ವಿಷಯಕ್ಕೆ ಹೋಗಿ

ವಿಮರ್ಶಾ-ಸುದ್ದಿ ನೋಟ .15/11/2೦2೦

    
     



       ವಿಮರ್ಶಾ  -ಸುದ್ದಿ ನೋಟ
             15/11/2೦2೦





ತಜ್ಞರ ಸಲಹೆಯಂತೆ ದ್ವಾರಸಮುದ್ರ ಕೆರೆ ಏರಿ ದುರಸ್ತಿಗೆ ಕ್ರಮ: ಜೆ.ಸಿ ಮಾಧುಸ್ವಾಮಿ

ಹಾಸನ.ನ.14.

(ಕರ್ನಾಟಕ ವಾರ್ತೆ):- 


ದ್ವಾರಸಮುದ್ರ ಕೆರೆ ಏರಿ ದುರಸ್ತಿ ಕುರಿತಾಗಿ ಅಧಿಕಾರಿಗಳು ಈಗಾಗಲೇ ತಜ್ಞರ ಸಲಹೆ ಪಡೆದಿದ್ದು, ಅದರಂತೆ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದ್ದಾರೆ.

 ಬೇಲೂರು  ತಾಲ್ಲೂಕಿನ ದ್ವಾರಸಮುದ್ರ ಕೆರೆ ಏರಿ ಕುಸಿದಿರುವ ಸ್ಥಳ ವೀಕ್ಷಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಧ್ಯ ಕೆರೆ ಸಂಪೂರ್ಣವಾಗಿ ಭರ್ತಿಯಾಗಿರುವುದರಿಂದ ತಾತ್ಕಾಲಿಕವಾಗಿ ಕೆರೆ ಏರಿ ದುರಸ್ತಿ ಮಾಡಬಹುದಾಗಿದ್ದು, ಕೂಡಲೇ ಕೈಗೊಳ್ಳಬಹುದಾದ ದುರಸ್ತಿ ಕ್ರಮಗಳ ಬಗ್ಗೆ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

 ಸ್ಥಳೀಯ ಶಾಸಕರಾದ ಕೆ.ಎಸ್. ಲಿಂಗೇಶ್, ತಹಶೀಲ್ದಾರ್ ನಟೇಶ್, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ ಮತ್ತಿತರ ರೈತ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.
***********



ಹಾನಿಗೊಳಗಾಗಿರುವ ಕೆರೆಗಳ ದುರಸ್ಥಿಗೆ ಶೀಘ್ರ ಕ್ರಮವಹಿಸಿ: ಜೆ.ಸಿ. ಮಾಧುಸ್ವಾಮಿ
ಹಾಸನ.ನ.14

(ಕರ್ನಾಟಕ ವಾರ್ತೆ):- 

ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಎಲ್ಲಾ ಕೆರೆಗಳನ್ನು ತಾತ್ಕಾಲಿಕವಾಗಿ ದುರಸ್ಥಿ ಪಡಿಸಲು ಕ್ರಮವಹಿಸುವಂತೆ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

 ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಂದು ಜಿಲ್ಲೆಯಲ್ಲಿ ಮಳೆಯಿಂದಾಗಿರುವ ಸಣ್ಣ ನೀರಾವರಿ ಕೆರೆಗಳ ಪುನರುಜ್ಜೀವನದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ಮಳೆಯಿಂದ ಹಾನಿಯಾಗಿರುವ ಕೆರೆಗಳನ್ನು ದುರಸ್ಥಿಪಡಿಸುವಲ್ಲಿ ಬಾಕಿ ಉಳಿದಿರುವ ಕೆರೆಗಳ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ಮೂಲಕ ಕೆರೆಗಳ ಯತಾಸ್ಥಿತಿಯಲ್ಲಿ ಕಾಪಡುವಂತೆ ಅವರು ತಿಳಿಸಿದರು.

 ಜಿಲ್ಲೆಯಲ್ಲಿನ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲಿ ತಲಾ ಒಂದು ಕೆರೆಯನ್ನು ಆಯ್ಕೆ ಮಾಡಿ ಪ್ರೇಕ್ಷಣೀಯ ಹಾಗೂ ಪ್ರವಾಸಿ ತಾಣದಂತೆ ಅಭಿವೃದ್ಧಿ ಪಡಿಸಲು ಕ್ರಿಯಾ ಯೋಜನೆ, ಸಿದ್ದಪಡಿಸುವಂತೆ ಜೆ.ಸಿ. ಮಾಧುಸ್ವಾಮಿಯವರು ಅಧಿಕಾರಿಗಳಿಗೆ ಸೂಚಿಸಿದರು. 
 
