ವಿಷಯಕ್ಕೆ ಹೋಗಿ

ಶತನಾಟಕ ಸಾರ್ವಭೌಮ ಬೇಲೂರು ಕೃಷ್ಣಮೂರ್ತಿ ಇನ್ನಿಲ್ಲ.

ಸಂಪಾದಕರು 

ಹರೀಶ್ ಹೆಚ್ ಆರ್ 
ಕೋಟೆ 


*ಶತನಾಟಕ* *ಸಾರ್ವಭೌಮ ,ಕಾದಂಬರಿಕಾರರು* *,ವಿಚಾರವಾದಿಗಳು,ಸಿನಿಮಾ* *ನಿರ್ದೇಶಕರು ,* *ನಿರ್ಮಾಪಕರು,ಕರ್ನಾಟಕ* *ರಾಜ್ಯೋತ್ಸವ ಪ್ರಶಸ್ತಿ* *ಪುರಸ್ಕೃತರು, ಅನೇಕ ರಾಜ್ಯ* *ಮಟ್ಟದ* *ಪ್ರಶಸ್ತಿಗಳು,ಪುರಸ್ಕಾರಗಳು* *ಸಂದಿವೆ.ನೇರ* *ನುಡಿಯ,* *ನೇರ ನಡೆಯ,ಬಿಚ್ಚುಮನಸ್ಸಿನ* *ಹೃದಯವಂತ ಸಾಹಿತಿ* , ತಮ್ಮ ದೇಹವನ್ನೇ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿಗೆ ದಾನ ಮಾಡಿದ ಪರಮಧಾನಿ,ತೊಂಭತ್ತು ವರ್ಷಗಳ ಸಾರ್ಥಕ ಬದುಕು ಬಾಳಿದ ಮಾನವತಾವಾದಿ, ನಮ್ಮ ನಡುವಿನ ಸಾಹಿತ್ಯ ಪರಂಪರೆಯ ಮಹಾ ಕೊಂಡಿ ಇನ್ನಿಲ್ಲ. 
ಇಂದು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಉಸಿರೆಳಿದಿದ್ದಾರೆ.



ನಾಟಕ ಸಾರ್ವಭೌಮ - ಬೇಲೂರು ಕೃಷ್ಣಮೂರ್ತಿ

ಪರಿಚಯ ಲೇಖನ-ಕೊಟ್ರೇಶ್.ಎಸ್. ಉಪ್ಪಾರ್.

