ಮೀಸಲು ರಾಜಕೀಯ - ಕೋಟೆ ಕಾಲಂ
ಹರೀಶ್ ಹೆಚ್ ಆರ್
ಕೋಟೆ
ರಾಜಕಾರಣಿಗಳು ತಮ್ಮಸ್ವಾರ್ಥಕ್ಕಾಗಿ ವ್ಯವಸ್ಥೆಯನ್ನು
ಬಳಸಿಕೊಂಡರೆ ಅದು ಅಭಿವೃದ್ಧಿ ಗೆ ಮಾರಕ ಹಾಗೂ ಪ್ರಜಾಪ್ರಭುತ್ವವನ್ನು ಅಸ್ಥಿರ ಗೊಳಿಸುವ
ಪ್ರಕ್ರಿಯೆ ಎಂದು ಗೊತ್ತಿದ್ದರೂ ಪದೇಪದೇ ಅದೇ ಪ್ರಹಸನ ಮುಂದುವರೆಯುತ್ತಿದೆ ರಾಜಕಾರಣ ಕ್ಕೆ
ಮೀಸಲಾತಿಯನ್ನು ಮನಬಂದಂತೆ ಬದಲಾಯಿಸುವ ಪ್ರಕ್ರಿಯೆಯು ನಡೆಯುತ್ತಿದೆ ಸ್ಥಳಿಯ ಸಂಸ್ಥೆ ಗಳ ಅಧ್ಯಕ್ಷ
ಉಪಾಧ್ಯಕ್ಷ ಸ್ಥಾನ ಮೀಸಲಾತಿ ನಿಗದಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ತಮ್ಮ ಪಕ್ಚ ಸ್ಥಳೀಯ
ಸಂಸ್ಥೆ ಗಳ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ವಿಫಲವಾದಾಗ ಆಡಳಿತಾರೂಡ ಪಕ್ಷಗಳು ವಿಪಕ್ಷ ಬಹುಮತ
ಹೊಂದಿದ್ದರೂ ಅಧಿಕಾರದಿಂದ ದೂರ ಇಡುವ ಸಲುವಾಗಿ ವಿಪಕ್ಷದಲ್ಲಿ ಇಲ್ಲದ ಹಾಗೂ ತಮ್ಮಲ್ಲಿ ಮಾತ್ರ
ಗೆಲುವು ಸಾಧಿಸಿರುವ ಕೆಟಗರಿಗೆ ಮೀಸಲು ನಿಗದಿಪಡಿಸಿ ಎದುರಾಳಿಗಳಿಗೆ ಬಹುಮತವಿದ್ದರೂ ಅಧಿಕಾರ
ಸಿಗದಂತೆ ಮಾಡುವುದು ಆನಂತರ ಅವರು ಪ್ರತಿಯೊಂದು ಕೆಲಸಕ್ಜೂ ಅಡ್ಡಗಾಲು ಹಾಕಿ ಅಭಿವ್ರದ್ದಿ
ಕಾರ್ಯಕ್ರಮ ನಡೆಯದಂತೆ ತಡೆಯುವುದು ಮಾಮೂಲಾಗಿದ್ದು ರಾಜಕೀಯ ಚದುರಂಗಕೆ ಜನರು ಬೆಲೆತೆರಬೇಕಾಗಿದೆ
ಹಾಸನ ಜಿಲ್ಲಾಪಂಚಾಯತಿಯಲ್ಲಿ ಜೆಡಿಎಸ್ ಬಹುಮತಹೊಂದಿದ್ದರೂ ಅದನ್ನು ಅಧಿಕಾರದಿಂದ ದೂರ ಇಡುವ
ಸಲುವಾಗಿ ಅಧ್ಯಕ್ಷಸ್ಥಾನವನ್ನು ಎಸ್ಟಿ ಗೆ ಮೀಸಲು ಮಾಡುವ ಮೂಲಕ ರಾಜಕೀಯ ದಾಳ ಉರುಳಿಸಿ
ಅಧಿಕಾರದಿಂದ ವಂಚಿಸಲಾಗಿತ್ತು ಕಾಂಗ್ರೆಸ್ ಅಂದು ಮಾಡಿದ ಲೋಪದಿಂದಾಗಿ ಜಿಲ್ಲಾಪಂಚಾಯತ್ನಲ್ಲಿ
ಅಧ್ಯಕ್ಷ ರಿಗೆ ಯಾವುದೇ ತಿರ್ಮಾನ ಕೈ ಗೊಳ್ಳಲು ಸಾಧ್ಯವಾಗುತ್ತಿಲ್ಲಾ ಅದರ ಪರಿಣಾಮ ಜಿಲ್ಲೆಯ
