ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಮಾರ್ಚ್, 2021 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ
ವಿಮರ್ಶಾ -vimarsha   

Corona lockdown and Indian economical development

subscribe and share

ವಿಮರ್ಶಾ -vimarsha

ಒತ್ತಡದ ಕೆಲಸಗಳಿಗೆ ಕ್ರೀಡೆಗಳಿಂದ ಚೈತನ್ಯ :-ನ್ಯಾಯಮೂರ್ತಿ ನಾರಾಯಣ ದಾಸ್.

ಒತ್ತಡದ ಕೆಲಸಗಳಿಗೆ ಕ್ರೀಡೆಗಳಿಂದ ಚೈತನ್ಯ : ನ್ಯಾ. ನಾರಾಯಣ ಪ್ರಸಾದ್ ಹಾಸನ ಮಾ.05 (ಕರ್ನಾಟಕ ವಾರ್ತೆ):- ಸದಾ ಒತ್ತಡದಲ್ಲಿ ಕೆಲಸ ಮಾಡುವ ಪೊಲೀಸರಿಗೆ ದೈಹಿಕ ಹಾಗೂ ಮಾನಸಿಕ ಸಾಮಥ್ರ್ಯ ಮತ್ತು ಉತ್ತಮ ವ್ಯಕ್ತಿತ್ವ ರೂಪಿಸಲು ಹಾಗೂ ವೃತ್ತಿಯಲ್ಲಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಕ್ರೀಡೆ ಹೆಚ್ಚು ಸಹಕಾರಿಯಾಗಲಿದೆ ಎಂದು 2ನೇ ಹೆಚ್ಚುವರಿ ಹಾಗೂ ಜಿಲ್ಲಾ ಸತ್ರ ನ್ಯಾಯಾಧೀಶರಾದ ನಾರಾಯಣ ಪ್ರಸಾದ್ ಅವರು ತಿಳಿಸಿದ್ದಾರೆ. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಹಾಸನ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಪೊಲೀಸರ ಆರೋಗ್ಯ ಪೊಲೀಸರಿಗಿಂತ ಹೆಚ್ಚಾಗಿ ಸಮಾಜಕ್ಕೆ ಬಹುಮುಖ್ಯವಾದದ್ದು ಎಂದು ಹೇಳಿದರು. ಪೊಲೀಸರು ಕೆಲ ಸಮಯವಾದರು ಕ್ರೀಡೆಯಲ್ಲಿ ಭಾಗವಹಿಸುವುದರಿಂದ್ದ ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯದಲ್ಲಿ ಚೇತರಿಕೆ ಹಾಗೂ ಚೈತನ್ಯ ತುಂಬಲಿದೆ ಎಂದರು. ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಮಾತನಾಡಿ ಸರ್ಕಾರದ ಅನೇಕ ಇಲಾಖೆಗಳು ಹಾಗೂ ಕಂದಾಯ ಮತ್ತು ಪೊಲೀಸ್ ಇಲಾಖೆ ನಾನಾ ಸಂದರ್ಭದಲ್ಲಿ ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು. ಹೆಚ್ಚಾಗಿ ಚುನಾವಣೆ ಸಂದರ್ಭದಲ್ಲಿ ಕಂದಾಯ ಇಲಾಖೆಯೊಂದಿಗೆ ಪೊಲೀಸ್ ಇಲಾಖೆಯ ಪಾತ್ರ ಬಹುಮುಖ್ಯವಾದುದು. ಕೆಲಸದ ಒತ್ತಡವನ್ನು ಮರೆತು ಕ್ರೀಡೆಯ ಕಡೆಯೂ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠ

ಮಾರ್ಚ್ 04 ರಂದು ವಿದ್ಯುತ್ ವ್ಯತ್ಯಯ

ವಿದ್ಯುತ್ ವ್ಯತ್ಯಯ ಹಾಸನ . (ಕರ್ನಾಟಕ ವಾರ್ತೆ):-  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಕೆ.ಐ.ಎ.ಡಿ.ಬಿ ಉಪವಿಭಾಗದ, ಕೆ.ಐ.ಎ.ಡಿ.ಬಿ ಶಾಖಾ ವ್ಯಾಪ್ತಿಯಲ್ಲಿ ಪರಿವರ್ತಕಗಳನ್ನು ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾ4 ರಂದು ಬೆಳಗ್ಗೆ 10 ಗಂಟೆಯಿಂದ ಮದ್ಯಾಹ್ನ 2  ಗಂಟೆಯವರೆಗೆ ಚನ್ನಪಟ್ಟಣ, ದೇವಮ್ಮ ಬಡಾವಣೆ, ಬೊಮ್ಮನಾಯಕನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸಬೇಕೆಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಕಾರ್ಯಪಾಲಕ ಇಂಜಿನಿಯರ್ ಕಾರ್ಯ ಮತ್ತು ಪಾಲನಾ ವಿಭಾಗ ಇವರು ತಿಳಿಸಿದ್ದಾರೆ. # ವಿದ್ಯುತ್ ವ್ಯತ್ಯಯ

ಚಿಕ್ಕಮಗಳೂರಿನಲ್ಲಿ ಮಾರ್ಚ್ 3 ರಿಂದ ಮಾರ್ಚ್ 10 ರವರೆಗೆ ರೇಷ್ಮೆ ಸೀರೆ ಪ್ರದರ್ಶನ ಮತ್ತು ಮಾರಾಟ .

ಚಿಕ್ಕಮಗಳೂರಿನಲ್ಲಿ  ಮಾರ್ಚ್ 03 ರಿಂದ ಮಾರ್ಚ್ 10  ರವರೆಗೆ ಪಚ್ಚೈಪ್ಪಾಸ್  ರೇಷ್ಮೆ  ಸೀರೆ ಪ್ರದರ್ಶನ ಮತ್ತು ಮಾರಾಟ . 

follow and join us

https://t.me/joinchat/gMk7YS-l6yozZmNl ವಿಮರ್ಶಾ -vimarsha

covid -19 vaccination campaign

ಹೆಚ್ಚಿನ ವಿವರಗಳಿಗೆ ಈ ಕೆಳಕಂಡ ಕೊಂಡಿಯನ್ನು ಸಂಪರ್ಕಿಸಿ :-👇👇👇👇👇👇👇👇👇👇 https://m.facebook.com/story.php?story_fbid=4209543819056276&id=808502109160481&__tn__=%2As%2As-R

ಕೋವಿಡ್ ಎರಡನೇ ಅಲೆ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳಿಗೆ ಸೂಚನೆ.

ಕೋವಿಡ್ ಎರಡನೇ ಅಲೆ ಬರದಂತೆ ತಡೆಗಟ್ಟಲು ಕ್ರಮ ವಹಿಸಲು ಸೂಚನೆ ಹಾಸನ  (ಕರ್ನಾಟಕ ವಾರ್ತೆ):-  ಕೋವಿಡ್ ಎರಡನೇ ಅಲೆ ಬರದಂತೆ ತಡೆಗಟ್ಟಲು ಹೊರ ರಾಜ್ಯದಿಂದ  ನೇರವಾಗಿ ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರಿಗೂ ಆರ್.ಟಿ,ಪಿ.ಸಿ.ಆರ್. ಪರೀಕ್ಷೆ ಕಡ್ಡಾಯವಾಗಿ ಮಾಡಿಸಬೇಕು ಈ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಜಿಲ್ಲಾ  ಉಸ್ತುವಾರಿ ಕಾರ್ಯಾದರ್ಶಿ ಹಾಗೂ ಬೆಂಗಳೂರು ಪ್ರಾದೇಶಿಕ ಅಯುಕ್ತರಾದ ನವೀನ್ ರಾಜ್ ಸಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದ ಅವರು ಪ್ರತಿ ನಿತ್ಯ ಮಹಾರಾಷ್ಟದಿಂದ ಚನ್ನರಾಯಪಟ್ಟಣ ತಾಲ್ಲೂಕಿಗೆ 6 ಬಸ್ಸು ಹಾಗೂ ಕೇರಳದ ಮಾನಂತವಾಡಿಯಿಂದ ಅರಕಲಗೂಡು ತಾಲ್ಲೂಕಿಗೆ 2 ಬಸ್ಸು ಆಗಮಿಸುತ್ತವೆ ಈ ಬಸ್ಸುಗಳಲ್ಲಿ ಆಗಮಿಸುವ ಪ್ರತಿಯೋಬ್ಬ ಪ್ರಯಾಣಿಕರ ಮೇಲು ನಿಗವಹಿಸಲು ಕಾರ್ಯಾಚರಣೆಗಾಗಿ ತಹಸೀಲ್ದಾರ್,  ತಾಲ್ಲೂಕು ಆರೋಗ್ಯಧಿಕಾರಿ ,ಪ್ರಾದೇಶಿಕ ಸಾರಿಗೆ ಇಲಾಖೆ, ಪೋಲಿಸ್ ಇಲಾಖೆ ಸೇರಿದಂತೆ ತಂಡ ರಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು..  ಕೇರಳ ಮೂಲದಿಂದ ಬಂದು ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ನರ್ಸಿಂಗ್ ವಿದ್ಯಾರ್ಥಿಗಳನ್ನು  ಕಡ್ಡಾಯವಾಗಿ ಪರೀಕ್ಷೆ  ಮಾಡಿಸುವಂತೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಿಗೆ ಆದೇಶವನ್ನು ನೀಡುವಂತೆ  ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. ಕಂದಾಯ, ಪಂಚಾಯ್ ರಾಜ್ ,ಹಾಗೂ ಪೋಲಿಸ್ ಇಲಾಖೆಯ ಎಲ