ನಾಟಕ ಎಂದಾಕ್ಷಣ ನಮಗೆ ದುತ್ತನೇ ನೆನಪಿಗೆ ಬರುವುದು ಬೇಲೂರು ಕೃಷ್ಣಮೂರ್ತಿಯವರು.
ಕನ್ನಡ ಸಾರಸ್ವತ ಲೋಕದಲ್ಲಿ ‘ನಾಟಕ’ ಪ್ರಕಾರಕ್ಕೆ ಭದ್ರ ಅಡಿಪಾಯ ಹಾಕಿದವರಲ್ಲಿ ಬೇಲೂರು ಕೃಷ್ಣಮೂರ್ತಿಯವರು ಮುಂಚೂಣಿಯಲ್ಲಿ ನಿಲ್ಲುತ್ತಾರೆ ಎಂದರೆ ಅತಿಶಯೋಕ್ತಿಯಾಗಲಾರದು.
ಇವರು 1931 ಆಗಸ್ಟ್ 08 ರಂದು ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಮಾದನಹಳ್ಳಿ ಗ್ರಾಮದ ಅನಂತರಾಮಯ್ಯ ಮತ್ತು ಲಕ್ಷ್ಮೀದೇವಮ್ಮ ಬ್ರಾಹ್ಮಣ ದಂಪತಿಗಳ ಪುತ್ರರಾಗಿ ಜನಿಸಿದರು.
110 ನಾಟಕಗಳು, 30 ಇತರ ಕೃತಿಗಳನ್ನು ಸೇರಿದಂತೆ ಸುಮಾರು 140ಕ್ಕೂ ಹೆಚ್ಚು ಕೃತಿರತ್ನಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ ಕೃಷ್ಣಮೂರ್ತಿಯವರ ವ್ಯ್ಕತಿತ್ವ ಅಸಮಾನ್ಯವಾದುದು. ಹಾಸನ ಜಿಲ್ಲೇಗಷ್ಟೇ ಸೀಮಿತವಾಗದೆ ಕನ್ನಡ ಮನಸ್ಸುಗಳೆಲ್ಲೆಲ್ಲಿವೆಯೋ ರಾಜ್ಯ, ಅಂತರರಾಜ್ಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಇವರ ನಾಟಕಗಳು ಪ್ರದರ್ಶನ ಕಂಡಿವೆ.
1952 ರಿಂದ ವೃತ್ತಿಯಲ್ಲಿ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ ಇವರು ಸಹಸ್ರಾರು ಶಿಷ್ಯವೃಂದವನ್ನು ಹೊಂದಿದ್ದಾರೆ. ಒಳ್ಳೆಯ ನಟರೂ ಆಗಿದ್ದ ಇವರು ನಿರ್ದೇಶಕರಾಗಿಯೂ ಕಾರ್ಯಪ್ರವೃತ್ತಗೊಂಡು ಯಶಕಂಡಿದ್ದಾರೆ.
ದಿ. ಮುಸುರಿಕೃಷ್ಣಮುರ್ತಿಯವರು ಸ್ಥಾಪಿಸಿದ್ದ ದತ್ತಾತ್ರೇಯ ನಾಟಕ ಮಂಡಳಿಯಲ್ಲಿ ಸಹ ನಟರಾಗಿ ಅಭಿನಯಿಸುತ್ತಾ ರಂಗಭೂಮಿ ಹೊರ-ಒಳವುಗಳನ್ನು ಅರಿತು ತನ್ಮತೆಯಿಂದ ಮೈಗೂಡಿಸಿಕೊಂಡರು. ನಂತರ ‘ನಾಟಕ’ ರಚನೆಕಡೆಗೆ ವಾಲಿದ ಇವರ ಮನಸ್ಸು ಉತ್ಕೃಷ್ಟ ಸಾಹಿತ್ಯ ಸೃಷ್ಠಿಸುವಲ್ಲಿ ಹಿಂದೆ ಬೀಳಲಿಲ್ಲ. ತತ್ಪರಿಣಾಮವಾಗಿಯೇ 1962 ರಲ್ಲಿ ‘ಬಲಿದಾನ’ ಎಂಬ ನಾಟಕ ಪ್ರಕಟವಾಯಿತು. ಅಂದಿನಿಂದ ಇಂದಿನವರೆಗೆ ಸುಮಾರು 110 ನಾಟಕಗಳನ್ನು ಕಟ್ಟಿಕೊಟ್ಟಿ ಹೃದಯ ಶ್ರೀಮಂತಿಕೆ ಕೃಷ್ಣಮೂರ್ತಿಯವರದು.
‘ತ್ಯಾಗಿ’ ಲಚ್ಚಿ, ಕಂಬನಿ, ಆಹುತಿ ಎಂಬ ನಾಟಕಗಳು ಬೇಲೂರು ಕೃಷ್ಣಮೂರ್ತಿಯವರಿಗೆ ಭದ್ರವಾದ ನೆಲೆ ತಂದುಕೊಟ್ಟವು. ಸಮಾಜದಲ್ಲಿ ನಡೆಯುತ್ತಿರುವ ಅನೀತಿ, ಅನ್ಯಾಯ, ಅತ್ಯಾಚಾರ, ಅಟ್ಟಹಾಸ, ಭ್ರಷ್ಟಚಾರ, ಕಂದಾಚಾರಗಳೇ ಇವರ ನಾಟಕದ ವಿಷಯ ವಸ್ತುಗಳಾಗಿವೆ. ಇವುಗಳಿಂದ ಸಮಾಜ ಯಾವ ರೀತಿ ಅಧೋಗತಿಗೆ ಈಡಾಗುತ್ತಿದೆ ಎಂದು ನವಿರಾಗಿ ಬಿಡಿಸಿಟ್ಟಿದ್ದಾರೆ.
