ವಿಷಯಕ್ಕೆ ಹೋಗಿ

ಸಾಹಿತ್ಯ ಪರಿಷದ್ ಅಖಾಡ-ಕೋಟೆ ಕಾಲಂ

ಹರೀಶ್ ಹೆಚ್ ಆರ್ 
ಕೋಟೆ 
ಸಾಹಿತ್ಯ ಪರಿಷತ್ತಿನ ಅಖಾಡ ಹಾಸನ ಜಿಲ್ಲಾ ಕನ್ನಡಸಾಹಿತ್ಯ ಪರಿಷತ್ತಿನ ಈ ಅವಧಿ ಮುಗಿಯಲು ಇನ್ನೂ ಹಲವು ತಿಂಗಳುಗಳ ಸಮಯವಿದ್ದರೂ ಆಕಾಂಕ್ಷಿಗಳ ಉತ್ಸಾಹ ಈಗಲೇ ಸ್ಪೋಟಗೊಂಡಿದೆ ಜಿಲ್ಲಾಕೇಂದ್ರ ದಲ್ಲಿ ಒಳ್ಳೆಯ ಭವನ ಸಮ್ಮೇಳನಗಳಿಗೆ ಸರಕಾರದ ಅನುದಾನ ಖರ್ಚಿಗೆ ಎಂದು ಬಾಡಿಗೆ ಕಾರ್ಯಕ್ರಮ ಗಳಿಗೆ ದಾನಿಗಳಿಂದ ತನುಮನ ಎಲ್ಲದಕ್ಕಿಂತ ಆರ್ಥಿಕ ಸಹಾಯ ಇನ್ನು ತಮಗೆ ಬೇಕಾದವರಿಗೆ ಸಮ್ಮೇಳನಗಳ ಅಧ್ಯಕ್ಷರನ್ನಾಗಿಸುವ ಅವಕಾಶ ಹೋಬಳಿ ಮಟ್ಟದವರೆಗೂ ಚಂದಾ ವಸೂಲಿಯ ಅವಕಾಶ ಎಲ್ಲೆಡೆ ತಮ್ಮ ಶಿಷ್ಯರನ್ನು ಪ್ರತಿಷ್ಠಾಪಿಸುವ ವ್ಯವಸ್ಥೆ ಆ ಮೂಲಕ ರಾಜಕಾರಣಿಗಳು ಮತ್ತು ಅಧಿಕಾರಿಗಳ ಗಮನ ಸೆಳೆಯುವ ಮೂಲಕ ವೈಯಕ್ತಿಕ ವಾಗಿ ಸಾಕಷ್ಟು ಪ್ರಯೋಜನ ಪಡೆಯಲು ಇರುವ ಸಾಧ್ಯತೆಗಳು ಆ ಸ್ಥಾನದ ಮೇಲೆ ಹೆಚ್ಚು ಜನರು ಮುಗಿಬೀಳುವಂತೆ ಮಾಡಿದೆ ಎ.ಜಿ.ಹರಿಗೋಪಾಲ್ ಸಾಹಿತ್ಯ ಪರಿಷತ್ತಿನ ಸುಂದರ ಕಟ್ಟಡ ಕಟ್ಟಿದ ನಂತರ ಇನ್ನಿಲ್ಲದ ಡಿಮ್ಯಾಂಡ್ ಬಂದ ಜಿಲ್ಲಾ ಕಸಾಪ ಮದನಗೌಡರ ಕ್ರಿಯಾಶೀಲತೆ ಫಲವಾಗಿ ಅಧ್ಯಕ್ಷ ಗಾದಿಗೆ ಸ್ಟಾರ್ ವ್ಯಾಲ್ಯು ಬಂದಿತು ಹೆಚ್ ಬಿ ರಮೇಶ್ ಅದಕ್ಕೆ ಸಾತ್ವಿಕ ರೂಪನೀಡುವ ಮೂಲಕ ಹೊಸರೀತಿಯ ಚಲನೆ ನೀಡಿದ್ದಲ್ಲದೆ ಎಲ್ಲಾ ವರ್ಗದ ಜನರೂ ಸಕ್ರಿಯವಾಗಿ ಪರಿಷತ್ತಿನ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಮಾಡಿದರು ನಂತರದ ಅವದಿಯಲ್ಲಿ ಪರಿಷತ್ತು ಅಧ್ಯಕ್ಷರು ಹಾಗೂ ಅವರ ಊಳಿಗದವರ ಸೊತ್ತು ಎಂಬಂತಾಯಿತಲ್ಲದೇ ಬೇಕಾದವರನ್ನು ಬೇಕಾಬಿಟ್ಟಿ ಸಮ್ಮೆಳನಾಧ್ಯಕ್ಷರನ್ನಾಗಿ ಮಾಡುವ ಸಂಪ್ರದಾಯ ಆರಂಭವಾಯಿತಲ್ಲದೆ ಸಾಹಿತಿಗಳು ಹಾರ ಪೋಟೋ ಪೇಟ ಸಣ್ಣಮೆರವಣಿಗೆಗೆ ಚಿತ್ತಾಗುತ್ತಾರೆ ಎಂಬ ಸತ್ಯ ಅರ್ಥ ಮಾಡಿಕೊಂಡ ಪಟ್ಟಭದ್ರ ಹಿತಾಸಕ್ತಿಗಳು ಅವರನ್ನು ಆಟಕ್ಕುಂಟು ಎಂಬಂತೆ ಬಳಸಿ ಕೊಳ್ಳುತ್ತಿದ್ದಾರೆ ಈಗಂತೂ ಸದಸ್ಯರ ಸಂಖ್ಯೆ ಹಲವು ಸಾವಿರಕ್ಕೆ ಏರಿಕೆಯಾಗಿದ್ದು ಯಾವುದೇ ಚುನಾವಣೆಗೂ ಕಡಿಮೆ ಇಲ್ಲದಂತೆ ಬಿರುಸು ಕಾಣಲಿದೆ ಇದರ ನಡುವೆ ಈಗಾಗಲೇ ತಯಾರಿನಡೆಸಿರುವವರ ಜೊತೆಯಲ್ಲಿ ಹೊಸಮುಖಗಳು ಕಣದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಲಿದ್ದು ಯಾರೂ ಸಹ ಜಾತಿ ಹೆಸರಿನಲ್ಲಿ ಕೆಲ ಗಾಡ್ ಫಾದರ್ ಗಳ ಕ್ರಪಾ ಕಟಾಕ್ಷದಲ್ಲಿ ಗೆಲ್ಲಲು ಸಾಧ್ಯವಿಲ್ಲ ಅದೇರೀತಿ ಯಾರು ಯಾರನ್ನು ಗೆಲ್ಲಿಸಲು ಸಾಧ್ಯವಿಲ್ಲ ಸೋಲಿಸಲೂ ಸಾಧ್ಯವಿಲ್ಲ ಏಕೆಂದರೆ ಜನ ಬುದ್ದಿವಂತರು ಸಾಧ್ಯವಾದಷ್ಟು ಸರಕಾರಿ ನೌಕರರು ಸಂಘಸಂಸ್ಥೆಗಳಲ್ಲಿ ಪದಾಧಿಕಾರಿಗಳಾಗುವುದನ್ನೆ ಕಾಯಕವನ್ನಾಗಿಸಿಕೊಂಡವರು ಸಾಹಿತ್ಯದ ಗಂಧಗಾಳಿ ಇಲ್ಲದೆ ಅಧಿಕಾರಿಗಳು ರಾಜಕಾರಣಿಗಳ ಮುಂದೆ ಪೋಸ್ ಕೊಡುವವರ ಬಗ್ಗೆ ಪರಿಷತ್ತಿನ ಸದಸ್ಯರಿಗೆ ಅಸಹ್ಯ ಉಂಟಾಗಿದ್ದು ಯುವಕರ ಬಗ್ಗೆ ಅದರಲ್ಲಿಯೂ ಸಾಹಿತ್ಯ ಹಾಗೂ ಸಂಸ್ಕ್ರತಿಯ ಬಗ್ಗೆ ಅರಿವಿರುವವರೆಡೆ ಒಲವು ವ್ಯಕ್ತವಾಗಿದೆ ಒಟ್ಟಾರೆ ಪರಿಷತ್ತಿನ ಚುನಾವಣೆ ಮುಂದಿನ ದಿನದಲ್ಲಿ ಕುತೂಹಲ ಕೆರಳಸಲಿದೆ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ರೈತ ದಿನ ಆಚರಣೆ-ಸಾವಯವ ಕೃಷಿ ಪದ್ಧತಿಗೆ ಸಲಹೆ.