ಕುಡಿಯುವ ನೀರಿಗೆ ಮುಂಜಾಗ್ರತೆ ವಹಿಸಿಕೊಳ್ಳಲು ಸೂಚನೆ -ಶ್ವೇತಾ ದೇವರಾಜ್.

ಕುಡಿಯುವ ನೀರಿಗೆ ಮುಂಜಾಗ್ರತೆ ವಹಿಸಲು ಸೂಚನೆ ಹಾಸನ. (ಕರ್ನಾಟಕ ವಾರ್ತೆ ). ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದಾಗಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಹಿಸಲು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ವೇತಾ ದೇವರಾಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು  ನಡೆದ ಕೆ.ಡಿ.ಪಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದ ಅವರು ರೈತರಿಗೆ  ಉತ್ತಮ  ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಔಷಧಿಗಳನ್ನು ಒದಗಿಸುವಂತೆ ಸೂಚಿಸಿದರಲ್ಲದೆ, ಮುಂಗಾರು ಮಳೆಯಿಂದ ಕೆಲವು ಬೆಳೆಗಳು ನಾಶವಾಗಿದ್ದು, ಬೆಳೆ ವಿಮೆ ಪಡೆಯಲು ಸಹಕಾರಿಯಾಗುವಂತೆ ತಾಲೂಕುಗಳಿಗೆ ಖುದ್ದು ಭೇಟಿ ನೀಡಿ ಸಮೀಕ್ಷೆ ನಡೆಸಿ ನಿಖರವಾದ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.  ಕೃಷಿ ಉತ್ಪನ್ನ ಸಂಸ್ಕರಣೆಗೆ  ಟಾರ್ಪಲ್‍ಗಳ ಬೇಡಿಕೆ ಹೆಚ್ಚಾಗುತ್ತಿದ್ದು ಅವುಗಳನ್ನು  ಇನ್ನೂ ಹೆಚ್ಚಿನ ಪ್ರಮಾಣದಲ್ಲಿ  ವಿತರಿಸಿ ಎಂದು ಅಧ್ಯಕ್ಷರು ಹೇಳಿದರು. ಬೆಳೆ ವಿಮೆ ಸಂಬಂಧಿಸಿದಂತೆ  ಯಾವೆಲ್ಲ ಬೆಳೆಗಳು ಹಾನಿಯಾಗಿವೆ ಅವುಗಳ ಮಾಹಿತಿ ನೀಡಿ ಎಂದರಲ್ಲದೆ ಬೆಳೆ ಕಟಾವು ಸಮಯದಲ್ಲಿ ಆಯಾ ಸ್ಥಳಗಳನ್ನು ಖುದ್ದಾಗಿ ಭೇಟಿ ನೀಡಿ ಹಾಗೂ ಪ್ರತಿ ವರ್ಷ ಪ್ರತಿ ಹಳ್ಳಿಗಳಲ್ಲೂ ಬೆಳೆ ಕಟಾವು ಸಮೀಕ್ಷೆ ಯಾಗಬೇಕು ಎಂದರು. ಜಾನುವಾರುಗಳಿಗೆ ಯಾವುದೇ ರೋಗ ರುಜಿನಗಳು ಬಾರದಂತೆ ನಿಗಧಿತ ಲಸಿಕೆಗಳನ್ನು ಹಾಕುವುದರ ಮೂಲಕ ತಡೆಗಟ್ಟುವ