ಗ್ರಾಮಾಂತರ ಪ್ರದೇಶಗಳ ಅಭಿವ್ರದ್ದಿಯ ಮೇಲೆ ಉಂಟಾಗುತ್ತಿದೆ ಈಗ ಅದೇ ತಪ್ಪು ಮುಂದುವರೆಸಿರುವ
ಬಿಜೆಪಿ ಹಾಸನ ಹಾಗೂ ಅರಸೀಕೆರೆ ಸ್ಥಳೀಯ ಸಂಸ್ಥೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಮೀಸಲಾತಿ
ನಿಗದಿಯಲ್ಲಿ ರಾಜಕೀಯ ತಂತ್ರಗಾರಿಕೆ ಮಾಡಿದೆ ಮೀಸಲಾತಿ ಪ್ರಕಟವಾಗದ ಹಿನ್ನಲೆಯಲ್ಲಿ ಎರಡು ವರ್ಷಗಳ
ಅವಧಿಯಿಂದ ಸ್ಥಳಿಯ ಸಂಸ್ಥೆ ಗಳು ಕಾರ್ಯನಿರ್ವಹಿಸಲು ಸಾದ್ಯವಾಗಿರಲಿಲ್ಲಾ ಈಗ ನಿಗದಿಯಾಗಿದ್ದರೂ
ಮತ್ತೆ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರುವ ಸಾದ್ಯತೆ ಇರುವ ಕಾರಣ ಹಾಸನ ಹಾಗೂ ಅರಸೀಕೆರೆ ನಗರಸಭೆ
ಗಳಲ್ಲಿ ಮತ್ತೆ ಅಭಿವ್ರದ್ದಿ ಕಾರ್ಯಗಳಿಗೆ ತೊಡಕಾಗಲಿದೆ ರಾಜ್ಯದಲ್ಲಿ ಹರಿಹರ ಹಾಗೂ ಕೊಪ್ಪಳಕ್ಕೆ
ಮಾತ್ರ ಈ ಅವಧಿಯಲ್ಲಿ ಎಸ್ಟಿ ಗೆ ಅಧ್ಯಕ್ಷಸ್ತಾನ ಮೀಸಲಿರಿಸಲು ಅವಕಾಶವಿದೆ ಆದರೆ ಅದನ್ನು ಏಕಾಏಕಿ
ಜೆಡಿಎಸ್ ಅನ್ನು ಅಧಿಕಾರದಿಂದ ದೂರ ಇಡುವ ಸಲುವಾಗಿಯೇ ಹಾಸನ ಹಾಗೂ ಅರಸೀಕೆರೆಗೆ ನಿಗದಿಪಡಿಸಿ
ಅನ್ಯಾಯ ಎಸಗಲಾಗಿದ್ದು ನ್ಯಾಯಾಲಯದ ಮೊರೆ ಹೋಗುವುದಾಗಿ ಜೆಡಿಎಸ್ ಮುಖಂಡರು ಎಚ್ಚರಿಸಿದ್ದಾರೆ
ಒಟ್ಟಾರೆ ಈ ಎಲ್ಲಾ ಬೆಳವಣಿಗೆ ಗಮನಿಸಿದರೆ ರಾಜಕೀಯ ಆಟಕ್ಕೆ ಬಲಿಯಾಗಿ ಅಭಿವ್ರದ್ದಿ ನೆನಗುದಿಗೆ
ಬೀಳುವುದು ಖಚಿತ ಎನಿಸುತ್ತದೆ ರಾಜಕೀಯ ಪಕ್ಷಗಳ ಹಾಗು ನಾಯಕರ ಪ್ರತಿಷ್ಠೆಗಾಗಿ ಯಾರೇ ಆಗಲಿ ಬಹುಮತ
ಹೊಂದಿರುವವರನ್ನು ಅಧಿಕಾರದಿಂದ ದೂರ ಇಡುವುದು ಪ್ರಜಾಪ್ರಭುತ್ವ ಕ್ಕೆ ಮಾರಕ ಬಹುಮತಕ್ಕೆ
ಪ್ರಜಾಪ್ರಭುತ್ವದಲ್ಲಿ ಮಾನ್ಯತೆ ಅದನ್ನೆ ತಿರಸ್ಕರಿಸಿದರೆ ಜನರ ತೀರ್ಮಾನಕ್ಕೆ ವಿರುದ್ದವಾಗಿ
ನಡೆದಂತೆ ಎಂಬ ವಿಚಾರವನ್ನು ಎಲ್ಲಾ ರಾಜಕೀಯ ಪಕ್ಷಗಳು ಅರ್ಥಮಾಡಿಕೊಳ್ಳಬೇಕಿದೆ.
