ವಿಷಯಕ್ಕೆ ಹೋಗಿ

ದೊಡ್ಡಗದ್ದವಳ್ಳಿ ಮಹಾಲಕ್ಷಿ ದೇವಾಲಯ ವಿಗ್ರಹ ಧ್ವಂಸ :ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಘಟನೆ ವಿವರ:-



 ನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ರಾಜ್ಯದ ದೊಡ್ಡ ಪರಂಪರೆ, ಇತಿಹಾಸ ನಾಶವಾಗಿದೆ. ಹೊಯ್ಸಳರ ವಿಷ್ಣುವರ್ಧನನ ಕಾಲದ ಸಾ.ಶ. 1113 ರಲ್ಲಿ ವಜ್ರದ ವ್ಯಾಪಾರಿಗಳಿಂದ ಕಟ್ಟಿಸಲ್ಪಟ್ಟ ಹಾಸನ ಜಿಲ್ಲೆಯ ದೊಡ್ಡಗದ್ದವಳ್ಳಿ ಗ್ರಾಮದ ಚತುಷ್ಕೂಟ ಮಹಾಲಕ್ಷ್ಮಿ ದೇವಾಲಯದ ದಕ್ಷಿಣ ಗರ್ಭಗೃಹದಲ್ಲಿದ್ದ ಮಹಾಕಾಳಿ ಅಥವಾ ದಕ್ಷಿಣ ಭದ್ರಕಾಲಿ ಅಮ್ಮನವರ ವಿಗ್ರಹವನ್ನು ಒಡೆದು ಹಾಕಲಾಗಿದೆ. ( ಜಾರಿ‌ ಬಿದ್ದಿದೆ ಎಂದೂ‌ ಕೂಡ ಹೇಳಲಾಗುತ್ತಿದೆ) ಇಂತಹ ಪರಮ‌ನೀಚ ಕೃತ್ಯಕ್ಕೆ ಕಾರಣರಾದವರನ್ನು ಕಠಿಣ ಶಿಕ್ಷೆಗಳಿಂದ ದಂಡಿಸಬೇಕಿದೆ. ಇಂತಹ ಒಂದು ಭದ್ರಕಾಳಿಯ ವಿಗ್ರಹ ಅಪರೂಪದಲ್ಲಿ ಅಪರೂಪವಾಗಿತ್ತು. ಇದರ ರಕ್ಷಣೆಯ ಹೊಣೆ ಹೊತ್ತಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ( ASI) ಇದಕ್ಕೆ ಉತ್ತರಿಸಿ, ಜವಾಬು ನೀಡಬೇಕಿದೆ. ತನ್ನ ಅಸಮರ್ಥತೆಯನ್ನು ಒಪ್ಪಿಕೊಳ್ಳಬೇಕಿದೆ. ಸಾಲದ್ದಕ್ಕೆ ಪರಂಪರೆಯ ಸಪ್ತಾಹವನ್ನು ಆಚರಿಸುತ್ತಿರುವ ಈ ವಾರದಲ್ಲಿ ಇದು ರಾಜ್ಯಕ್ಕೆ, ಪರಂಪರೆಗೆ ಆದ ದೊಡ್ಡ ನಷ್ಟವಾಗಿದೆ. ಭಕ್ತಾದಿಗಳ ಮನಸಿಗೆ ತುಂಬಾ ದುಃಖವಾಗಿದೆ. ಇದಕ್ಕೆ ಕಾರಣರಾದವರಿಗೆ ಧಿಕ್ಕಾರವಿರಲಿ ಎಂದು ಕೂಗುತ್ತಿದ್ದಾರೆ ಅದಾಗಿಯೇ ಬಿದ್ದು ಒಡೆದು ಹೋಯಿತು ಎಂಬ ಸಬೂಬು ಹೇಳದಿರಲಿ. ಸರಿಯಾದ ರೀತಿಯಲ್ಲಿ ತನಿಖೆ ನಡೆದು ಸತ್ಯ ಹೊರಬರಲಿ ಭಕ್ತಾದಿಗಳು ಆಗ್ರಹ ಪಡಿಸಿದ್ದಾರೆ. 