ಇವರ ಹಲವಾರು ನಾಟಕಗಳು ನೂರಾರು ಪ್ರದರ್ಶನ ಕಂಡಿವೆ. ಕೃತಿಗಳು ಸಹ ಸಾಕಷ್ಟು ಪುನರ್‍ಮುದ್ರಣ ಕಂಡಿವೆ. ಕೇವಲ ನಾಟಕಕ್ಕೆ ಮಾತ್ರ ಸೀಮಿತವಾಗದೆ ಕಾದಂಬರಿ, ಬರಹಗಳನ್ನೊಳಗೊಂಡಂತೆ ಸುಮಾರು 30 ಕೃತಿಗಳನ್ನು ನೀಡಿದ್ದಾರೆ.
2010 ಮಾರ್ಚ್ 9 ಮತ್ತು 10 ರಂದು ಬೇಲೂರಿನಲ್ಲಿ ಹಾಸನ ಜಿಲ್ಲಾ 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದು ಬೇಲೂರು ಕೃಷ್ಣಮೂರ್ತಿಯವರ ವ್ಯಕ್ತಿತ್ವ ಪ್ರಬುದ್ದಮಾನವಾದುದು. ಯಾವುದೇ ಆಡಂಬರ, ಅಹಂಕಾರಗಳಿಲ್ಲದ ಸಹೃದಯಿ, ಸರಳ ಜೀವನ ಉದಾತ್ತ ಚಿಂತನೆಯ ಮೂರ್ತಿ ಎಂದರೆ ಅತಿಶಯೋಕ್ತಿಯಾಗಲಾರದು. 
ರಂಗಭೂಮಿಗೆ ಮಾತ್ರ ಸೀಮಿತವಾಗದೆ ಇವರ ಸಾಹಿತ್ಯ ಕನ್ನಡ ಚಲನಚಿತ್ರರಂಗದತ್ತಲೂ ಮುಖಮಾಡಿ ನೋವು ನಲಿವುಗಳನ್ನು ಅನುಭವಿಸಿದೆ. ಬೇಲೂರು ಫಿಲಂಸ್ ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ ಕೃಷ್ಣಮೂರ್ತಿಯವರು ಅವರದೇಯಾದ ‘ಕಂಬನಿ’ ಎಂಬ ನಾಟಕವನ್ನು ‘ತೀರದ ಬಯಕೆ’ ಎಂಬ ಚಲನಚಿತ್ರ ನಿರ್ಮಿಸಿ ಹೊರತಂದಿದ್ದಾರೆ. ಜುಗ್ಗಾಸ್ವಾಮಿ ಜುಗ್ಗಾ, ಬಾಡಿಗೆ ಬಿಡಾರ, ಪೊದಕುಲಡಾಯಿ, ಜ್ವಾಲೆ ಹೀಗೆ ಹತ್ತಾರು ಕಥೆಗಳನ್ನು ಕಿರುತೆರೆಗೆ ತಂದಿದ್ದಾರೆ.
1972ರಲ್ಲಿ ‘ತೀರದ ಬಯಕೆ’ ಚಲನಚಿತ್ರ ನಿರ್ಮಿಸಲು ಪ್ರಾರಂಭಿಸಿ 1982 ರಲ್ಲಿ ಚಿತ್ರ ಬಿಡುಗಡೆಮಾಡಿದರು. ಆಗಿನ ಕಾಲದಲ್ಲಿಯೇ 15 ಲಕ್ಷ ರೂ ಸಾಲ ಮಾಡಿ ಸಿನಿಮಾ ಮಾಡಿ ಕೈ ಸುಟ್ಟುಕೊಂಡರು. ಸರ್ಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಕರಾಗಿದ್ದ ಇವರ ವರಮಾನ ಅಷ್ಟಕ್ಕಷ್ಟೇ. ಮಾಡಿದ ಸಾಲ ತೀರಿಸಲು ಸುಮಾರು ದಶಕಗಳೇ ಬೇಕಾಯಿತಂತೆ. ಆದರೆ ಸಾಲ ಕೊಟ್ಟವರಿಗೆ ಯಾರಿಗೂ ಒಂದು ಪೈಸೆ ಮೋಸ ಮಾಡಲಿಲ್ಲವೆಂದು ಸಂತಸದಿಂದಲೇ ಹೇಳುತ್ತಾರೆ.
ಇವರೊಬ್ಬ ಅಪ್ಪಟ ನಾಸ್ತಿಕವಾದಿ. ಮೂಡನಂಬಿಕೆ, ಮಾಟ-ಮಂತ್ರ ತಂತ್ರದ ವಿರುದ್ದ ಧ್ವನಿ ಎತ್ತಿದ್ದಾರೆ. ವಿಜ್ಞಾನ ಮಾತ್ರ ಸತ್ಯ ಉಳಿದದ್ದು ಮಿಥ್ಯ ಎಂಬ ಸಿದ್ದಾಂತವನ್ನು ಬಲವಾಗಿ ನಂಬಿದವರು. ಇವರ ಸಾಹಿತ್ಯ, ಶಿಕ್ಷಣ, ರಂಗಭೂಮಿ, ಸಾಮಾಜಿಕ ಸಂಘಟನೆ ಸೇವೆಗಾಗಿ ಹಲವಾರು ಪ್ರಶಸ್ತಿ ಪುರಸ್ಕಾರಗಳು ಅರಸಿ ಬಂದಿವೆ.
1993 ರಲ್ಲಿ ಕರ್ನಾಟಕ ಅಕಾಡೆಮಿಯ ಪ್ರಶಸ್ತಿ, 2005ರಲ್ಲಿ ದೆಹಲಿಯಲ್ಲಿ ನಡೆದ 22ನೇಯ ರಾಷ್ಟ್ರೀಯ ಕನ್ನಡ ಸಮ್ಮೇಳನದಲ್ಲಿ ಸನ್ಮಾನ, ತುಮಕೂರಿನ ಅಭಿಮಾನಿಗಳು ರಜತ ಕಿರೀಟದೊಂದಿಗೆ ‘ನಾಟಕ ಸಾರ್ವಭೌಮ’ ಎಂಬ ಕೃತಿ ಅರ್ಪಿಸಿ ಸನ್ಮಾನಿಸಿದ್ದಾರೆ. ಹೀಗೇ ಇವರ ಸಾಧನೆಯ ಪಟ್ಟಿ ಬೆಳೆಯುತ್ತಾ  ಹೋಗುತ್ತದೆ, ಈಗ ಆ ಮಹಾನ್  ಚೈತಾತ್ಮ   ಚಿರನಿದ್ರೆಗೆ ಜಾರಿದೆ. 

