19 ನೇ ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನ ಹಾಸನ (ಕರ್ನಾಟಕ ವಾರ್ತೆ):- ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾಮಟ್ಟದ ವತಿಯಿಂದ ಫೆ.20 ಮತ್ತು 21 ರಂದು ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ 19 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆ. 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಿಯೋಜಿತ ಸಮ್ಮೇಳನಾಧ್ಯಕ್ಷರಾದ ಡಾ.ದೊಡ್ಡರಂಗೇಗೌಡರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿರುವರು, ಅಧ್ಯಕ್ಷತೆಯನ್ನು ಶಾಸಕರಾದ ಪ್ರೀತಂ ಗೌಡ ವಹಿಸಲಿದ್ದು ಗೌರವ ಉಪಸ್ಥಿತರಾಗಿ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ಲೋಕಸಭಾ ಸಂಸದರಾದ ಪ್ರಜ್ವಲ್ ರೇವಣ್ಣ, ಕೆಂದ್ರ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷರಾದ ಮನು ಬಳಿಗಾರ್ ಭಾಗವಹಿಸುವವರು. ಚಿತ್ರಕಲೆ ಪ್ರದರ್ಶನ ಮಳಿಗೆಗೆ ಶಾಸಕರಾದ ಎಚ್.ಕೆ ಕುಮಾರಸ್ವಾಮಿ, ಹೆಚ್.ಡಿ ರೇವಣ್ಣ ಚಾಲನೆ ನೀಡುವರು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ವೇತಾ ದೇವರಾಜು, ಕ. ರಾ. ರ. ಸಾ. ಸಂ ಉಪಾಧ್ಯಕ್ಷರಾದ ಎಸ್.ಎನ್ ಈಶ್ವರಪ್ಪ ನವರು ಪುಸ್ತಕ ಮಳಿಗೆ ಉದ್ಘಾಟನೆಯನ್ನು ಮಾಡಲಿರುವವರು. ಜಿಲ್ಲಾಧಿಕಾರಿ ಆರ್.ಗಿರೀಶ್ ಕನ್ನಡ ನುಡಿ ಸಂದೇಶ ನೀಡುವವರು. ಸಮ್ಮೇಳಾನಾಧ್ಯಕ್ಷರಾಗಿ ಮೇಟಿಕೆರೆ ಹಿರಿಯಣ್ಣ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಯಕರಹಳ್ಳಿ ಮಂಜೇಗೌಡ, ಜಿಲ್ಲಾ ಕರ್ನಾಟಕ ಸಾಹಿತ್ಯ ಪರಿಷತ್ ಗ...