ವಿಷಯಕ್ಕೆ ಹೋಗಿ

ಬಿಲ್ಡರ್ಸ್ ಗಳು ಸರ್ಕಾರಿ ಯೋಜನೆಗಳಲ್ಲಿ ಸಕ್ರೀಯವಾಗಿ ತೊಡಗಲಿ.- ಸಚಿವ ಕೆ ಗೋಪಾಲಯ್ಯ

ಬಿಲ್ಡರ್ಸ್‍ಗಳು ಸರ್ಕಾರದ ಯೋಜನೆಗಳಲ್ಲಿ ಸಕ್ರೀಯವಾಗಿ ತೊಡಗಲಿ: ಸಚಿವ ಕೆ. ಗೋಪಾಲಯ್ಯ

(ಕರ್ನಾಟಕ ವಾರ್ತೆ ): 

ಜಿಲ್ಲೆಯ ಬಿಲ್ಡರ್ಸ್ ಗಳು ಸರ್ಕಾರದ ವಸತಿ ಯೋಜನೆಗಳ ಅನುಷ್ಠಾನದಲ್ಲಿ ತೊಡಗಿ ಬಡವರಿಗೆ  ಉತ್ತಮ ಗುಣಮಟ್ಟದ ಮನೆಗಳನ್ನು  ನಿರ್ಮಾಣಮಾಡಿ ತಮ್ಮ  ಆರ್ಥಿಕತೆಯನ್ನು  ಚುರುಕುಗೊಳಿಸಿಕೊಳ್ಳಿ  ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಹಾರ, ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಗೋಪಾಲಯ್ಯ ರವರು ಕರೆ ನೀಡಿದ್ದಾರೆ. 

     ನಗರದ ಜ್ಞಾನಕ್ಷಿ ಸಮುದಾಯ ಭವನದಲ್ಲಿ ಬಿಲ್ಡ್‍ರ್ಸ್  ಅಸೊಸಿಯೇಷನ್ ಆಫ್ ಇಂಡಿಯಾ ವತಿಯಿಂದ ಏರ್ಪಡಿಸಿದ್ದ  ಕಟ್ಟಡ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

   ಕೋವಿಡ್ 19 ಹಿನ್ನೆಯಲ್ಲಿ ದೇಶದ ಎಲ್ಲಾ ವಲಯದಲ್ಲಿ ಅಭಿವೃದ್ದಿ ಕುಂಠಿತವಾಗಿತ್ತು ಇಂತಹ ಪಿರಿಸ್ಥಿಯಲ್ಲಿ  ಬಿಲ್ಡರ್ಸ್ ಮತ್ತು ಕೈಗಾರಿಕೋದ್ಯಮಿಗಳು  ಸರ್ಕಾರಿ ವಲಯದ ಕಟ್ಟಡ ಮತ್ತಿತರ ನಿರ್ಮಾಣ  ಯೋಜನೆಗಳಲ್ಲಿ ಸಕ್ರೀಯವಾಗಿ ತೊಡಗುವ ಪರಿಸ್ಥಿತಿ ಸುಧಾರಣೆ ಮಾಡಲು ಮೂಲಕ ಪ್ರಯತ್ನಿಸಿ ಎಂದು ಹೇಳಿದರು.

     ಕೇಂದ್ರ ಸರ್ಕಾರದ ಆತ್ಮ ನಿರ್ಭರ ಭಾರತಿ  ಯೋಜನೆ ಮೂಲಕ ಸಂಕಷ್ಠದಲ್ಲಿರುವವರ  ಶ್ರೇಯಸ್ಸಿಗೆ ನೆರವಾಗಲಾಗುತ್ತದೆ ಅದೇ ರೀತಿ ರಾಜ್ಯ ಸರ್ಕಾರವೂ  ಹಲವು ಯೋಜನೆಗಳ ಮೂಲಕ ಸಂಕಷ್ಠ ಪರಿಹಾರಕ್ಕೆ ಮುಂದಾಗಿದೆ ಎಂದು  ಸಚಿವರು ಹೇಳಿದರು. ಮುಂದಿನ ಕೆಲವು ತಿಂಗಳಲ್ಲಿ ದೇಶದ ಆರ್ಥಿಕತೆ ಇನ್ನೂ  ಉತ್ತಮ ಹಾದಿಯಲ್ಲಿ ಸಾಗುವ ನಿರೀಕ್ಷೆ ಇದ್ದು ಇದರಲ್ಲಿ ಬಿಲ್ಡರ್ಸ್  ಮತ್ತು ಕೈಗಾರಿಕೋದ್ಯಮಿ ಪಾತ್ರವೂ ಮುಖ್ಯವಾಗಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