   *ಕಲ್ಲಹಳ್ಳಿ ಹರೀಶ  ಜಿಲ್ಲಾ ಗೌರವ ಕಾರ್ಯದರ್ಶಿ ಕನ್ನಡ ಸಾಹಿತ್ಯ ಪರಿಷತ್ತು ,ಹಾಸನ.* ಮತ್ತು ಕನ್ನಡ ಸಾಹಿತ್ಯ ಪರಿಷದ್ ನ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರುಗಳು,  ಸಾಹಿತ್ಯಾಭಿಮಾನಿಗಳು ,ರಂಗಭೂಮಿ ಕಲಾವಿದರುಗಳು ಮತ್ತು ತಂತ್ರಜ್ಞರು ಹಾಗೂ ಸಹಸ್ರಾರು ಶ್ರಿಯುತರ ಅಭಿಮಾನಿಗಳು  ಅವರ ಆತ್ಮಕ್ಕೆ ಶಾಂತಿ ಕೋರಿ ಕಂಬನಿ ಮಿಡಿದಿದ್ದಾರೆ.


















ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹಾಸನ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗಾವಕಾಶಗಳು.

ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ನೆಲೆಸಿರುವ ಗೃಹಿಣಿಯರು, ನಿವೃತ್ತ ಅಧಿಕಾರಿಗಳು /ನೌಕರರು ಮತ್ತು ನಿರುದ್ಯೋಗಿಗಳಿಗೆ ಆರ್ಥಿಕ ವಲಯದಲ್ಲಿ ಹೂಡಿಕೆ ಇಲ್ಲದೆ ವೃತ್ತಿ ಅವಕಾಶಗಳು / ವ್ಯಾಪಾರ ಅವಕಾಶಗಳು  ಪುರುಷ ಮತ್ತು  ಮಹಿಳೆಯರಿಗೆ   ವಯಸ್ಸಿನ ಮಿತಿ: - 25 ರಿಂದ 65 ವರ್ಷಗಳು.  ದಯವಿಟ್ಟು ನಿಮ್ಮ ವಿವರಗಳನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ.  freelanceadvertisingthassan@gmail.com  ಅಥವಾ  ಸಂಪರ್ಕಿಸಿ  ವಾಟ್ಸಾಪ್ ಸಂದೇಶಗಳು ಮಾತ್ರ  7090899728  Career opportunities /business opportunities with out an investments in financial sector for housewives ,retired officials /employees and unemployed persons residing in Hassan district, Karnataka state India For both male and female. Age limit:- 25 to 65 years. Please send your details to below email id. freelanceadvertisingathassan@gmail.com Or  Contact  WhatsApp messages only 070908 99728

ಉತ್ತಮ ಫಲಿತಾಂಶ , ಹಣ ಉಳಿತಾಯ.