ಸ್ಥಳ ಪರಿಚಯ:- 






ದೊಡ್ಡಗದ್ದವಳ್ಳಿಯು ಹಾಸನ ಜಿಲ್ಲೆಯ ಒಂದು ಹಳ್ಳಿ. ಇದು ಹೊಯ್ಸಳ ಶೈಲಿಯ ಪುರಾತನ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಪ್ರಸಿದ್ಧಿ. ಹಾಸನದಿಂದ ಬೇಲೂರಿಗೆಹೋಗುವ ರಸ್ತೆಯಲ್ಲಿ ೧೬ ಕಿ.ಮೀ. ಸಾಗಿದರೆ ದೊಡ್ಡಗದ್ದವಳ್ಳಿ ಸಿಗುತ್ತದೆ. ಇಲ್ಲಿಯ ಪ್ರಮುಖ ಆಕರ್ಷಣೆಯಾದ ಮಹಾಲಕ್ಷ್ಮಿ ದೇವಸ್ಥಾನವನ್ನು ಹೊಯ್ಸಳ ರಾಜ ವಿಷ್ಣುವರ್ಧನನ ಆಳ್ವಿಕೆಯಲ್ಲಿ ಕ್ರಿ.ಶ. ೧೧೧೪ರಲ್ಲಿ ನಿರ್ಮಿಸಲಾಯಿತು. ಈ ದೇವಾಲಯವು ಚತುಷ್ಕುಟ(ಒಂದೇ ಜಗತಿಯ ಮೇಲೆ ನಾಲ್ಕು ಮುಖ್ಯ ಗರ್ಭಗುಡಿಗಳು ಮತ್ತು ನಾಲ್ಕು ಮುಖ್ಯ ಶಿಖರಗಳಿರುವುದು) ದೇವಾಲಯವಾಗಿದ್ದು , ಕಾಲಿಮಾತೆ, ಮಹಾಲಕ್ಷ್ಮಿ, ಶಿವಲಿಂಗ, ಮತ್ತು ವಿಷ್ಣು ( ನಲವತ್ತು ವರುಷಗಳ ಹಿಂದೆ ಮೂಲ ವಿಷ್ಣು ವಿಗ್ರಹವು ಕಳುವಾಗಿದ್ದು ಸದ್ಯ ಕಾಲಭೈರವನ ಮೂರ್ತಿಯು ಇಲ್ಲಿದೆ)ವಿನ ವಿಗ್ರಹಗಳಿವೆ. ಇದು ಪೂಜೆಗೊಳ್ಳುವ ಆಲಯವಾಗಿದ್ದು ಭಾರತೀಯ ಪುರಾತತ್ವ ಸರ್ವೇಕ್ಷಣದ ಸುಪರ್ದಿಗೊಳಪಟ್ಟಿದೆ. ೧೯೫೮ ರಲ್ಲಿ ಈ ಆಲಯವನ್ನು ಕೇಂದ್ರ ಸರಕಾರವು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಿದೆ. ದೇವಾಲಯವು ಸೂರ್ಯೋದಯದಿಂದ ಸೂರ್ಯಾಸ್ತದವರೆವಿಗೆ ತೆರೆದಿರುತ್ತದೆ. ಮಹಾಲಕ್ಷ್ಮಿ ದೇವಾಲಯ ದೊಡ್ಡಗದ್ದವಳ್ಳಿ ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ಹಾಸನ ತಾಲ್ಲೂಕಿನಲ್ಲಿರುವ ಒಂದು ಹಳ್ಳಿ. ಕೊಲ್ಹಾಪುರದಲ್ಲಿರುವ ಹಾಗೆ ಇಲ್ಲೊಂದು ಲಕ್ಷ್ಮೀ ದೇವಾಲಯವಿರುವುದರಿಂದ ಇದನ್ನು ಅಭಿನವ ಕೊಲ್ಹಾಪುರವೆಂದೂ ಕರೆಯಲಾಗಿದೆ. ಹೊಯ್ಸಳ ವಾಸ್ತುಶೈಲಿಯ ಅಪೂರ್ವ ಚತುಷ್ಕೂಟಾಚಲ ದೇವಾಲಯಕ್ಕಾಗಿ ಇದು ಪ್ರಸಿದ್ಧವಾಗಿದೆ. ಇಲ್ಲಿಯ ಲಕ್ಷ್ಮೀ ದೇವಾಲಯವನ್ನು ವಿಷ್ಣುವರ್ಧನನ ಕಾಲದಲ್ಲಿ (1113) ಪಾರಿಯಾತ್ರದ ಮಹಾವಡ್ಡ ವ್ಯವಹಾರಿಕುಲ್ಲಹಣ ರಾಹುತನೂ ಅವನ ಸತಿ ಸಹಜಾದೇವಿಯೂ ಸೇರಿ ಕಟ್ಟಿಸಿದರೆಂದು ಹೇಳಲಾಗಿದೆ..... 