    ಶಾಸಕರಾದ ಪ್ರೀತಮ್ ಜೆ ಗೌಡ ರವರು ಮಾತನಾಡಿ ಜಿಲ್ಲೆಯಲ್ಲಿ  ನುರಿತ ಕೌಶಲ್ಯಯುತ ಕಟ್ಟಡ ಕಾರ್ಮಿಕರ ಕೊರತೆ ಇದ್ದು ಇದನ್ನು ಸರಿಪಡಿಸಲು  ಸ್ಥಳೀಯವಾಗಿ ತರಬೇತಿ ನೀಡುವ ಅಗತ್ಯವಿದೆ. ಉದ್ಯೋಗ ವಿನಿಮಯ ಕಚೇರಿಯಿಂದ ಕೌಶಲ್ಯ ತರಬೇತಿ ನೀಡಲಾಗುತ್ತಿಯಾದರೂ  ಅದರ ಮಿತಿ ಸೀಮಿತವಾಗಿದೆ,  ಹಾಗಾಗಿ ಕೈಗಾರಿಕೋದ್ಯಮಿಗಳು ಮತ್ತು ಬಿಲ್ಡರ್ಸ್‍ಗಳು ಸ್ಥಳಿಯ ಕಾರ್ಮಿಕರಿಗೆ  ಕೌಶಲ್ಯ ತರಬೇತಿ ನೀಡುವ ವ್ಯವಸ್ಥೆ ಮಾಡಬೇಕು ಅದಕ್ಕೆ ಸರ್ಕಾರ ಕೌಶಲ್ಯ ತರಬೇತಿ ಯೋಜನೆಯಡಿ ದೊರೆಯುವ ಅನುದಾನವನ್ನು ಬಿಲ್ಡರ್ಸ್  ಅಸೋಷಿಯೇಶನ್‍ಗೆ ಕೊಡಿಸುವುದಾಗಿ ಹೇಳಿದರು.

    ಎಫ್.ಕೆ.ಸಿ.ಸಿ.ಐ ಅಧ್ಯಕ್ಷರಾದ ಪೆರಿಕಲ್ ಸುಂದರ್ ರವರು ಮಾತನಾಡಿ ದೇಶದ ಹೆಚ್ಚಿನ ಆರ್ಥಿಕ ಚಟುವಟಿಕೆಯನ್ನೂ ಸ್ಥಗಿತಗೊಳಿಸಿದ ಲಾಕಡೌನ್  ರಿಯಲ್ ಎಸ್ಟೇಟ್ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ನಷ್ಟಬಂದು  ಮಾಡಿದೆ ಹಾಗೂ ಜುಲೈ ಸೆಪ್ಟೆಂಬರ್ ನಡುವಿನ ಅವಧಿಯಲ್ಲಿ ಭಾರತದ ಎಂಟು ಪ್ರಮುಖ ನಗರಗಳಲ್ಲಿ ವಸತಿ ಕ್ಷೇತ್ರದಲ್ಲಿನ ಮಾರಾಟವೂ ಶೇ.66% ರಷ್ಟು ಕಡಿಮೆಯಾಗಿದೆ ಭಾರತೀಯ ರಿಯಲ್ ಎಸ್ಟೇಟ್ ಸ್ಥಿತಿಯನ್ನು ಕಾಪಾಡುವುದು ಹಾಗೂ  ಜಿ.ಡಿ.ಪಿ ಬೆಳವಣಿಗೆ ದೃಷ್ಟಿಕೋನದಿಂದ ಮಾತ್ರವಲ್ಲದೆ ಉದ್ಯೋಗ ಸೃಷ್ಟಿಗೆ ಒತ್ತು ನೀಡಬೇಕು ಎಂದರು. 