👇👇👇👇👇👇👇👇👇👇👇👇👇 ರೈತ ದಿನಾಚರಣೆ https://youtube.com/shorts/EGX4c_IVzY8?si=erkB19_6MH0KmBG6 ಮೊಸಳೆಹೊಸಹಳ್ಳಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ರಾಷ್ಟ್ರೀಯ ರೈತರ ದಿನದ ಅಂಗವಾಗಿ ಸಾವಯವ ಕೃಷಿ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಪುಣ್ಯಭೂಮಿ ಪರಿಸರ ಪ್ರಶಸ್ತಿ ಮತ್ತು ಶ್ರೇಷ್ಠ ಕೃಷಿಕ ಪ್ರಶಸ್ತಿ ಪುರಸ್ಕೃತರಾದ ಕಟ್ಟಾಯ ಹೋಬಳಿಯ ಬ್ಯಾಡರಹಳ್ಳಿಯ ಸಾವಯವ ಕೃಷಿಕರು, ಪ್ರಗತಿಪರ ರೈತರು ಮತ್ತು ಪಾರಂಪರಿಕ ವೈದ್ಯರಾದ ಶ್ರೀಯುತ ರವಿಶಂಕರ್ ಅವರು ಆಗಮಿಸಿದ್ದರು. ಸಂಸ್ಥೆಯಲ್ಲಿ ರೈತರಿಂದ ಗಿಡ ನೆಡುವುದರ ಮೂಲಕ ರೈತರ ದಿನವನ್ನು ಉದ್ಘಾಟಿಸಲಾಯಿತು. ಸಾವಯವ ಕೃಷಿಯನ್ನು ಉದ್ದೇಶಿಸಿ ಮಾತನಾಡಿದ ಇವರು ವಿದ್ಯಾರ್ಥಿಗಳಿಗೆ ಸಾವಯವ ಕೃಷಿಯ ಕ್ರಮಗಳು, ಆರೋಗ್ಯಕರ ಪ್ರಯೋಜನಗಳನ್ನು ವಿವರಿಸುತ್ತಾ, ಬೆಳೆಗೆ ಯಾವುದೇ ರಾಸಾಯನಿಕ ಗೊಬ್ಬರಗಳು, ಕೀಟನಾಶಕಗಳನ್ನು ಬಳಸದೇ ಕೇವಲ ಹಸುವಿನ ಸಗಣಿ ಮತ್ತು ಗಂಜುಳದಿಂದ ರಸಗೊಬ್ಬರ ಮತ್ತು ಸಾವಯವ ಕೀಟನಾಶಕವನ್ನು ತಯಾರಿಸಿ ಮಣ್ಣಿನ ಫಲವತ್ತತೆಯನ್ನು ಹೇಗೆ ಹೆಚ್ಚಿಸುವುದು ಮತ್ತು ಯಾವ ಕಾಲ, ನಕ್ಷತ್ರ, ಹವಾಮಾನ ಮತ್ತು ಮಾಸಕ್ಕನುಗುಣವಾಗಿ ಯಾವ ಬೆಳೆ ಬೆಳೆಯಬೇಕೆಂಬುದನ್ನು ರೈತರು ಸೂಕ್ತವಾಗಿ ಅರಿತಿರಬೇಕು ಮತ್ತು ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಗೊಳಿಸಿಕೊಳ್ಳ

ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನ ಆಚರಣೆ.

