ವಿಷಯಕ್ಕೆ ಹೋಗಿ

ವಿಮರ್ಶಾ -ದಿನ ಸುದ್ದಿ

#ವಿಮರ್ಶಾ -ದಿನ ಸುದ್ದಿ 

ವಿಮರ್ಶಾ -vimarsha


ಬಸ್ ಪಾಸ್ ನವೀಕರಣಕ್ಕೆ ಅರ್ಜಿ ಆಹ್ವಾನ
ಹಾಸನ .

( ಕರ್ನಾಟಕ ವಾರ್ತೆ):-


ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 06 ಸೇವೆಗಳನ್ನು (ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್ ಪಾಸ್ ವಿಕಲಚೇತನರ ರಿಯಾಯಿತಿ ಬಸ್‍ಪಾಸ್, ಅಂಧರ ಉಚಿತ ಬಸ್‍ಪಾಸ್, ಸ್ವಾತಂತ್ರ್ಯ ಹೋರಾಟಗಾರರ ಬಸ್‍ಪಾಸ್, ಸ್ವಾತಂತ್ರ್ಯ ಹೋರಾಟಗಾರರ ಪತ್ನಿ/ವಿಧವಾ ಪತ್ನಿಯರ ಉಚಿತ ಕೂಪನ್ ಪಡೆಯಲು ಮತ್ತು ಅಪಘಾತ ಪರಿಹಾರ ನಿಧಿಗಾಗಿ) ಸೇವಾಸಿಂಧು ಪೋರ್ಟಲ್‍ನಲ್ಲಿ ಕಡ್ಡಾಯವಾಗಿ ಆನ್‍ಲೈನ್ ವ್ಯವಸ್ಥೆಯಡಿ ನಿರ್ವಹಿಸಲಾಗುತ್ತಿದೆ.
          ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ವಿತರಣೆ ಮಾಡಬೇಕಾಗಿರುವುದರಿಂದ ಫಲಾನುಭವಿಗಳು ನವೀಕರಿಸಿಕೊಳ್ಳಲು ಮತ್ತು ಹೊಸ ಬಸ್‍ಪಾಸ್‍ಗಳನ್ನು ಪಡೆದುಕೊಳ್ಳಲು ಸೇವಾಸಿಂದು https://serviceonline.gov.in/karnataka   ನಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. 
       ಸದರಿ ವಿಕಲಚೇತನ ಫಲಾನುಭವಿಗಳು ಫೆ.28ರ ಒಳಗಾಗಿ ನವೀಕರಣ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. ಫೆ 28ರ ನಂತರ ವಿಕಲಚೇತನರ ಬಸ್‍ಪಾಸ್ ನವೀಕರಣಕ್ಕೆ ಅವಕಾಶ ಇರುವುದಿಲ್ಲ. ಆನ್‍ಲೈನ್‍ನಲ್ಲಿ ಸಂಬಂಧಪಟ್ಟ ದಾಖಲೆಗಳನ್ನು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯವರಿಂದ ದೃಢೀಕರಿಸಿದ ವಿಕಲಚೇತನರ ಗುರುತಿನ ಚೀಟಿ ಅಥವಾ
ಯು.ಜಿ.ಐ.ಡಿ.ಕಾರ್ಡ್ ಮತದಾರರ ಚೀಟಿ/ಆಧಾರ್ ಕಾರ್ಡ್/ರೇಷನ್ ಕಾರ್ಡ್, ಇತ್ತೀಚಿನ ಭಾವ ಚಿತ್ರ ಅಫ್‍ಲೋಡ್ ಮಾಡುವುದು ಕಡ್ಡಾಯವಾಗಿರುತ್ತದೆ. 
        ಫಲಾನುಭವಿಗಳು ಆನ್‍ಲೈನ್ ಮುಖಾಂತರ ದಾಖಲಾತಿಗಳನ್ನು ಅಪ್‍ಲೋಡ್ ಮಾಡಿದ್ದಾಗ್ಯೂ, ಭೌತಿಕವಾಗಿ ಬಸ್‍ಪಾಸ್ ಪಡೆಯಲು ಬಂದಾಗ ಅಗತ್ಯ ದಾಖಲಾತಿಗಳು ಮತ್ತು ಮೂಲ ದಾಖಲೆಗಳು ಹಾಗೂ ಜೆರಾಕ್ಸ್ ಪ್ರತಿಯನ್ನು ಹಾಜರುಪಡಿಸಿ, ವಿಕಲಚೇತನರ (ಹೊಸ/ನವೀಕರಣ) ಬಸ್‍ಪಾಸ್‍ಗಳನ್ನು ಪಡೆಯುವಂತೆ ಎಂದು ಕ.ರಾ.ರ.ಸಾ.ನಿಗಮ ಚಿಕ್ಕಮಗಳೂರು ವಿಭಾಗದ ವಿಭಾಗೀಯನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