ನಾನು ನೆಟ್‌ಸರ್ಫ್ ಡೈರೆಕ್ಟ್‌ನೊಂದಿಗೆ ಕೆಲಸ ಮಾಡುತ್ತಿದ್ದೇನೆ. ನಾನು ನೆಟ್ಸರ್ಫ್ ಉತ್ಪನ್ನಗಳನ್ನು ನಿಯಮಿತವಾಗಿ ಬಳಸುತ್ತಿದ್ದೇನೆ. ನಾನು ನಿಮಗೆ ಈ ಉತ್ಪನ್ನಗಳನ್ನು ಬಲವಾಗಿ ಶಿಫಾರಸು ಮಾಡುತ್ತೇವೆ. 'NETSURF DIRECT' 5 ವಿವಿಧ ವಿಭಾಗಗಳಲ್ಲಿ 90 ಕ್ಕೂ ಹೆಚ್ಚು ಗಿಡಮೂಲಿಕೆ ಉತ್ಪನ್ನಗಳನ್ನು ನೀಡುತ್ತದೆ ಅಂದರೆ ಆರೋಗ್ಯ ರಕ್ಷಣೆ, ವೈಯಕ್ತಿಕ ಆರೈಕೆ, ಬಣ್ಣ ಸೌಂದರ್ಯವರ್ಧಕಗಳು, ಗೃಹ ಆರೈಕೆ ಮತ್ತು ಕೃಷಿ. ಈ ಉತ್ಪನ್ನಗಳನ್ನು ಭಾರತದಾದ್ಯಂತ 2.5 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ನಂಬಿದ್ದಾರೆ. ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೆಟ್‌ಸರ್ಫ್ ವರ್ಲ್ಡ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ ಮತ್ತು ಎಲ್ಲಾ ನೆಟ್‌ಸರ್ಫ್ ಉತ್ಪನ್ನಗಳ ಮೇಲೆ ಅತ್ಯಾಕರ್ಷಕ ಕೊಡುಗೆಗಳನ್ನು ಪಡೆದುಕೊಳ್ಳಿ. ಒಮ್ಮೆ ನೀವು ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿದ ನಂತರ, ನನ್ನ ಮೊಬೈಲ್ ಸಂಖ್ಯೆಯನ್ನು (8453502625) "ಉಲ್ಲೇಖಿಸಿದವರು" ನಲ್ಲಿ ನಮೂದಿಸಿ ಮತ್ತು ನಿಮ್ಮ 1ನೇ ಖರೀದಿಯಿಂದ ಪುನಃ ಪಡೆದುಕೊಳ್ಳಬಹುದಾದ ರೂ.100 ವೋಚರ್ ಅನ್ನು ಪಡೆಯಿರಿ. Andriod ಬಳಕೆದಾರರು: https://bit.ly/3SxEkfB ಆಪಲ್ ಬಳಕೆದಾರರು: https://apple.co/3Ace2JT   I am working with Netsurf Direct. I am using Netsurf products regularly. I strongly recommend these products to you .   'NETSURF DIRECT...

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ (92) ವಿಧಿವಶ. ನಾಳೆ ಅಂತ್ಯಕ್ರಿಯೆ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ:- ತಡ ರಾತ್ರಿ ನಿಧನರಾಗಿರುವ ಎಸ್.ಎಂ ಕೃಷ್ಣ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ ಕೃಷ್ಣ ಇತ್ತೀಚೆಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ  ಎಸ್.ಎಂ.ಕೃಷ್ಣ (92) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ    ಕೊನೆಯುಸಿರೆಳೆದಿದ್ದಾರೆ. ಎಸ್​ಎಂ ಕೃಷ್ಣ ಅವರು ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಮಂಡ್ಯದ ಸೋಮನಹಳ್ಳಿಯಲ್ಲಿ 1932ರಲ್ಲಿ ಜನಿಸಿದ್ದ ಅವರು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದುಕೊಂಡಿದ್ದರು. ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಸ್ಪೀಕರ್ ಆಗಿಯೂ ಸೇವೆ ಸಲ್ಲಿಕೆ ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು. 1971 ರಿಂದ 2014ರವರೆಗೆ ವಿವಿಧ ಕಾಲಘಟ್ಟದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಗಿದ್ದರು. ನಾಳೆ ಎಸ್​​ಎಂ ಕೃಷ್ಣ ಅವರ ಅಂತ್ಯಕ್ರಿಯೆ; ಬೆಂಗಳೂರಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ.. ಫೋಟೋ ಕೃಪೆ :-ವಿಕಿಪೀ...