ವಿಷಯಕ್ಕೆ ಹೋಗಿ

ಇನ್ನೆಷ್ಟು ಅಮಾಯಕಿಯರು ಬಲಿಯಾಗಬೇಕು-ಕೋಟೆ ಕಾಲಂ

ವಿಮರ್ಶಾ -vimarsha

ಕೋಟೆ ಕಾಲಂ
ಲೇಖಕರು-ಹರೀಶ್ ಹೆಚ್ ಆರ್ (ಕೋಟೆ )

ದೇಶವನ್ನು ಮಾತೆಗೆ ಹೋಲಿಸುವ ಸಂಸ್ಕ್ರತಿ ಒಂದೆಡೆ ಮತ್ತೊಂದೆಡೆ ಜೀವನದಿಗಳನ್ನು ಹುಟ್ಟಿದ ಮಣ್ಣನ್ನು ತಾಯಿಯೆಂದು ಪೂಜಿಸುವ ಸಂಸ್ಕ್ರತಿ ಅದೂ ಇದೂ ಎಂದು ಹೆಣ್ಣನ್ನು ಪೂಜನೀಯ ವಾಗಿ ಕಾಣುತ್ತೇವೆ ಎಂದು ಎದೆಉಬ್ಬಿಸಿಕೊಂಡು ಹೇಳುವ ನಮ್ಮ ದೇಶದಲ್ಲಿ ನಡೆಯುವ ಅತ್ಯಾಚಾರ ಪ್ರಕರಣಗಳು ಇಡೀ ಜಗತ್ತನ್ನೆ ಆಗಾಗ್ಗೆ ಬೆಚ್ಚಿಬೀಳಿಸುತ್ತಿರುತ್ತವೆ
ಒಂದುಪ್ರಕರಣ ಮಾಸುವ ಮುನ್ನವೇ ಮತ್ತೊಂದು ಎಂಬಂತೆ ಪೈಶಾಚಿಕ ಅತ್ಯಾಚಾರ ಪ್ರಕರಣಗಳು ನಿಲ್ಲುವ ಲಕ್ಷಣ ಕಾಣದೆ ನಡೆಯುತ್ತಿರುವುದು ಇಡೀ ಸಮಾಜ ತಲೆತಗ್ಗಿಸುವಂತೆ ಮಾಡಿದೆ
ಉತ್ತರಪ್ರದೇಶದ ಹಾಥರಸ್ ನಲ್ಲಿ ದಲಿತ ಸಮುದಾಯಕ್ಕೆ ಸೇರಿದ ಯುವತಿ ಮನಿಷಾ ವಾಲ್ಮೀಕಿ ಯ ಮೇಲೆ ನಾಲ್ವರು ದುರುಳರು ಅತ್ಯಾಚಾರ ನಡೆಸಿ ಬರ್ಬರವಾಗಿ ಹತ್ಯೆಮಾಡಿದ ಪ್ರಕರಣ ಅತ್ಯಂತ ಖಂಡನೀಯ
ಇಂತಹ ಸಮಯದಲ್ಲಿಯೂ ಸಹ ದಲಿತ ಯುವತಿಯ ಸಾವಿನಲ್ಲಿಯೂ ಸತ್ಯವನ್ನು ಅದುಮಿಡುವ ಉತ್ತರ ಪ್ರದೇಶ ಸರಕಾರದ ಧೋರಣೆ ಹಾಗೂ ಅದರ ಹೆಸರಿನಲ್ಲಿ ನಡೆಯುತ್ತಿರುವ ರಾಜಕೀಯ ಲೆಕ್ಕಾಚಾರಗಳು ನೋವುತರುತ್ತವೆ
ತರಾತುರಿಯಲ್ಲಿ ರಾತ್ರಿಯೆ ಮನಿಷಾಳ ಶವವನ್ನು ಸುಟ್ಟಿದ್ದು ಉದ್ದೇಶಪೂರ್ವಕವಾಗಿ ಆಕೆಯ ಕುಟುಂಬಸ್ಥರನ್ನು ದೂರ ಇಟ್ಟಿದ್ದು ಆಕೆಯ ತಂದೆಯ ಮೇಲೆ ಪೊಲೀಸರು ಈಗಾಗಲೇ ನೀಡಿರುವ ಹೇಳಿಕೆಬದಲಿಸುವಂತೆ ಒತ್ತಡ ಹೇರುತ್ತಿರುವುದು ಪೊಲೀಸರು ಸರಕಾರವನ್ನು ಮುಜುಗರಕ್ಕೊಳಗಾಗದಂತೆ ಕಾಪಾಡುವ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಗಮವಾಗಿದೆ ಹಾಗು ಯೋಗಿ ಅಡಳಿತದಲ್ಲಿ ಇಂತಹ ಘಟನೆ ನಡೆಯದು ಎಂಬುದನ್ನು ತೋರ್ಪಡಿಸಲು ಹರಸಾಹಸ ಮಾಡಲಾಗುತ್ತಿದೆ
ಯುವತಿಯ ಮೇಲೆ ಅತ್ಯಾಚಾರವಾಗಿದೆ ಎಂದು ಶವಪರೀಕ್ಷೆ ಯಿಂದ ಸಾಬೀತಾಗಿಲ್ಲಾ ಅತ್ಯಾಚಾರದಿಂದಾದ ಗಾಯಗಳಿಂದ ಅಕೆ ಸಾವನ್ನಪ್ಪಿಲ್ಲ ಆಕೆ ಬೆನ್ನುಮೂಳೆ ಮುರಿದಿತ್ತು ಹಾಗೂ ಹ್ರದಯಾಘಾತವಾಗಿದೆ ಎಂದು ಜೊತೆಗೆ ರಕ್ತದ ಸೋಂಕು ಸಹ ಇತ್ತು ಎಂದು ಹೇಳುತ್ತಿರುವ ಉತ್ತರ ಪ್ರದೇಶದ ಪೊಲೀಸರು ತಡರಾತ್ರಿ ತಾವೇ ಅಕೆಯ ಶವವನ್ನು  ಸಂಸ್ಕಾರದ ಹೆಸರಿನಲ್ಲಿ ಸುಟ್ಟು ಮರು ಶವಪರೀಕ್ಷೆ ನಡೆಸಲು ಅವಕಾಶವೇ ಇಲ್ಲದಂತೆ ಮಾಡಿರುವುದಕ್ಕೆ ಉತ್ತರಿಸುವುದಿಲ್ಲ
ಜಾತಿ ,ರಾಜಕೀಯ ,ಧರ್ಮ ,ಪಕ್ಷ ಈ ವಿಚಾರಗಳೇನೇ ಇರಲಿ ಅದರೆ ಅಮಾಯಕ ಹೆಣ್ಣುಮಗಳ ಮೇಲೆ ನಡೆದ ಹೇಯ ಕ್ರತ್ಯವನ್ನು ಈ ರೀತಿಯಾಗಿ ಮುಚ್ಚಿಹಾಕಲು ಹೊರಟರೆ ಅದು ಮುಂದಿನದಿನಗಳಲ್ಲಿ ಯಾವರೀತಿ ಪರಿಣಾಮ ಬೀರಬಹುದು ಎಂಬುದನ್ನು ನೆನಪಿಸಿಕೊಂಡರೆ ಭಯವಾಗುತ್ತದೆ
ಬಿಜೆಪಿ ಯಲ್ಲಿರುವ ಮಹಿಳಾನಾಯಕಿಯರು ಇಂತಹ ಸನ್ನಿವೇಶದಲ್ಲಿಯೂ ಮಾನವೀಯ ಸಂವೇದನೆ ಬದಿಗಿರಿಸಿ ಮೌನವಾಗಿರುವುದು ಸರಿಯಾದುದಲ್ಲಾ
ಈ ಪ್ರಕರಣವನ್ನು ರಾಜಕೀಯ ಪಕ್ಷಗಳು ಹಾಗು ಸಂಘಟನೆಗಳು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳದೆ ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯದೊರಕಿಸಿಕೊಡುವ ಹಾಗೂ ಮುಂದೆ ಇಂತಹ ಅಮಾನುಷ ಘಟನೆಗಳು ನಡೆಯದಂತೆ ತಡೆಯುವ ನಿಟ್ಟಿನಲ್ಲಿ ಹೋರಾಟನಡೆಸಬೇಕಿದೆ