******************************************

ಕೊಳಚೆ ಪ್ರದೇಶದ ಫಲಾನುಭವಿಗಳಿಗೆ ಹಕ್ಕುಪತ್ರ ಒದಗಿಸಿ: ಶಾಸಕರ ಸೂಚನೆ.
ಹಾಸನ 

 (ಕರ್ನಾಟಕ ವಾರ್ತೆ):- 

ನಗರದ ಜಿಲ್ಲಾ ಬಂದಿಖಾನೆ ಹಿಂಭಾಗ ಇರುವ ಕೊಳಚೆ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದಂತೆ ಎಲ್ಲಾ ಫಲಾನುಭವಿಗಳನ್ನು ಆಯ್ಕೆ ಮಾಡಿ ಅವರಿಗೆ ಕೊಳಚೆ ಅಭಿವೃದ್ಧಿ ಮಂಡಳಿಯಿಂದ ಹಕ್ಕುಪತ್ರ ಒದಗಿಸಿ ಎಂದು ಶಾಸಕರಾದ ಪ್ರೀತಂ ಜೆ ಗೌಡ ತಿಳಿಸಿದ್ದಾರೆ
       ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಕೊಳಚೆ ನಿರ್ಮೂಲನ ಮಂಡಳಿ ನೀಡುವ  ಹಕ್ಕುಪತ್ರಗಳನ್ನು ನೊಂದಣಿ ಮಾಡಿಸಿ ಸರ್ಕಾರ ನೆರವು ಯೋಜನೆಯಡಿ ಮನೆ ನಿರ್ಮಾಣಕ್ಕಾಗಿ ಅವಕಾಶ  ಕಲ್ಪಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
      ಮನೆ ನಿರ್ಮಾಣಕ್ಕಾಗಿ ಸರ್ಕಾರದಿಂದ ಬರುವ  ಅನುದಾನ ಫಲಾನುಭವಿ ವಂತಿಕೆ ಹೊರತುಪಡಿಸಿ ಉಳಿದ ಹಣವನ್ನು ಸಾಲದ ರೂಪದಲ್ಲಿ ಒದಗಿಸಲು ಎಲ್ಲಾ ಬ್ಯಾಂಕುಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ  ಅವರು ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.
      ಸಭೆಯಲ್ಲಿ ಜಿಲ್ಲಾಧಿಕಾರಿ ಆರ್ ಗಿರೀಶ್, ಉಪವಿಭಾಗಧಿಕಾರಿ ಬಿ.ಎ. ಜಗದೀಶ್, ನಗರ ಆಯುಕ್ತರಾದ ಕೃಷ್ಣಮೂರ್ತಿ, ಭೂದಾಖಲೆಗಳ ಉಪ ನಿರ್ದೇಶಕರಾದ ಹೇಮಲತಾ ಎಂ.ಡಿ, ಎ.ಜಿ.ಎಂ ಜಗದೀಶ್ ಹಾಗೂ ಮತ್ತಿತರರು ಹಾಜರಿದ್ದರು.

*******************************************

ವಸತಿ ನಿಲಯದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ನೋಂದಣಿ
ಹಾಸನ .

