.
ನೇಕಾರ್ ಸನ್ಮಾನ್ ಯೋಜನೆ ಮೂಲಕ ಸಹಾಯಧನ: ಶ್ರೀಮಂತ ಬಾಬಾ ಸಾಹೇಬ ಪಾಟೀಲ
ಹಾಸನ.ಸೆ.10(ಕರ್ನಾಟಕ ವಾರ್ತೆ):- ಕೋವಿಡ್-19 ಲಾಕ್ಡೌನ್ ನಿಂದ ಕೈಮಗ್ಗ ಮತ್ತು ಜವಳಿ ನೇಕಾರರು ಸಕಷ್ಟದಲ್ಲಿದ್ದು, ಸಹಾಯ ಮಾಡುವ ಉದ್ದೇಶದಿಂದ ಮುಖ್ಯ ಮಂತ್ರಿಯವರೊಂದಿಗೆ ಮಾತನಾಡಿ ನೇಕಾರ್ ಸನ್ಮಾನ್ ಯೋಜನೆ ಮೂಲಕ ಪ್ರತಿ ವರ್ಷ 2,000 ರೂ ಸಹಾಯಧನ ನೀಡಲಾಗುತ್ತಿದೆ ಎಂದು ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಶ್ರೀಮಂತ ಬಾಬಾ ಸಾಹೇಬ ಪಾಟೀಲ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ 41 ಸಾವಿರ ಜನ ಅರ್ಜಿ ಸಲ್ಲಿಸಿದ್ದು 8.32 ಕೋಟಿ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗಿದೆ ಹಾಗೂ ವಿದ್ಯುತ್ ಮಗ್ಗಗಳಲ್ಲಿಯೂ ಸಹ 1.25 ಲಕ್ಷ ಜನರಿದ್ದು, 40 ಸಾವಿರ ಜನರು 8.13 ಕೋಟಿ ಹಣವನ್ನು ಜಮಾ ಮಾಡಲಾಗಿದೆ ಎಂದರು.
ಅರ್ಜಿ ಸಲ್ಲಿಕೆಯಲ್ಲಿ ಹೆಚ್ಚು ಬಾಕಿ ಉಳಿದಿರುವ ಜಿಲ್ಲೆಗೆ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸಿ ನೇಕಾರು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸರಳೀಕರಿಸಿ ನೇಕಾರರ ಖಾತೆಗೆ ನೇರವಾಗಿ ಜಮಾ ಆಗುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರಾದ ಶ್ರೀಮಂತ ಬಾಬಾ ಸಾಹೇಬ ಪಾಟೀಲ ಅವರು ತಿಳಿಸಿದರು.
ಸಂಕಷ್ಟದ ಸಮಯದಲ್ಲಿ ನೇಕಾರರು ಸಾಲ ಸೌಲಭ್ಯ ಪಡೆದಿದ್ದು, 1 ಲಕ್ಷದ ವರೆಗೆ ಸಾಲ ಮನ್ನ ಮಾಡಲಾಗಿದ್ದು, ಶೇ. 80 ರಷ್ಟು ಮಂದಿ ಲಾಭ ಪಡೆದಿದ್ದಾರೆ ಹಾಗೆಯೇ ಕೋವಿಡ್ ಸಂದರ್ಭದಲ್ಲಿ ಹಲವಾರು ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದು, ಅಂತಹವರ ಕುಟುಂಬಕ್ಕೆ 2 ಲಕ್ಷ ರೂ. ಸಹಾಯಧನ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಅಲ್ಪ ಸಂಖ್ಯಾತರಲ್ಲಿ ಹೆಚ್ಚು ಮಂದಿ ಶಿಕ್ಷಣದಿಂದ ವಂಚಿತರಾಗಿದ್ದಾರೆ ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿದರೆ ಭೌಧ್ಧಿಕವಾಗಿ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಾರೆ. ಹಾಗಾಗಿ ಅವರಿಗಾಗಿ ಎಲ್ಲಾ ಜಿಲ್ಲೆಗಳಲ್ಲಿಯೂ ಐ.ಟಿ.ಐ ಕಾಲೇಜು ಮತ್ತು ಒಂದು ವಿಭಾಗಕ್ಕೆ ಒಂದು ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸುವ ಯೋಜನೆ ರೂಪಿಸಲಾಗಿದೆ ಎಂದು ಶ್ರೀಮಂತ ಬಾಬಾ ಸಾಹೇಬ ಪಾಟೀಲ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಗಾರ್ಮೆಂಟ್ಸ್ಗಳು ಇರುವುದರಿಂದ ಟೆಕ್ಸ್ಟೈಲ್ ಉದ್ಯಮಗಳು ಕಡಿಮೆಇವೆ ಹಾಗಾಗಿ ಜಿಲ್ಲೆಯಲ್ಲಿ ಹೊಸ ಯುನಿಟ್ ಸ್ಥಾಪಿಸಲು ಮೆಗಾ ಪ್ರೋಜೆಕ್ಟ್ ಬರಬೇಕು ಎಂದು ಸಚಿವರು ಹೇಳಿದರು.
*************
ಸಂಪಾದಕರು
ಹರೀಶ್ ಹೆಚ್ ಆರ್
ಕೋಟೆ
-
ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ನೆಲೆಸಿರುವ ಗೃಹಿಣಿಯರು, ನಿವೃತ್ತ ಅಧಿಕಾರಿಗಳು /ನೌಕರರು ಮತ್ತು ನಿರುದ್ಯೋಗಿಗಳಿಗೆ ಆರ್ಥಿಕ ವಲಯದಲ್ಲಿ ಹೂಡಿಕೆ ಇಲ್ಲದೆ ವೃತ್ತಿ ಅವಕಾಶಗಳು / ವ್ಯಾಪಾರ ಅವಕಾಶಗಳು ಪುರುಷ ಮತ್ತು ಮಹಿಳೆಯರಿಗೆ ವಯಸ್ಸಿನ ಮಿತಿ: - 25 ರಿಂದ 65 ವರ್ಷಗಳು. ದಯವಿಟ್ಟು ನಿಮ್ಮ ವಿವರಗಳನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ. freelanceadvertisingthassan@gmail.com ಅಥವಾ ಸಂಪರ್ಕಿಸಿ ವಾಟ್ಸಾಪ್ ಸಂದೇಶಗಳು ಮಾತ್ರ 7090899728 Career opportunities /business opportunities with out an investments in financial sector for housewives ,retired officials /employees and unemployed persons residing in Hassan district, Karnataka state India For both male and female. Age limit:- 25 to 65 years. Please send your details to below email id. freelanceadvertisingathassan@gmail.com Or Contact WhatsApp messages only 070908 99728
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ
Vimarsha.info