#ಹಾಥ್ರಸ್

#ಮನೀಷಾ ವಾಲ್ಮೀಕಿ 

ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

Vimarsha.info

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹಾಸನ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗಾವಕಾಶಗಳು.

ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ನೆಲೆಸಿರುವ ಗೃಹಿಣಿಯರು, ನಿವೃತ್ತ ಅಧಿಕಾರಿಗಳು /ನೌಕರರು ಮತ್ತು ನಿರುದ್ಯೋಗಿಗಳಿಗೆ ಆರ್ಥಿಕ ವಲಯದಲ್ಲಿ ಹೂಡಿಕೆ ಇಲ್ಲದೆ ವೃತ್ತಿ ಅವಕಾಶಗಳು / ವ್ಯಾಪಾರ ಅವಕಾಶಗಳು  ಪುರುಷ ಮತ್ತು  ಮಹಿಳೆಯರಿಗೆ   ವಯಸ್ಸಿನ ಮಿತಿ: - 25 ರಿಂದ 65 ವರ್ಷಗಳು.  ದಯವಿಟ್ಟು ನಿಮ್ಮ ವಿವರಗಳನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ.  freelanceadvertisingthassan@gmail.com  ಅಥವಾ  ಸಂಪರ್ಕಿಸಿ  ವಾಟ್ಸಾಪ್ ಸಂದೇಶಗಳು ಮಾತ್ರ  7090899728  Career opportunities /business opportunities with out an investments in financial sector for housewives ,retired officials /employees and unemployed persons residing in Hassan district, Karnataka state India For both male and female. Age limit:- 25 to 65 years. Please send your details to below email id. freelanceadvertisingathassan@gmail.com Or  Contact  WhatsApp messages only 070908 99728

ಉತ್ತಮ ಫಲಿತಾಂಶ , ಹಣ ಉಳಿತಾಯ.

