ನೂತನ ಉಪ ಅರಣ್ಯಾಧಿಕಾರಿ ಅಧಿಕಾರ ಸ್ವೀಕಾರ
ಹಾಸನ.
(ಕರ್ನಾಟಕ ವಾರ್ತೆ):-
ಜಿಲ್ಲೆಯ ನೂತನ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಬಸವರಾಜು ಅವರು ಅಧಿಕಾರ ಸ್ವೀಕರಿಸಿದ್ದಾರೆ. ಜ1 ರಂದು ಸಂಜೆ ಅಧಿಕಾರ ವಹಿಸಿಕೊಂಡ ಕೆ.ಎನ್.ಬಸವರಾಜು ರವರು ಜ 2 ರಂದು ಪರಿಸರ ಪೋಷಕರು, ಪ್ರಗತಿಪರ ಚಿಂತಕರುಗಳೊಂದಿಗೆ ಜಿಲ್ಲೆಯ ಅರಣ್ಯ ಹಾಗೂ, ಸಾಮಾಜಿಕ ಸಮಸ್ಯೆಗಳನ್ನು ಕುರಿತು ಚರ್ಚಿಸಿ ಮಾಹಿತಿ ಪಡೆದರು.
ಅರಣ್ಯ ಭವನದಲ್ಲಿಂದು ಹೆಮ್ಮಿಗೆ ಮೋಹನ್ ,ಅರ್.ಪಿ ವೆಂಕಟೇಶ್ ಮೂರ್ತಿ, ಕಿಶೋರ್ ಕುಮಾರ್ ಮತ್ತಿತರರಿಂದ ಉಪ ಅರಣ್ಯ ಸಂರಕ್ಷಣಾಧಿಕಾüರಿಯವರು ವಿವರ ಪಡೆದರು.
ಜಿಲ್ಲೆಯಲ್ಲಿ ಹೆಚ್ಚಾಗಿರುವ ಕಾಡಾನೆ, ಚಿರತೆ ಕಾಡು ಕೋಣ ,ಕಪಿಗಳ ಹಾಗೂ ಮತ್ತಿತರ ವನ್ಯ ಜೀವಿಗಳ ಹಾವಳಿ ಬಗ್ಗೆ ವಿವರಿಸಿದ ಪ್ರಗತಿಪರರು ರೈತರಿಗೆ ಅಯಾಯ ವರ್ಷದ ಬೆಳೆ ಹಾನಿ ಪರಿಹಾರ ಆ ವರ್ಷವೇ ದೊರೆಯುವಂತಾಗಬೇಕು ವೈಜ್ಞಾನಿಕ ದರ ನಿಗಧಿಯಾಗಬೇಕು ಎಂದು ಮನವಿ ಮಾಡಿದರು.
ಆಲೂರು ಸಕಲೇಶಪುರ ಭಾಗದ ಆನೆ ಹಾವಳಿ ನಿಯಂತ್ರಣಕ್ಕೆ ಆನೆ ಕಾರಿಡಾರ್ ಸ್ಥಾಪನೆಗೆ ಪ್ರಸ್ತಾವನೆ ಇದ್ದು, ಅದರ ಜಾರಿಯ ಬಗ್ಗೆ ಗಮನಹರಿಸುವಂತೆ ಮನವಿ ಮಾಡಿದರು.
ಶೀಘ್ರದಲ್ಲೆ ಬೆಳೆಗಾರರು ,ರೈತ ಪ್ರಮುಖರ ಸಭೆ ನಡೆಸಿ ಮಾಹಿತಿ ಪಡೆದು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಪ್ರಯತ್ನಿಸುವುದಾಗಿ ಅವರು ಹೇಳಿದರು. ಹಂತಹಂತವಾಗಿ ಇಲಾಖೆಗೆ ಸಂಭಂದಿಸಿದ ಸಮಸ್ಯೆಯನ್ನು ಬಗೆಹರಿಸಲಾಗುವುದು ಹಾಗೂ ಹೆಚ್ಚಿನ ಮಟ್ಟದಲ್ಲಿ ಅರಣ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಗೆಂಡೆ ಕಟ್ಟೆ ಅರಣ್ಯ ಅಭಿವೃದ್ಧಿ ,ಕೆರೆ ,ಉದ್ಯಾನಗಳನ್ನು ಅರಣ್ಯ ಅಭಿವೃದ್ಧಿ ಮತ್ತಿತರ ವಿಷಯಗಳ ಕುರಿvತು ಚರ್ಚೆ ನಡೆಯಿತು.
ಸಭೆಯಲ್ಲಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮಾ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ವಿನೋದ್ ಚಂದ್ರ, ಎ. ಸಿ.ಎಫ್ ಹರೀಶ್, ಹೊಳೆನರಸೀಪುರ, ಅರಕಲಗೂಡು, ಆಲೂರು ವಲಯ ಅರಣ್ಯ ಅಧಿಕಾರಿಗಳು ಹಾಗೂ ಮತ್ತಿತರರು ಹಾಜರಿದ್ದರು .