ಪ್ರಧಾನ ಸಂಪಾದಕರು : ಹರೀಶ್ ಹೆಚ್ಆರ್ 
ಕೋಟೆ 






ಸುದ್ದಿ ಸಂಪಾದಕರು ನಾಗೇಂದ್ರ.ಹೆಚ್.ಎನ್.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ರೈತ ದಿನ ಆಚರಣೆ-ಸಾವಯವ ಕೃಷಿ ಪದ್ಧತಿಗೆ ಸಲಹೆ.

👇👇👇👇👇👇👇👇👇👇👇👇👇 ರೈತ ದಿನಾಚರಣೆ https://youtube.com/shorts/EGX4c_IVzY8?si=erkB19_6MH0KmBG6 ಮೊಸಳೆಹೊಸಹಳ್ಳಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ರಾಷ್ಟ್ರೀಯ ರೈತರ ದಿನದ ಅಂಗವಾಗಿ ಸಾವಯವ ಕೃಷಿ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಪುಣ್ಯಭೂಮಿ ಪರಿಸರ ಪ್ರಶಸ್ತಿ ಮತ್ತು ಶ್ರೇಷ್ಠ ಕೃಷಿಕ ಪ್ರಶಸ್ತಿ ಪುರಸ್ಕೃತರಾದ ಕಟ್ಟಾಯ ಹೋಬಳಿಯ ಬ್ಯಾಡರಹಳ್ಳಿಯ ಸಾವಯವ ಕೃಷಿಕರು, ಪ್ರಗತಿಪರ ರೈತರು ಮತ್ತು ಪಾರಂಪರಿಕ ವೈದ್ಯರಾದ ಶ್ರೀಯುತ ರವಿಶಂಕರ್ ಅವರು ಆಗಮಿಸಿದ್ದರು. ಸಂಸ್ಥೆಯಲ್ಲಿ ರೈತರಿಂದ ಗಿಡ ನೆಡುವುದರ ಮೂಲಕ ರೈತರ ದಿನವನ್ನು ಉದ್ಘಾಟಿಸಲಾಯಿತು. ಸಾವಯವ ಕೃಷಿಯನ್ನು ಉದ್ದೇಶಿಸಿ ಮಾತನಾಡಿದ ಇವರು ವಿದ್ಯಾರ್ಥಿಗಳಿಗೆ ಸಾವಯವ ಕೃಷಿಯ ಕ್ರಮಗಳು, ಆರೋಗ್ಯಕರ ಪ್ರಯೋಜನಗಳನ್ನು ವಿವರಿಸುತ್ತಾ, ಬೆಳೆಗೆ ಯಾವುದೇ ರಾಸಾಯನಿಕ ಗೊಬ್ಬರಗಳು, ಕೀಟನಾಶಕಗಳನ್ನು ಬಳಸದೇ ಕೇವಲ ಹಸುವಿನ ಸಗಣಿ ಮತ್ತು ಗಂಜುಳದಿಂದ ರಸಗೊಬ್ಬರ ಮತ್ತು ಸಾವಯವ ಕೀಟನಾಶಕವನ್ನು ತಯಾರಿಸಿ ಮಣ್ಣಿನ ಫಲವತ್ತತೆಯನ್ನು ಹೇಗೆ ಹೆಚ್ಚಿಸುವುದು ಮತ್ತು ಯಾವ ಕಾಲ, ನಕ್ಷತ್ರ, ಹವಾಮಾನ ಮತ್ತು ಮಾಸಕ್ಕನುಗುಣವಾಗಿ ಯಾವ ಬೆಳೆ ಬೆಳೆಯಬೇಕೆಂಬುದನ್ನು ರೈತರು ಸೂಕ್ತವಾಗಿ ಅರಿತಿರಬೇಕು ಮತ್ತು ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಗೊಳಿಸಿಕೊಳ್ಳ

ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನ ಆಚರಣೆ.