ವಿಮರ್ಶಾ-vimarsha
👇👇👇👇👇👇👇👇👇👇👇👇👇 ರೈತ ದಿನಾಚರಣೆ https://youtube.com/shorts/EGX4c_IVzY8?si=erkB19_6MH0KmBG6 ಮೊಸಳೆಹೊಸಹಳ್ಳಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ರಾಷ್ಟ್ರೀಯ ರೈತರ ದಿನದ ಅಂಗವಾಗಿ ಸಾವಯವ ಕೃಷಿ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಪುಣ್ಯಭೂಮಿ ಪರಿಸರ ಪ್ರಶಸ್ತಿ ಮತ್ತು ಶ್ರೇಷ್ಠ ಕೃಷಿಕ ಪ್ರಶಸ್ತಿ ಪುರಸ್ಕೃತರಾದ ಕಟ್ಟಾಯ ಹೋಬಳಿಯ ಬ್ಯಾಡರಹಳ್ಳಿಯ ಸಾವಯವ ಕೃಷಿಕರು, ಪ್ರಗತಿಪರ ರೈತರು ಮತ್ತು ಪಾರಂಪರಿಕ ವೈದ್ಯರಾದ ಶ್ರೀಯುತ ರವಿಶಂಕರ್ ಅವರು ಆಗಮಿಸಿದ್ದರು. ಸಂಸ್ಥೆಯಲ್ಲಿ ರೈತರಿಂದ ಗಿಡ ನೆಡುವುದರ ಮೂಲಕ ರೈತರ ದಿನವನ್ನು ಉದ್ಘಾಟಿಸಲಾಯಿತು. ಸಾವಯವ ಕೃಷಿಯನ್ನು ಉದ್ದೇಶಿಸಿ ಮಾತನಾಡಿದ ಇವರು ವಿದ್ಯಾರ್ಥಿಗಳಿಗೆ ಸಾವಯವ ಕೃಷಿಯ ಕ್ರಮಗಳು, ಆರೋಗ್ಯಕರ ಪ್ರಯೋಜನಗಳನ್ನು ವಿವರಿಸುತ್ತಾ, ಬೆಳೆಗೆ ಯಾವುದೇ ರಾಸಾಯನಿಕ ಗೊಬ್ಬರಗಳು, ಕೀಟನಾಶಕಗಳನ್ನು ಬಳಸದೇ ಕೇವಲ ಹಸುವಿನ ಸಗಣಿ ಮತ್ತು ಗಂಜುಳದಿಂದ ರಸಗೊಬ್ಬರ ಮತ್ತು ಸಾವಯವ ಕೀಟನಾಶಕವನ್ನು ತಯಾರಿಸಿ ಮಣ್ಣಿನ ಫಲವತ್ತತೆಯನ್ನು ಹೇಗೆ ಹೆಚ್ಚಿಸುವುದು ಮತ್ತು ಯಾವ ಕಾಲ, ನಕ್ಷತ್ರ, ಹವಾಮಾನ ಮತ್ತು ಮಾಸಕ್ಕನುಗುಣವಾಗಿ ಯಾವ ಬೆಳೆ ಬೆಳೆಯಬೇಕೆಂಬುದನ್ನು ರೈತರು ಸೂಕ್ತವಾಗಿ ಅರಿತಿರಬೇಕು ಮತ್ತು ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಗೊಳಿಸಿಕೊಳ್ಳ
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ
Vimarsha.info