 ಶಾಸಕರುಗಳಾದ ಕೆ.ಎಂ. ಶಿವಲಿಂಗೇಗೌಡ, ಎ.ಟಿ. ರಾಮಸ್ವಾಮಿ, ಹೆಚ್.ಕೆ. ಕುಮಾರಸ್ವಾಮಿ, ಕೆ.ಎಸ್. ಲಿಂಗೇಶ್ ಅವರು ಮಾತನಾಡಿ ಕೆರೆಗಳ ಏರಿ ಮತ್ತು ಹೆದ್ದಾರಿ ಪಕ್ಕದಲ್ಲಿರುವ ಕೆರೆಯಲ್ಲಿ ಜಾಲಿಮರಗಳು ಹೆಚ್ಚಾಗಿದ್ದು, ಅವುಗಳನ್ನು ತೆರೆವುಗೊಳಿಸಲು ಅಧಿಕಾರಿಗಳಿಗೆ ಆದೇಶಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.
 
 ಕೆರೆಗಳ ಏರಿ ಮತ್ತು ಹೆದ್ದಾರಿ ಪಕ್ಕದಲ್ಲಿರುವ ಕೆರೆಯಲ್ಲಿ ಜಾಲಿಮರಗಳನ್ನು ತೆರವುಗೊಳಿಸಲು ಹಾಗೂ ಕೆರೆಗಳ ಸ್ವಚ್ಚತೆಗೆ ಕ್ರಮ ಕೈಗೊಳ್ಳುವಂತೆ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು. 

 ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್‍ಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್, ಸರ್ಕಾರದ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿ ಮಥತ್ತುಂಜಯ ಸ್ವಾಮಿ, ಸೂಪರ್ಡೆಂಟ್ ಇಂಜಿನಿಯರ್ ರಾಜ್‍ಶೇಖರ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
**********


ಕೋವಿಡ್-19 ಕುರಿತ ವಿಶೇಷ ಜಾಗೃತಿ ಪ್ರಚಾರ ವಾಹನಕ್ಕೆ ಸಚಿವರಿಂದ ಚಾಲನೆ
ಹಾಸನ.ನ.14.

(ಕರ್ನಾಟಕ ವಾರ್ತೆ):- 


 ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ  ಹಮ್ಮಿಕೊಂಡಿರುವ ವಿಶೇಷ ಜಾಗೃತಿ ಪ್ರಚಾರ ವಾಹನಕ್ಕೆ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಂದು  ಚಾಲನೆ ನೀಡಿದರು.

 ಜಿಲ್ಲೆಯಲ್ಲಿ ಆಯ್ದ 180 ಹಳ್ಳಿಗಳಲ್ಲಿ ಕೋವಿಡ್-19 ಕುರಿತು ಅರಿವು ಮೂಡಿಸಲಾಗುತ್ತಿದೆ.

 ಇದೇ ಸಂದರ್ಭದಲ್ಲಿ ಶಾಸಕರುಗಳಾದ ಎ.ಟಿ. ರಾಮಸ್ವಾಮಿ, ಕೆ.ಎಂ.ಶಿವಲಿಂಗೇಗೌಡ,  ಹೆಚ್.ಕೆ. ಕುಮಾರಸ್ವಾಮಿ, ಕೆ.ಎಸ್. ಲಿಂಗೇಶ್ ಹಾಗೂ ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್‍ಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್ ಮತ್ತಿತರರು ಹಾಜರಿದ್ದರು.
*******



ಹಾಸನ ಜಿಲ್ಲೆಯ ಕೋವಿಡ್-19 ವರದಿ.
15/11/2೦2೦.



ಹಾಸನ ಜಿಲ್ಲೆಯಲ್ಲಿ ಇಂದು 26 ಜನರಿಗೆ ಕೊರೊನಾ ಪಾಸೀಟೀ಼ವ್ ಸೋಂಕು ದೃಢ. 
 ಇಂದು 2 ಸಾವು 
90 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ.
23 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


#ವಿಮರ್ಶಾ-vimarsha

An digital media

ಪ್ರಧಾನ ಸಂಪಾದಕರು

*ಹರೀಶ್ ಹೆಚ್ ಆರ್ ಕೋಟೆ*

ಸುದ್ದಿ ಸಂಪಾದಕರು

*ನಾಗೇಂದ್ರ. ಹೆಚ್.ಎನ್*

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹಾಸನ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗಾವಕಾಶಗಳು.

ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ನೆಲೆಸಿರುವ ಗೃಹಿಣಿಯರು, ನಿವೃತ್ತ ಅಧಿಕಾರಿಗಳು /ನೌಕರರು ಮತ್ತು ನಿರುದ್ಯೋಗಿಗಳಿಗೆ ಆರ್ಥಿಕ ವಲಯದಲ್ಲಿ ಹೂಡಿಕೆ ಇಲ್ಲದೆ ವೃತ್ತಿ ಅವಕಾಶಗಳು / ವ್ಯಾಪಾರ ಅವಕಾಶಗಳು  ಪುರುಷ ಮತ್ತು  ಮಹಿಳೆಯರಿಗೆ   ವಯಸ್ಸಿನ ಮಿತಿ: - 25 ರಿಂದ 65 ವರ್ಷಗಳು.  ದಯವಿಟ್ಟು ನಿಮ್ಮ ವಿವರಗಳನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ.  freelanceadvertisingthassan@gmail.com  ಅಥವಾ  ಸಂಪರ್ಕಿಸಿ  ವಾಟ್ಸಾಪ್ ಸಂದೇಶಗಳು ಮಾತ್ರ  7090899728  Career opportunities /business opportunities with out an investments in financial sector for housewives ,retired officials /employees and unemployed persons residing in Hassan district, Karnataka state India For both male and female. Age limit:- 25 to 65 years. Please send your details to below email id. freelanceadvertisingathassan@gmail.com Or  Contact  WhatsApp messages only 070908 99728

ಉತ್ತಮ ಫಲಿತಾಂಶ , ಹಣ ಉಳಿತಾಯ.