(ಕರ್ನಾಟಕ ವಾರ್ತೆ):- 

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬಗ್ಗೆ ಡೇಟಾ ಸಂಗ್ರಹ ಮಾಡಲು ಹೆಚ್.ಎಂ.ಐ.ಎಸ್. ತಂತ್ರಾಂಶ ಅಭಿವೃದ್ಧಿಪಡಿಸಲಾಗಿದ್ದು, ಇದರಲ್ಲಿ ಇಲಾಖಾ ವಿದ್ಯಾರ್ಥಿ ನಿಲಯಗಳು, ಖಾಸಗಿ ಅನುದಾನಿತ ವಿದ್ಯಾರ್ಥಿ ನಿಲಯಗಳು /ಸರ್ಕಾರಿ/ ವಿಶ್ವವಿದ್ಯಾನಿಲಯ /ಸರ್ಕಾರಿ ಕಾಲೇಜು/ಸರ್ಕಾರಿ ಸ್ವಾಯತ್ತ ಕಾಲೇಜುಗಳ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳು, ಖಾಸಗಿ ವಿಶ್ವವಿದ್ಯಾನಿಲಯ, ಖಾಸಗಿ ಕಾಲೇಜು/ಖಾಸಗಿ ಸ್ವಾಯತ್ತ ಕಾಲೇಜುಗಳ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳನ್ನು ಸಂಬಂಧಪಟ್ಟ ತಾಲ್ಲೂಕಿನ ಸಹಾಯಕ ನಿರ್ದೇಶಕರು ಒದಗಿಸಲಾದ ಲಾಗಿನ್ ಮೂಲಕ ಹೊಸದಾಗಿ ಹಾಸ್ಟೆಲ್ ನೋಂದಣಿ ಮಾಡಬೇಕಾಗಿರುತ್ತದೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

******************************************


ಮಹಿಳಾ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನ
ಹಾಸನ 

(ಕರ್ನಾಟಕ ವಾರ್ತೆ):

- ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಹಾಸನ ವತಿಯಿಂದ 2020-21 ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಅಯವ್ಯದಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿ ನೀಡುವ ಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನವಿರುವ ಅದರಲ್ಲೂ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಇಬ್ಬರು ಮಹಿಳಾ ಅಭ್ಯರ್ಥಿಗಳಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
   ಜಿಲ್ಲಾ ಕಚೇರಿ ಕ್ಷೆತ್ರಪ್ರಚಾರ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅಪ್ರೆಂಟೀಸ್ ತರಬೇತಿಯ ಅವಧಿ 10 ತಿಂಗಳಾಗಿದ್ದು ಫೆಬ್ರವರಿ 2021 ರಿಂದ ನವೆಂಬರ್ 2021ರವರೆಗೆ ಇರುತ್ತದೆ. ಪ್ರತಿ ಮಾಹೆ ಒಬ್ಬ ಮಹಿಳಾ ಅಭ್ಯರ್ಥಿಗೆ ರೂ.15 ಸಾವಿರ ಸಂಭಾವನೆ ನೀಡಲಾಗುತ್ತದೆ. ಆಯಾ ಜಿಲ್ಲೆಯ ಮಹಿಳಾ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು, ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ಸಿಗದಿದ್ದಲ್ಲಿ ಅಕ್ಕ ಪಕ್ಕದ ಜಿಲ್ಲೆಯಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ವಯೋಮಿತಿ 40 ವರ್ಷ ದಾಟಿರಬಾರದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ 08172-295208 ಯನ್ನು ಸಂಪರ್ಕಿಸಬಹುದಾಗಿದೆ.
        