*******************************
ರಬಿ ಬೆಳೆ ಸರ್ವೆ ಪೂರ್ಣಗೊಳಿಸಲು ಸೂಚನೆ
ಹಾಸನ
(ಕರ್ನಾಟಕ ವಾರ್ತೆ):-
ರಬಿ ಬೆಳೆ ಸಮೀಕ್ಷೆಯನ್ನು ಶೀಘ್ರವಾಗಿ ಮುಕ್ತಾಯಗೊಳಿಸಿ ಮಾಹಿತಿಯನ್ನು ಗಣಕೀಕರಣಗೊಳಿಸುವಂತೆ ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಅಭಿವೃದ್ಧಿ ಆಯುಕ್ತರಾದ ವಂದಿತ ಶರ್ಮ, ಕೃಷಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜ್ ಕುಮಾರ್ಕತ್ರಿ, ಹಾಗೂ ಇ ಆಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲರವರು ಜಿಲ್ಲೆಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು ಈಗಾಗಲೇ ಸರ್ವೆ ಕಾರ್ಯಕ್ಕೆ ಅಗತ್ಯ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದ್ದು ನಿಗದಿತ ಆಪ್ ಬಳಸಿ ಜ.20ರೊಳಗೆ ಬೆಳೆ ಸಮಿಕ್ಷೆ ಸರ್ವೆ ಕಾರ್ಯ ಮುಕ್ತಾಯ ಗೊಳಿಸಿ ಜ.25ರೋಳಗೆ ಪುನರ್ ಪರಿಶೀಲಿಸಿ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದರು.
ಈಗಾಗಲೇ ಬೆಳೆ ಕಟಾವು ಪ್ರಾರಂಭವಾಗಿರುವುದರಿಂದ ವೇಗವಾಗಿ ಸರ್ವೆ ಕಾರ್ಯ ಮುಕ್ತಾಯಗೊಳಿಸಬೇಕು ಇಲ್ಲದಿದ್ದರೆ ಬೆಳೆಯ ಬಗ್ಗೆ ನಿಖರ ಮಾಹಿತಿ ದೊರೆಯುವುದಿಲ್ಲ ಆಗಾಗಿ ಈ ಕಾರ್ಯವನ್ನು ಅತ್ಯಂತ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.
ಜಿಲ್ಲಾಧಿಕಾರಿ ಆರ್. ಗಿರೀಶ್ ಮಾತನಾಡಿ ಸಭೆಯಲ್ಲಿ ರಬಿ ಬೆಳೆ ಸಮೀಕ್ಷೆಯಲ್ಲಿ ಈಗಾಗಲೆ 684 ಸಿಬ್ಬಂದಿಗಳನ್ನು ತೆಗೆದುಕೊಳ್ಳಲಾಗಿದೆ ಹೆಚ್ಚುವರಿ ಸಿಬ್ಬಂದಿಗಳನ್ನು ಬಳಸಿಕೊಂಡು ತರಬೇತಿ ನೀಡಿ ಶೀಘ್ರ ಸರ್ವೆ ಕಾರ್ಯ ಮುಕ್ತಾಯಗೊಳಿಸಿ ಎಂದರು.
ಸಭೆಯಲ್ಲಿ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರಾದ ಯೋಗೆಶ್, ಹಾಸನದ ಕೃಷಿ ಇಲಾಖೆಯ ಉಪನಿರ್ದೇಶಕರಾದ ಮುನಿಗೌಡ, ಸಕಲೇಶಪುರದ ಕೃಷಿ ಇಲಾಖೆ ಉಪನಿರ್ದೇಶಕರಾದ ಸುಷ್ಮಾ ಹಾಗೂ ಮತ್ತಿತರರು ಅಧಿಕಾರಿಗಳು ಹಾಜರಿದ್ದರು.
ಪರಿಶಿಷ್ಟ ಪಂಗಡ ಸಮುದಾಯದವರಿಂದ ನಿವೇಶನಕ್ಕೆ ಅರ್ಜಿ ಆಹ್ವಾನ
ಹಾಸನ
(ಕರ್ನಾಟಕ ವಾರ್ತೆ):
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2019-20 ಸಾಲಿನ ವಸತಿ ಮತ್ತು ನಿವೇಶನ ಯೋಜನೆಗಳಡಿ ವಸತಿ ಮತ್ತು ನಿವೇಶನ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
18ರಿಂದ 60 ವರ್ಷಗಳ ವಯೋಮಾನದ ಪರಿಶಿಷ್ಟ ವರ್ಗದ ಅಲೆಮಾರಿ ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅರ್ಹ ಫಲಾಪೇಕ್ಷಿಗಳು ನಿಗಮದ ಜಿಲ್ಲಾ ಕಚೇರಿಯಿಂದ ಉಚಿತವಾಗಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಜ.25 ರೊಳಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, 11 ಕ್ರಾಸ್, 1ನೇ ಮಹಡಿ, ಜನನಿ ಕಾಂಪ್ಲೆಕ್ಸ್ ಕೆ.ಆರ್.ಪುರಂ, ಹಾಸನ ಇವರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ. ಸಂಖ್ಯೆ 9008500474 ಗೆ ಸಂಪರ್ಕಿಸಬಹುದಾಗಿದೆ.