ನಾನು ನೆಟ್‌ಸರ್ಫ್ ಡೈರೆಕ್ಟ್‌ನೊಂದಿಗೆ ಕೆಲಸ ಮಾಡುತ್ತಿದ್ದೇನೆ. ನಾನು ನೆಟ್ಸರ್ಫ್ ಉತ್ಪನ್ನಗಳನ್ನು ನಿಯಮಿತವಾಗಿ ಬಳಸುತ್ತಿದ್ದೇನೆ. ನಾನು ನಿಮಗೆ ಈ ಉತ್ಪನ್ನಗಳನ್ನು ಬಲವಾಗಿ ಶಿಫಾರಸು ಮಾಡುತ್ತೇವೆ. 'NETSURF DIRECT' 5 ವಿವಿಧ ವಿಭಾಗಗಳಲ್ಲಿ 90 ಕ್ಕೂ ಹೆಚ್ಚು ಗಿಡಮೂಲಿಕೆ ಉತ್ಪನ್ನಗಳನ್ನು ನೀಡುತ್ತದೆ ಅಂದರೆ ಆರೋಗ್ಯ ರಕ್ಷಣೆ, ವೈಯಕ್ತಿಕ ಆರೈಕೆ, ಬಣ್ಣ ಸೌಂದರ್ಯವರ್ಧಕಗಳು, ಗೃಹ ಆರೈಕೆ ಮತ್ತು ಕೃಷಿ. ಈ ಉತ್ಪನ್ನಗಳನ್ನು ಭಾರತದಾದ್ಯಂತ 2.5 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ನಂಬಿದ್ದಾರೆ. ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೆಟ್‌ಸರ್ಫ್ ವರ್ಲ್ಡ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ ಮತ್ತು ಎಲ್ಲಾ ನೆಟ್‌ಸರ್ಫ್ ಉತ್ಪನ್ನಗಳ ಮೇಲೆ ಅತ್ಯಾಕರ್ಷಕ ಕೊಡುಗೆಗಳನ್ನು ಪಡೆದುಕೊಳ್ಳಿ. ಒಮ್ಮೆ ನೀವು ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿದ ನಂತರ, ನನ್ನ ಮೊಬೈಲ್ ಸಂಖ್ಯೆಯನ್ನು (8453502625) "ಉಲ್ಲೇಖಿಸಿದವರು" ನಲ್ಲಿ ನಮೂದಿಸಿ ಮತ್ತು ನಿಮ್ಮ 1ನೇ ಖರೀದಿಯಿಂದ ಪುನಃ ಪಡೆದುಕೊಳ್ಳಬಹುದಾದ ರೂ.100 ವೋಚರ್ ಅನ್ನು ಪಡೆಯಿರಿ. Andriod ಬಳಕೆದಾರರು: https://bit.ly/3SxEkfB ಆಪಲ್ ಬಳಕೆದಾರರು: https://apple.co/3Ace2JT   I am working with Netsurf Direct. I am using Netsurf products regularly. I strongly recommend these products to you .   'NETSURF DIRECT...

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ (92) ವಿಧಿವಶ. ನಾಳೆ ಅಂತ್ಯಕ್ರಿಯೆ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ:- ತಡ ರಾತ್ರಿ ನಿಧನರಾಗಿರುವ ಎಸ್.ಎಂ ಕೃಷ್ಣ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ ಕೃಷ್ಣ ಇತ್ತೀಚೆಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ  ಎಸ್.ಎಂ.ಕೃಷ್ಣ (92) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ    ಕೊನೆಯುಸಿರೆಳೆದಿದ್ದಾರೆ. ಎಸ್​ಎಂ ಕೃಷ್ಣ ಅವರು ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಮಂಡ್ಯದ ಸೋಮನಹಳ್ಳಿಯಲ್ಲಿ 1932ರಲ್ಲಿ ಜನಿಸಿದ್ದ ಅವರು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದುಕೊಂಡಿದ್ದರು. ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಸ್ಪೀಕರ್ ಆಗಿಯೂ ಸೇವೆ ಸಲ್ಲಿಕೆ ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು. 1971 ರಿಂದ 2014ರವರೆಗೆ ವಿವಿಧ ಕಾಲಘಟ್ಟದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಗಿದ್ದರು. ನಾಳೆ ಎಸ್​​ಎಂ ಕೃಷ್ಣ ಅವರ ಅಂತ್ಯಕ್ರಿಯೆ; ಬೆಂಗಳೂರಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ.. ಫೋಟೋ ಕೃಪೆ :-ವಿಕಿಪೀ...