ಹಾಸನ ತಾಲ್ಲೂಕಿನ ಮೊಸಳೆಹೊಸಹಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕದ ವತಿಯಿಂದ ರೆಡ್ ರಿಬ್ಬನ್ ಕ್ಲಬ್ ಸಹಯೋಗದೊಂದಿಗೆ, ವಿಶ್ವ ಏಡ್ಸ್ ದಿನದ ಪ್ರಯುಕ್ತ ಸಂಸ್ಥೆಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.. . ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಾಸನ ಜಿಲ್ಲಾ ಏಡ್ಸ್ ಪ್ರಿವೆನ್ಷನ್ ಮತ್ತು ಕಂಟ್ರೋಲ್ ಘಟಕದ ಸೂಪರ್ವೈಸರ್ ಶ್ರೀಯುತ ರವಿಕುಮಾರ್ ವಿ. ಬಲ್ಲೇನಹಳ್ಳಿ ಯವರು ಮತ್ತು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀಯುತ ನಾಗೇಶ್ ರವರು ಹೆಚ್.ಐ.ವಿ. ಸೋಂಕಿನ ಬಗ್ಗೆ ವಿದ್ಯಾರ್ಥಿಗಳಿಗೆ ಸಂಕ್ಷಿಪ್ತ ಮಾಹಿತಿ ನೀಡುವ ಮೂಲಕ ಜಾಗೃತಿ ಮೂಡಿಸಿದರು.  ಮುಂದುವರೆದು ಸಂಸ್ಥೆಯಲ್ಲಿ ಏಡ್ಸ್/ಹೆಚ್.ಐ.ವಿ. ಸೋಂಕಿನ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸವಾಗಿ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಪೋಸ್ಟರ್ ಡಿಸೈನ್ ಮತ್ತು ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು ಮತ್ತು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು ಸಂಸ್ಥೆಯ ಎನ್.ಎಸ್.ಎಸ್. ಅಧಿಕಾರಿಗಳಾದ ಶ್ರೀಯುತ ವೀರಭದ್ರಸ್ವಾಮಿ ಕೆ.ಎಂ. ರವರು, ಎನ್.ಎಸ್.ಎಸ್. ಚಟುವಟಿಕೆಯ ಅಡಿಯಲ್ಲಿ ವಿದ್ಯಾರ್ಥಿಗಳು ಸುತ್ತಮುತ್ತಲ, ಮೂರು ಗ್ರಾಮಗಳನ್ನು ದತ್ತು ಪಡೆದು ಸ್ವಚ್ಛತೆ, ಆರೋಗ್ಯ, ಉನ್ನತ ಶಿಕ್ಷಣ ಮುಂತಾದ ವಿಷಯಗಳ ಬಗ್ಗೆ ಜಾಗೃತಿ

ಹಾಸನ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗಾವಕಾಶಗಳು.

ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ನೆಲೆಸಿರುವ ಗೃಹಿಣಿಯರು, ನಿವೃತ್ತ ಅಧಿಕಾರಿಗಳು /ನೌಕರರು ಮತ್ತು ನಿರುದ್ಯೋಗಿಗಳಿಗೆ ಆರ್ಥಿಕ ವಲಯದಲ್ಲಿ ಹೂಡಿಕೆ ಇಲ್ಲದೆ ವೃತ್ತಿ ಅವಕಾಶಗಳು / ವ್ಯಾಪಾರ ಅವಕಾಶಗಳು  ಪುರುಷ ಮತ್ತು  ಮಹಿಳೆಯರಿಗೆ   ವಯಸ್ಸಿನ ಮಿತಿ: - 25 ರಿಂದ 65 ವರ್ಷಗಳು.  ದಯವಿಟ್ಟು ನಿಮ್ಮ ವಿವರಗಳನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ.  freelanceadvertisingthassan@gmail.com  ಅಥವಾ  ಸಂಪರ್ಕಿಸಿ  7090899728 Career opportunities /business opportunities with out an investments in financial sector for housewives ,retired officials /employees and unemployed persons residing in Hassan district, Karnataka state India For both male and female. Age limit:- 25 to 65 years. Please send your details to below email id. freelanceadvertisingathassan@gmail.com Or  Contact  070908 99728