   ಸಭೆಯಲ್ಲಿ ಜಿಲ್ಲಾಧಿಕಾರಿ ಆರ್ ಗಿರೀಶ್, ರಾಷ್ಟ್ರೀಯ ಕೈಗಾರಿಕೋದ್ಯಮ ಅಧ್ಯಕ್ಷ ಮು.ಮೋಹನ್ ಜಿಲ್ಲಾ ಕೈಗಾರಿಕೋದ್ಯಮಿ ನಾಗೇಂದ್ರ,  ಎಫ್.ಕೆ.ಸಿ.ಸಿ.ಐ ಪ್ರಮುಖರಾದ ಕಿರಣ್ ಮತ್ತಿತರರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ರೈತ ದಿನ ಆಚರಣೆ-ಸಾವಯವ ಕೃಷಿ ಪದ್ಧತಿಗೆ ಸಲಹೆ.

👇👇👇👇👇👇👇👇👇👇👇👇👇 ರೈತ ದಿನಾಚರಣೆ https://youtube.com/shorts/EGX4c_IVzY8?si=erkB19_6MH0KmBG6 ಮೊಸಳೆಹೊಸಹಳ್ಳಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ರಾಷ್ಟ್ರೀಯ ರೈತರ ದಿನದ ಅಂಗವಾಗಿ ಸಾವಯವ ಕೃಷಿ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಪುಣ್ಯಭೂಮಿ ಪರಿಸರ ಪ್ರಶಸ್ತಿ ಮತ್ತು ಶ್ರೇಷ್ಠ ಕೃಷಿಕ ಪ್ರಶಸ್ತಿ ಪುರಸ್ಕೃತರಾದ ಕಟ್ಟಾಯ ಹೋಬಳಿಯ ಬ್ಯಾಡರಹಳ್ಳಿಯ ಸಾವಯವ ಕೃಷಿಕರು, ಪ್ರಗತಿಪರ ರೈತರು ಮತ್ತು ಪಾರಂಪರಿಕ ವೈದ್ಯರಾದ ಶ್ರೀಯುತ ರವಿಶಂಕರ್ ಅವರು ಆಗಮಿಸಿದ್ದರು. ಸಂಸ್ಥೆಯಲ್ಲಿ ರೈತರಿಂದ ಗಿಡ ನೆಡುವುದರ ಮೂಲಕ ರೈತರ ದಿನವನ್ನು ಉದ್ಘಾಟಿಸಲಾಯಿತು. ಸಾವಯವ ಕೃಷಿಯನ್ನು ಉದ್ದೇಶಿಸಿ ಮಾತನಾಡಿದ ಇವರು ವಿದ್ಯಾರ್ಥಿಗಳಿಗೆ ಸಾವಯವ ಕೃಷಿಯ ಕ್ರಮಗಳು, ಆರೋಗ್ಯಕರ ಪ್ರಯೋಜನಗಳನ್ನು ವಿವರಿಸುತ್ತಾ, ಬೆಳೆಗೆ ಯಾವುದೇ ರಾಸಾಯನಿಕ ಗೊಬ್ಬರಗಳು, ಕೀಟನಾಶಕಗಳನ್ನು ಬಳಸದೇ ಕೇವಲ ಹಸುವಿನ ಸಗಣಿ ಮತ್ತು ಗಂಜುಳದಿಂದ ರಸಗೊಬ್ಬರ ಮತ್ತು ಸಾವಯವ ಕೀಟನಾಶಕವನ್ನು ತಯಾರಿಸಿ ಮಣ್ಣಿನ ಫಲವತ್ತತೆಯನ್ನು ಹೇಗೆ ಹೆಚ್ಚಿಸುವುದು ಮತ್ತು ಯಾವ ಕಾಲ, ನಕ್ಷತ್ರ, ಹವಾಮಾನ ಮತ್ತು ಮಾಸಕ್ಕನುಗುಣವಾಗಿ ಯಾವ ಬೆಳೆ ಬೆಳೆಯಬೇಕೆಂಬುದನ್ನು ರೈತರು ಸೂಕ್ತವಾಗಿ ಅರಿತಿರಬೇಕು ಮತ್ತು ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಗೊಳಿಸಿಕೊಳ್ಳ

ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನ ಆಚರಣೆ.