******************************************


ಆಲೂಗೆಡ್ಡೆ ಬೆಳೆ ಕ್ಷೇತ್ರೋತ್ಸವ
ಹಾಸನ 

(ಕರ್ನಾಟಕ ವಾರ್ತೆ):-

ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಸೋಮನಹಳ್ಳಿಕಾವಲು, ಹಾಸನದ ರಾಷ್ಟ್ರೀಯ ಕೃಷಿ ವಿಕಾಸಯೋಜನೆಯಡಿಯಲ್ಲಿ ಅಭಿವೃದ್ಧಿಪಡಿಸಿದ ತಂತ್ರಜ್ಞಾನದಲ್ಲಿ ಅಂಗಾಂಶ ಕೃಷಿ ಕುಡಿ ಕಾಂಡ ಸಸಿಗಳಿಂದ ಆಲೂಗಡ್ಡೆ ಉತ್ಪಾದನೆ ವಿಷಯದ ಕುರಿತು ತೋಟಗಾರಿಕೆ ಇಲಾಖೆ, ಹಾಸನ ಇವರ ಸಂಯುಕ್ತ ಆಶ್ರಯದಲ್ಲಿ ಆಲೂಗಡ್ಡೆ ಬೆಳೆ ಕ್ಷೇತ್ರೋತ್ಸವವನ್ನು ಜ.19 ರಂದು ಅತ್ಯಂತ ಯಶಸ್ವಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸುಮಾರು 100 ಕ್ಕೂ ಮೇಲ್ಪಟ್ಟು ಆಲೂಗಡ್ಡೆ ಬೆಳೆಗಾರರು ಮತ್ತು ನರ್ಸರಿ ಉತ್ಪಾದಕರು ಕ್ಷೇತ್ರೋತ್ಸವವನ್ನು ವೀಕ್ಷಿಸಿ ಹೊಸ ತಂತ್ರಜ್ಞಾನದ ಪ್ರಾತ್ಯಕ್ಷಿಕೆಯ ಉಪಯೋಗ ಪಡೆದರು. 
   ಈ ಕ್ಷೇತ್ರೋತ್ಸವದಲ್ಲಿ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಮುಖ್ಯಸ್ಥರು ಡಾ. ಹೆಚ್. ಅಮರನಂಜುಂಡೇಶ್ವರವರು ಪ್ರಾಸ್ಥಾವಿಕ ಭಾಷಣ ಮಾಡಿದರು. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆಯ ಸಂಶೋಧನಾ ನಿರ್ದೇಶಕರಾದ ಡಾ. ಡಿ. ಆರ್. ಪಾಟೀಲ್‍ರವರು ಅಧ್ಯಕ್ಷತೆ ವಹಿಸಿ ಡಾ. ವೈ. ಕೆ. ಕೋಟಿಕಲ್, ವಿಸ್ತರಣಾ ನಿರ್ದೇಶಕರು ಉದ್ಗಾಟಿಸಿದರು. ಮುಖ್ಯ ಅತಿಥಿಗಳಾಗಿ ಕಾರೇಕೆರೆ ಕೃಷಿ ಮಹಾವಿದ್ಯಾಲಯದ ಮುಖ್ಯಸ್ಥರು ಡಾ. ಎನ್. ದೇವಕುಮಾರ, ತೋಟಗಾರಿಕೆ ಉಪನಿರ್ದೇಶಕ ಹೆಚ್. ಆರ್. ಯೋಗೇಶ, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಬೆಂಗಳೂರು ಪ್ರಾಧ್ಯಾಪಕರಾದ ಡಾ. ಪಿ. ಎಮ್. ಮುನಿಕೃಷ್ಣಪ್ಪ ಹಾಗೂ ಕೃಷಿ ವಿಜ್ಞಾನ ಕೇಂದ್ರ, ಕಂದಲಿಯ ಮುಖ್ಯಸ್ಥರು ಡಾ. ರಾಜೇಗೌಡ, ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಮುಖ್ಯಸ್ಥರು ಡಾ. ಕಿರಣಕುಮಾರ್. ಕೆ. ಸಿ., ಅಂತರರಾಷ್ಟ್ರೀಯ ಆಲೂಗಡ್ಡೆ ಸಂಸ್ಥೆ, ಬೆಂಗಳೂರು ರವೀಂಧ್ರನಾಥ ರೆಡ್ಡಿ, ಕೃಷಿ ಸಂಶೋಧನಾ ಕೇಂದ್ರ, ಗುಂಜೇವು ಹಿರಿಯ ಕ್ಷೇತ್ರ ಅಧೀಕ್ಷಕರಾದ ಡಾ. ಎಮ್. ಎಸ್. ನಾಗರಾಜ್, ಗ್ರೀನ್ ಇನೋವೇಶನ್ ಸೆಂಟರ್, ಬೆಂಗಳೂರ. ಸುಹಾಸ್ ಹಾಗೂ ಹಾಸನ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರಗಳು ಬಾಗವಹಿಸಿದ್ದರು. 
  

*****************************************



ಜಿಲ್ಲೆಯಲ್ಲಿಂದು ಹೊಸದಾಗಿ 10 ಕೋವಿಡ್ ಪ್ರಕರಣಗಳು ಪತ್ತೆ
ಹಾಸನ.

(ಕರ್ನಾಟಕ ವಾರ್ತೆ):- 

ಜಿಲ್ಲೆಯಲ್ಲಿಂದು ಹೊಸದಾಗಿ 10 ಕೋವಿಡ್  ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 28,352 ಏರಿಕೆಯಾಗಿದೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ 66 ಮಂದಿ ಸಕ್ರಿಯ ಸೋಂಕಿತರು ಮಾತ್ರ ಹಾಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
       
        ಈವರೆಗೆ 27,821 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 9 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕೋವಿಡ್‍ನಿಂದ ಯಾವುದೇ ಸಾವು ಸಂಭವಿಸಿಲ್ಲ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 465 ಮಂದಿ ಸಾವನ್ನಪ್ಪಿದಾರೆ. 
          
