಲು 5,925 ಪ್ರಕರಣಗಳನ್ನು ಈಗಾಗಲೇ ಗುರುತಿಸಲಾಗಿದೆ ಎಂದರು.

ಇದೊಂದು ಹೊಸ ಪ್ರಯತ್ನ, ಈಗಾಗಲೇ ತಾಲ್ಲೂಕು ನ್ಯಾಯಾಧೀಶರು, ವಕೀಲರು ವಿಮಾ ಸಂಸ್ಥೆಗಳ ಗಮನಕ್ಕೆ ತರಲಾಗಿದ್ದು ಆದಷ್ಟು ಹೆಚ್ಚು ಪ್ರಕರಣ ಇತ್ಯರ್ಥ ಮಾಡಲಾಗುವುದು. ಇದರಿಂದ ಕಕ್ಷಿದಾರರು, ವಕೀಲರು, ವಿಮಾ ಸಂಸ್ಥೆಗಳು, ಬ್ಯಾಂಕುಗಳಿಗೂ ಅನುಕೂಲ ಆಗಲಿದೆ ಎಂದು ನಾ|| ಶಿವಣ್ಣ ಅವರು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಕೆ. ಬಸವರಾಜು ಅವರು ಈ ಸಂದರ್ಭದಲ್ಲಿ ಹಾಜರಿದ್ದರು.
**************

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹಾಸನ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗಾವಕಾಶಗಳು.

ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ನೆಲೆಸಿರುವ ಗೃಹಿಣಿಯರು, ನಿವೃತ್ತ ಅಧಿಕಾರಿಗಳು /ನೌಕರರು ಮತ್ತು ನಿರುದ್ಯೋಗಿಗಳಿಗೆ ಆರ್ಥಿಕ ವಲಯದಲ್ಲಿ ಹೂಡಿಕೆ ಇಲ್ಲದೆ ವೃತ್ತಿ ಅವಕಾಶಗಳು / ವ್ಯಾಪಾರ ಅವಕಾಶಗಳು  ಪುರುಷ ಮತ್ತು  ಮಹಿಳೆಯರಿಗೆ   ವಯಸ್ಸಿನ ಮಿತಿ: - 25 ರಿಂದ 65 ವರ್ಷಗಳು.  ದಯವಿಟ್ಟು ನಿಮ್ಮ ವಿವರಗಳನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ.  freelanceadvertisingthassan@gmail.com  ಅಥವಾ  ಸಂಪರ್ಕಿಸಿ  ವಾಟ್ಸಾಪ್ ಸಂದೇಶಗಳು ಮಾತ್ರ  7090899728  Career opportunities /business opportunities with out an investments in financial sector for housewives ,retired officials /employees and unemployed persons residing in Hassan district, Karnataka state India For both male and female. Age limit:- 25 to 65 years. Please send your details to below email id. freelanceadvertisingathassan@gmail.com Or  Contact  WhatsApp messages only 070908 99728

ಉತ್ತಮ ಫಲಿತಾಂಶ , ಹಣ ಉಳಿತಾಯ.

ನಾನು ನೆಟ್‌ಸರ್ಫ್ ಡೈರೆಕ್ಟ್‌ನೊಂದಿಗೆ ಕೆಲಸ ಮಾಡುತ್ತಿದ್ದೇನೆ. ನಾನು ನೆಟ್ಸರ್ಫ್ ಉತ್ಪನ್ನಗಳನ್ನು ನಿಯಮಿತವಾಗಿ ಬಳಸುತ್ತಿದ್ದೇನೆ. ನಾನು ನಿಮಗೆ ಈ ಉತ್ಪನ್ನಗಳನ್ನು ಬಲವಾಗಿ ಶಿಫಾರಸು ಮಾಡುತ್ತೇವೆ. 'NETSURF DIRECT' 5 ವಿವಿಧ ವಿಭಾಗಗಳಲ್ಲಿ 90 ಕ್ಕೂ ಹೆಚ್ಚು ಗಿಡಮೂಲಿಕೆ ಉತ್ಪನ್ನಗಳನ್ನು ನೀಡುತ್ತದೆ ಅಂದರೆ ಆರೋಗ್ಯ ರಕ್ಷಣೆ, ವೈಯಕ್ತಿಕ ಆರೈಕೆ, ಬಣ್ಣ ಸೌಂದರ್ಯವರ್ಧಕಗಳು, ಗೃಹ ಆರೈಕೆ ಮತ್ತು ಕೃಷಿ. ಈ ಉತ್ಪನ್ನಗಳನ್ನು ಭಾರತದಾದ್ಯಂತ 2.5 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ನಂಬಿದ್ದಾರೆ. ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೆಟ್‌ಸರ್ಫ್ ವರ್ಲ್ಡ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ ಮತ್ತು ಎಲ್ಲಾ ನೆಟ್‌ಸರ್ಫ್ ಉತ್ಪನ್ನಗಳ ಮೇಲೆ ಅತ್ಯಾಕರ್ಷಕ ಕೊಡುಗೆಗಳನ್ನು ಪಡೆದುಕೊಳ್ಳಿ. ಒಮ್ಮೆ ನೀವು ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿದ ನಂತರ, ನನ್ನ ಮೊಬೈಲ್ ಸಂಖ್ಯೆಯನ್ನು (8453502625) "ಉಲ್ಲೇಖಿಸಿದವರು" ನಲ್ಲಿ ನಮೂದಿಸಿ ಮತ್ತು ನಿಮ್ಮ 1ನೇ ಖರೀದಿಯಿಂದ ಪುನಃ ಪಡೆದುಕೊಳ್ಳಬಹುದಾದ ರೂ.100 ವೋಚರ್ ಅನ್ನು ಪಡೆಯಿರಿ. Andriod ಬಳಕೆದಾರರು: https://bit.ly/3SxEkfB ಆಪಲ್ ಬಳಕೆದಾರರು: https://apple.co/3Ace2JT   I am working with Netsurf Direct. I am using Netsurf products regularly. I strongly recommend these products to you .   'NETSURF DIRECT...

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ (92) ವಿಧಿವಶ. ನಾಳೆ ಅಂತ್ಯಕ್ರಿಯೆ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ:- ತಡ ರಾತ್ರಿ ನಿಧನರಾಗಿರುವ ಎಸ್.ಎಂ ಕೃಷ್ಣ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ ಕೃಷ್ಣ ಇತ್ತೀಚೆಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ  ಎಸ್.ಎಂ.ಕೃಷ್ಣ (92) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ    ಕೊನೆಯುಸಿರೆಳೆದಿದ್ದಾರೆ. ಎಸ್​ಎಂ ಕೃಷ್ಣ ಅವರು ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಮಂಡ್ಯದ ಸೋಮನಹಳ್ಳಿಯಲ್ಲಿ 1932ರಲ್ಲಿ ಜನಿಸಿದ್ದ ಅವರು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದುಕೊಂಡಿದ್ದರು. ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಸ್ಪೀಕರ್ ಆಗಿಯೂ ಸೇವೆ ಸಲ್ಲಿಕೆ ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು. 1971 ರಿಂದ 2014ರವರೆಗೆ ವಿವಿಧ ಕಾಲಘಟ್ಟದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಗಿದ್ದರು. ನಾಳೆ ಎಸ್​​ಎಂ ಕೃಷ್ಣ ಅವರ ಅಂತ್ಯಕ್ರಿಯೆ; ಬೆಂಗಳೂರಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ.. ಫೋಟೋ ಕೃಪೆ :-ವಿಕಿಪೀ...