*******************************
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಹಾಸನ.
(ಕರ್ನಾಟಕ ವಾರ್ತೆ):-
ಬೇಲೂರು ತಾಲ್ಲೂಕಿನ ವಿವಿಧ ಅಂಗನವಾಡಿಗಳಲ್ಲಿ ಖಾಲಿ ಇರುವ ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಸ್ಥಾನಗಳನ್ನು ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೇಲೂರು ತಾಲ್ಲೂಕಿನ ಲಕ್ಷ್ಮಿಪುರ ಅಂಗನವಾಡಿ ಕೇಂದ್ರದಲ್ಲಿ ಮಿನಿ ಅಂಗನವಾಡಿ ಕಾರ್ಯಕರ್ತೆ ಹುದ್ದೆ, ಘಟ್ಟದಹಳ್ಳಿ, ಶಿವನೇಹಳ್ಳಿ, ಹೊಸಮನೆ ಹಾಗೂ ಮಲ್ಲಿಕಾರ್ಜುನಪುರದ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿ ಇರುತ್ತದೆ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಜ.30 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮಾಲೂರು ಕಾಂಪ್ಲೆಕ್ಸ್, ಡಾ ಬಿ.ಆರ್.ಅಂಬೇಡ್ಕರ್ ವೃತ್ತ. ಬೇಲೂರು ದೂರವಾಣಿ ಸಂಖ್ಯೆ 08177- 222269 ಸಂಪರ್ಕಿಸಬಹುದಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
*******************************
ಕಾಣೆಯಾದವರ ಪತ್ತೆಗೆ ಮನವಿ
ಹಾಸನ
(ಕರ್ನಾಟಕ ವಾರ್ತೆ):-
ಅರಸೀಕೆರೆ ತಾಲ್ಲೂಕಿನ ಜಾವಗಲ್ ಕೋಳಗುಂದ ಗ್ರಾಮದ ಹುಚ್ಚಯ್ಯ ಎಂಬುವವರು ಮಾನಸಿಕ ರೋಗಿಯಾಗಿದ್ದು ರೋಗವನ್ನು ಚಿಕಿತ್ಸೆ ಕೊಡಿಸಿದರು ಗುಣಮುಖರಾಗದೇ ಅವರ ಮಗ ಮನೆಯಲ್ಲೇ ನೋಡಿಕೊಳ್ಳುತ್ತಿದ್ದು ನ.20 ರಂದು 2 ಗಂಟೆ ಸಮಯದಲ್ಲಿ ಊಟ ಮಾಡಿಕೊಂಡು ಆಚೆ ಹೋದವರು ರಾತ್ರಿಯಾದರೂ ಮನೆಗೆ ಬಾರದೇ ಇದ್ದಾಗ ಹುಚ್ಚಯ್ಯನವರ ಮಗ ಎಲ್ಲ ಊರುಗಳಲ್ಲಿ ಸಂಬಂಧಿಕರ ಮನೆಗಳಲ್ಲಿ ಹುಡುಕಿದರು ಪತ್ತೆಯಾಗದ ಕಾರಣ ತಡವಾಗಿ ಜಾವಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿರುತ್ತಾರೆ .
ಕಾಣೆಯಾದ ವ್ಯಕ್ತಿಯ ಹೆಸರು ಪುಲಿಗೇರಯ್ಯ ವಯಸ್ಸು 70 ವರ್ಷಗಳಾಗಿದ್ದು ಅರಸೀಕೆರೆ ತಾಲ್ಲೂಕಿನ ಜಾವಗಲ್ ಹೋಬಳಿಯ ಕೊಳಗುಂದ ಗ್ರಾಮದವರಾಗಿದ್ದಾರೆ ಕೋಲುಮುಖ ಎಣ್ಣೆಗೆಂಪು ಬಣ್ಣ, 5.5 ಅಡಿ ಎತ್ತರ ಕಾಣೆಯಾದ ಸಮಯದಲ್ಲಿ ಬಿಳಿ ಪಂಚೆ ಬಿಳಿ ಶರ್ಟ್ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾರೆ ಈ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಜಾವಗಲ್ ಪೊಲೀಸ್ ಠಾಣೆ 08174-271221, ಸಿಪಿಐ ಅರಸೀಕೆರೆ 08174 232702, ಎಸ್ ಡಿ ಪಿ ಓ ಹಾಗೂ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿ ದೂರವಾಣಿ ಸಂಖ್ಯೆ 08172-268410 ಮಾಹಿತಿಯನ್ನು ನೀಡಬಹುದಾಗಿದೆ.
****************************
ಪ್ರಧಾನ ಸಂಪಾದಕರು :-
ಹರೀಶ್ ಹೆಚ್ ಆರ್ ಕೋಟೆ
ಸುದ್ದಿ ಸಂಪಾದಕರು:-
ನಾಗೇಂದ್ರ.ಹೆಚ್ .ಎನ್
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ
Vimarsha.info