      ಇಂದು ಪತ್ತೆಯಾದ 10 ಕೋವಿಡ್ ಪ್ರಕರಣಗಳಲ್ಲಿ ಹಾಸನ ತಾಲ್ಲೂಕಿನಲ್ಲಿ  7 ಮಂದಿಗೆ, ಬೇಲೂರು, ಚನ್ನರಾಯಪಟ್ಟಣ, ಹೊಳೆನರಸೀಪುರ, ತಲಾ ಒಬ್ಬರಿಗೆ ಕೋವಿಡ್ ದೃಡ ಪಟ್ಟಿದೆ  ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ತಿಳಿಸಿದ್ದಾರೆ. 
                 

 ******************************************







ಪ್ರಧಾನ ಸಂಪಾದಕರು :-

ಹರೀಶ್ ಹೆಚ್ ಆರ್ 
(ಕೋಟೆ )

ಸುದ್ದಿ ಸಂಪಾದಕರು :-

ನಾಗೇಂದ್ರ.ಹೆಚ್. ಎನ್. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ರೈತ ದಿನ ಆಚರಣೆ-ಸಾವಯವ ಕೃಷಿ ಪದ್ಧತಿಗೆ ಸಲಹೆ.

👇👇👇👇👇👇👇👇👇👇👇👇👇 ರೈತ ದಿನಾಚರಣೆ https://youtube.com/shorts/EGX4c_IVzY8?si=erkB19_6MH0KmBG6 ಮೊಸಳೆಹೊಸಹಳ್ಳಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ರಾಷ್ಟ್ರೀಯ ರೈತರ ದಿನದ ಅಂಗವಾಗಿ ಸಾವಯವ ಕೃಷಿ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಪುಣ್ಯಭೂಮಿ ಪರಿಸರ ಪ್ರಶಸ್ತಿ ಮತ್ತು ಶ್ರೇಷ್ಠ ಕೃಷಿಕ ಪ್ರಶಸ್ತಿ ಪುರಸ್ಕೃತರಾದ ಕಟ್ಟಾಯ ಹೋಬಳಿಯ ಬ್ಯಾಡರಹಳ್ಳಿಯ ಸಾವಯವ ಕೃಷಿಕರು, ಪ್ರಗತಿಪರ ರೈತರು ಮತ್ತು ಪಾರಂಪರಿಕ ವೈದ್ಯರಾದ ಶ್ರೀಯುತ ರವಿಶಂಕರ್ ಅವರು ಆಗಮಿಸಿದ್ದರು. ಸಂಸ್ಥೆಯಲ್ಲಿ ರೈತರಿಂದ ಗಿಡ ನೆಡುವುದರ ಮೂಲಕ ರೈತರ ದಿನವನ್ನು ಉದ್ಘಾಟಿಸಲಾಯಿತು. ಸಾವಯವ ಕೃಷಿಯನ್ನು ಉದ್ದೇಶಿಸಿ ಮಾತನಾಡಿದ ಇವರು ವಿದ್ಯಾರ್ಥಿಗಳಿಗೆ ಸಾವಯವ ಕೃಷಿಯ ಕ್ರಮಗಳು, ಆರೋಗ್ಯಕರ ಪ್ರಯೋಜನಗಳನ್ನು ವಿವರಿಸುತ್ತಾ, ಬೆಳೆಗೆ ಯಾವುದೇ ರಾಸಾಯನಿಕ ಗೊಬ್ಬರಗಳು, ಕೀಟನಾಶಕಗಳನ್ನು ಬಳಸದೇ ಕೇವಲ ಹಸುವಿನ ಸಗಣಿ ಮತ್ತು ಗಂಜುಳದಿಂದ ರಸಗೊಬ್ಬರ ಮತ್ತು ಸಾವಯವ ಕೀಟನಾಶಕವನ್ನು ತಯಾರಿಸಿ ಮಣ್ಣಿನ ಫಲವತ್ತತೆಯನ್ನು ಹೇಗೆ ಹೆಚ್ಚಿಸುವುದು ಮತ್ತು ಯಾವ ಕಾಲ, ನಕ್ಷತ್ರ, ಹವಾಮಾನ ಮತ್ತು ಮಾಸಕ್ಕನುಗುಣವಾಗಿ ಯಾವ ಬೆಳೆ ಬೆಳೆಯಬೇಕೆಂಬುದನ್ನು ರೈತರು ಸೂಕ್ತವಾಗಿ ಅರಿತಿರಬೇಕು ಮತ್ತು ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಗೊಳಿಸಿಕೊಳ್ಳ

ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನ ಆಚರಣೆ.