ಹಾಸನ ತಾಲ್ಲೂಕಿನ ಮೊಸಳೆಹೊಸಹಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕದ ವತಿಯಿಂದ ರೆಡ್ ರಿಬ್ಬನ್ ಕ್ಲಬ್ ಸಹಯೋಗದೊಂದಿಗೆ, ವಿಶ್ವ ಏಡ್ಸ್ ದಿನದ ಪ್ರಯುಕ್ತ ಸಂಸ್ಥೆಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.. . ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಾಸನ ಜಿಲ್ಲಾ ಏಡ್ಸ್ ಪ್ರಿವೆನ್ಷನ್ ಮತ್ತು ಕಂಟ್ರೋಲ್ ಘಟಕದ ಸೂಪರ್ವೈಸರ್ ಶ್ರೀಯುತ ರವಿಕುಮಾರ್ ವಿ. ಬಲ್ಲೇನಹಳ್ಳಿ ಯವರು ಮತ್ತು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀಯುತ ನಾಗೇಶ್ ರವರು ಹೆಚ್.ಐ.ವಿ. ಸೋಂಕಿನ ಬಗ್ಗೆ ವಿದ್ಯಾರ್ಥಿಗಳಿಗೆ ಸಂಕ್ಷಿಪ್ತ ಮಾಹಿತಿ ನೀಡುವ ಮೂಲಕ ಜಾಗೃತಿ ಮೂಡಿಸಿದರು.  ಮುಂದುವರೆದು ಸಂಸ್ಥೆಯಲ್ಲಿ ಏಡ್ಸ್/ಹೆಚ್.ಐ.ವಿ. ಸೋಂಕಿನ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸವಾಗಿ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಪೋಸ್ಟರ್ ಡಿಸೈನ್ ಮತ್ತು ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು ಮತ್ತು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು ಸಂಸ್ಥೆಯ ಎನ್.ಎಸ್.ಎಸ್. ಅಧಿಕಾರಿಗಳಾದ ಶ್ರೀಯುತ ವೀರಭದ್ರಸ್ವಾಮಿ ಕೆ.ಎಂ. ರವರು, ಎನ್.ಎಸ್.ಎಸ್. ಚಟುವಟಿಕೆಯ ಅಡಿಯಲ್ಲಿ ವಿದ್ಯಾರ್ಥಿಗಳು ಸುತ್ತಮುತ್ತಲ, ಮೂರು ಗ್ರಾಮಗಳನ್ನು ದತ್ತು ಪಡೆದು ಸ್ವಚ್ಛತೆ, ಆರೋಗ್ಯ, ಉನ್ನತ ಶಿಕ್ಷಣ ಮುಂತಾದ ವಿಷಯಗಳ ಬಗ್ಗೆ ಜಾಗೃತಿ

ಹಾಸನ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗಾವಕಾಶಗಳು.

ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ನೆಲೆಸಿರುವ ಗೃಹಿಣಿಯರು, ನಿವೃತ್ತ ಅಧಿಕಾರಿಗಳು /ನೌಕರರು ಮತ್ತು ನಿರುದ್ಯೋಗಿಗಳಿಗೆ ಆರ್ಥಿಕ ವಲಯದಲ್ಲಿ ಹೂಡಿಕೆ ಇಲ್ಲದೆ ವೃತ್ತಿ ಅವಕಾಶಗಳು / ವ್ಯಾಪಾರ ಅವಕಾಶಗಳು  ಪುರುಷ ಮತ್ತು  ಮಹಿಳೆಯರಿಗೆ   ವಯಸ್ಸಿನ ಮಿತಿ: - 25 ರಿಂದ 65 ವರ್ಷಗಳು.  ದಯವಿಟ್ಟು ನಿಮ್ಮ ವಿವರಗಳನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ.  freelanceadvertisingthassan@gmail.com  ಅಥವಾ  ಸಂಪರ್ಕಿಸಿ  7090899728 Career opportunities /business opportunities with out an investments in financial sector for housewives ,retired officials /employees and unemployed persons residing in Hassan district, Karnataka state India For both male and female. Age limit:- 25 to 65 years. Please send your details to below email id. freelanceadvertisingathassan@gmail.com Or  Contact  070908 99728