ಹಾಸನ ತಾಲ್ಲೂಕಿನ ಮೊಸಳೆಹೊಸಹಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕದ ವತಿಯಿಂದ ರೆಡ್ ರಿಬ್ಬನ್ ಕ್ಲಬ್ ಸಹಯೋಗದೊಂದಿಗೆ, ವಿಶ್ವ ಏಡ್ಸ್ ದಿನದ ಪ್ರಯುಕ್ತ ಸಂಸ್ಥೆಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.. . ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಾಸನ ಜಿಲ್ಲಾ ಏಡ್ಸ್ ಪ್ರಿವೆನ್ಷನ್ ಮತ್ತು ಕಂಟ್ರೋಲ್ ಘಟಕದ ಸೂಪರ್ವೈಸರ್ ಶ್ರೀಯುತ ರವಿಕುಮಾರ್ ವಿ. ಬಲ್ಲೇನಹಳ್ಳಿ ಯವರು ಮತ್ತು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀಯುತ ನಾಗೇಶ್ ರವರು ಹೆಚ್.ಐ.ವಿ. ಸೋಂಕಿನ ಬಗ್ಗೆ ವಿದ್ಯಾರ್ಥಿಗಳಿಗೆ ಸಂಕ್ಷಿಪ್ತ ಮಾಹಿತಿ ನೀಡುವ ಮೂಲಕ ಜಾಗೃತಿ ಮೂಡಿಸಿದರು.  ಮುಂದುವರೆದು ಸಂಸ್ಥೆಯಲ್ಲಿ ಏಡ್ಸ್/ಹೆಚ್.ಐ.ವಿ. ಸೋಂಕಿನ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸವಾಗಿ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಪೋಸ್ಟರ್ ಡಿಸೈನ್ ಮತ್ತು ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು ಮತ್ತು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು ಸಂಸ್ಥೆಯ ಎನ್.ಎಸ್.ಎಸ್. ಅಧಿಕಾರಿಗಳಾದ ಶ್ರೀಯುತ ವೀರಭದ್ರಸ್ವಾಮಿ ಕೆ.ಎಂ. ರವರು, ಎನ್.ಎಸ್.ಎಸ್. ಚಟುವಟಿಕೆಯ ಅಡಿಯಲ್ಲಿ ವಿದ್ಯಾರ್ಥಿಗಳು ಸುತ್ತಮುತ್ತಲ, ಮೂರು ಗ್ರಾಮಗಳನ್ನು ದತ್ತು ಪಡೆದು ಸ್ವಚ್ಛತೆ, ಆರೋಗ್ಯ, ಉನ್ನತ ಶಿಕ್ಷಣ ಮುಂತಾದ ವಿಷಯಗಳ ಬಗ್ಗೆ ಜಾಗೃತಿ

ಹಾಸನ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗಾವಕಾಶಗಳು.

ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ನೆಲೆಸಿರುವ ಗೃಹಿಣಿಯರು, ನಿವೃತ್ತ ಅಧಿಕಾರಿಗಳು /ನೌಕರರು ಮತ್ತು ನಿರುದ್ಯೋಗಿಗಳಿಗೆ ಆರ್ಥಿಕ ವಲಯದಲ್ಲಿ ಹೂಡಿಕೆ ಇಲ್ಲದೆ ವೃತ್ತಿ ಅವಕಾಶಗಳು / ವ್ಯಾಪಾರ ಅವಕಾಶಗಳು  ಪುರುಷ ಮತ್ತು  ಮಹಿಳೆಯರಿಗೆ   ವಯಸ್ಸಿನ ಮಿತಿ: - 25 ರಿಂದ 65 ವರ್ಷಗಳು.  ದಯವಿಟ್ಟು ನಿಮ್ಮ ವಿವರಗಳನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ.  freelanceadvertisingthassan@gmail.com  ಅಥವಾ  ಸಂಪರ್ಕಿಸಿ  7090899728 Career opportunities /business opportunities with out an investments in financial sector for housewives ,retired officials /employees and unemployed persons residing in Hassan district, Karnataka state India For both male and female. Age limit:- 25 to 65 years. Please send your details to below email id. freelanceadvertisingathassan@gmail.com Or  Contact  070908 99728