ಹಾಸನ ತಾಲ್ಲೂಕಿನ ಮೊಸಳೆಹೊಸಹಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕದ ವತಿಯಿಂದ ರೆಡ್ ರಿಬ್ಬನ್ ಕ್ಲಬ್ ಸಹಯೋಗದೊಂದಿಗೆ, ವಿಶ್ವ ಏಡ್ಸ್ ದಿನದ ಪ್ರಯುಕ್ತ ಸಂಸ್ಥೆಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.. . ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಾಸನ ಜಿಲ್ಲಾ ಏಡ್ಸ್ ಪ್ರಿವೆನ್ಷನ್ ಮತ್ತು ಕಂಟ್ರೋಲ್ ಘಟಕದ ಸೂಪರ್ವೈಸರ್ ಶ್ರೀಯುತ ರವಿಕುಮಾರ್ ವಿ. ಬಲ್ಲೇನಹಳ್ಳಿ ಯವರು ಮತ್ತು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀಯುತ ನಾಗೇಶ್ ರವರು ಹೆಚ್.ಐ.ವಿ. ಸೋಂಕಿನ ಬಗ್ಗೆ ವಿದ್ಯಾರ್ಥಿಗಳಿಗೆ ಸಂಕ್ಷಿಪ್ತ ಮಾಹಿತಿ ನೀಡುವ ಮೂಲಕ ಜಾಗೃತಿ ಮೂಡಿಸಿದರು.  ಮುಂದುವರೆದು ಸಂಸ್ಥೆಯಲ್ಲಿ ಏಡ್ಸ್/ಹೆಚ್.ಐ.ವಿ. ಸೋಂಕಿನ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸವಾಗಿ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಪೋಸ್ಟರ್ ಡಿಸೈನ್ ಮತ್ತು ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು ಮತ್ತು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು ಸಂಸ್ಥೆಯ ಎನ್.ಎಸ್.ಎಸ್. ಅಧಿಕಾರಿಗಳಾದ ಶ್ರೀಯುತ ವೀರಭದ್ರಸ್ವಾಮಿ ಕೆ.ಎಂ. ರವರು, ಎನ್.ಎಸ್.ಎಸ್. ಚಟುವಟಿಕೆಯ ಅಡಿಯಲ್ಲಿ ವಿದ್ಯಾರ್ಥಿಗಳು ಸುತ್ತಮುತ್ತಲ, ಮೂರು ಗ್ರಾಮಗಳನ್ನು ದತ್ತು ಪಡೆದು ಸ್ವಚ್ಛತೆ, ಆರೋಗ್ಯ, ಉನ್ನತ ಶಿಕ್ಷಣ ಮುಂತಾದ ವಿಷಯಗಳ ಬಗ್ಗೆ ಜಾಗೃತಿ

ಹಾಸನ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗಾವಕಾಶಗಳು.

ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ನೆಲೆಸಿರುವ ಗೃಹಿಣಿಯರು, ನಿವೃತ್ತ ಅಧಿಕಾರಿಗಳು /ನೌಕರರು ಮತ್ತು ನಿರುದ್ಯೋಗಿಗಳಿಗೆ ಆರ್ಥಿಕ ವಲಯದಲ್ಲಿ ಹೂಡಿಕೆ ಇಲ್ಲದೆ ವೃತ್ತಿ ಅವಕಾಶಗಳು / ವ್ಯಾಪಾರ ಅವಕಾಶಗಳು  ಪುರುಷ ಮತ್ತು  ಮಹಿಳೆಯರಿಗೆ   ವಯಸ್ಸಿನ ಮಿತಿ: - 25 ರಿಂದ 65 ವರ್ಷಗಳು.  ದಯವಿಟ್ಟು ನಿಮ್ಮ ವಿವರಗಳನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ.  freelanceadvertisingthassan@gmail.com  ಅಥವಾ  ಸಂಪರ್ಕಿಸಿ  7090899728 Career opportunities /business opportunities with out an investments in financial sector for housewives ,retired officials /employees and unemployed persons residing in Hassan district, Karnataka state India For both male and female. Age limit:- 25 to 65 years. Please send your details to below email id. freelanceadvertisingathassan@gmail.com Or  Contact  070908 99728