ನಾನು ನೆಟ್‌ಸರ್ಫ್ ಡೈರೆಕ್ಟ್‌ನೊಂದಿಗೆ ಕೆಲಸ ಮಾಡುತ್ತಿದ್ದೇನೆ. ನಾನು ನೆಟ್ಸರ್ಫ್ ಉತ್ಪನ್ನಗಳನ್ನು ನಿಯಮಿತವಾಗಿ ಬಳಸುತ್ತಿದ್ದೇನೆ. ನಾನು ನಿಮಗೆ ಈ ಉತ್ಪನ್ನಗಳನ್ನು ಬಲವಾಗಿ ಶಿಫಾರಸು ಮಾಡುತ್ತೇವೆ. 'NETSURF DIRECT' 5 ವಿವಿಧ ವಿಭಾಗಗಳಲ್ಲಿ 90 ಕ್ಕೂ ಹೆಚ್ಚು ಗಿಡಮೂಲಿಕೆ ಉತ್ಪನ್ನಗಳನ್ನು ನೀಡುತ್ತದೆ ಅಂದರೆ ಆರೋಗ್ಯ ರಕ್ಷಣೆ, ವೈಯಕ್ತಿಕ ಆರೈಕೆ, ಬಣ್ಣ ಸೌಂದರ್ಯವರ್ಧಕಗಳು, ಗೃಹ ಆರೈಕೆ ಮತ್ತು ಕೃಷಿ. ಈ ಉತ್ಪನ್ನಗಳನ್ನು ಭಾರತದಾದ್ಯಂತ 2.5 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ನಂಬಿದ್ದಾರೆ. ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೆಟ್‌ಸರ್ಫ್ ವರ್ಲ್ಡ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ ಮತ್ತು ಎಲ್ಲಾ ನೆಟ್‌ಸರ್ಫ್ ಉತ್ಪನ್ನಗಳ ಮೇಲೆ ಅತ್ಯಾಕರ್ಷಕ ಕೊಡುಗೆಗಳನ್ನು ಪಡೆದುಕೊಳ್ಳಿ. ಒಮ್ಮೆ ನೀವು ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿದ ನಂತರ, ನನ್ನ ಮೊಬೈಲ್ ಸಂಖ್ಯೆಯನ್ನು (8453502625) "ಉಲ್ಲೇಖಿಸಿದವರು" ನಲ್ಲಿ ನಮೂದಿಸಿ ಮತ್ತು ನಿಮ್ಮ 1ನೇ ಖರೀದಿಯಿಂದ ಪುನಃ ಪಡೆದುಕೊಳ್ಳಬಹುದಾದ ರೂ.100 ವೋಚರ್ ಅನ್ನು ಪಡೆಯಿರಿ. Andriod ಬಳಕೆದಾರರು: https://bit.ly/3SxEkfB ಆಪಲ್ ಬಳಕೆದಾರರು: https://apple.co/3Ace2JT   I am working with Netsurf Direct. I am using Netsurf products regularly. I strongly recommend these products to you .   'NETSURF DIRECT...

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ (92) ವಿಧಿವಶ. ನಾಳೆ ಅಂತ್ಯಕ್ರಿಯೆ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ:- ತಡ ರಾತ್ರಿ ನಿಧನರಾಗಿರುವ ಎಸ್.ಎಂ ಕೃಷ್ಣ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ ಕೃಷ್ಣ ಇತ್ತೀಚೆಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ  ಎಸ್.ಎಂ.ಕೃಷ್ಣ (92) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ    ಕೊನೆಯುಸಿರೆಳೆದಿದ್ದಾರೆ. ಎಸ್​ಎಂ ಕೃಷ್ಣ ಅವರು ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಮಂಡ್ಯದ ಸೋಮನಹಳ್ಳಿಯಲ್ಲಿ 1932ರಲ್ಲಿ ಜನಿಸಿದ್ದ ಅವರು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದುಕೊಂಡಿದ್ದರು. ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಸ್ಪೀಕರ್ ಆಗಿಯೂ ಸೇವೆ ಸಲ್ಲಿಕೆ ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು. 1971 ರಿಂದ 2014ರವರೆಗೆ ವಿವಿಧ ಕಾಲಘಟ್ಟದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಗಿದ್ದರು. ನಾಳೆ ಎಸ್​​ಎಂ ಕೃಷ್ಣ ಅವರ ಅಂತ್ಯಕ್ರಿಯೆ; ಬೆಂಗಳೂರಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ.. ಫೋಟೋ ಕೃಪೆ :-ವಿಕಿಪೀ...