ವಿಷಯಕ್ಕೆ ಹೋಗಿ

ಕುಡಿಯುವ ನೀರಿಗೆ ಮುಂಜಾಗ್ರತೆ ವಹಿಸಿಕೊಳ್ಳಲು ಸೂಚನೆ -ಶ್ವೇತಾ ದೇವರಾಜ್.

ಕುಡಿಯುವ ನೀರಿಗೆ ಮುಂಜಾಗ್ರತೆ ವಹಿಸಲು ಸೂಚನೆ
ಹಾಸನ.
(ಕರ್ನಾಟಕ ವಾರ್ತೆ ).
ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದಾಗಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಹಿಸಲು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ವೇತಾ ದೇವರಾಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು  ನಡೆದ ಕೆ.ಡಿ.ಪಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದ ಅವರು ರೈತರಿಗೆ  ಉತ್ತಮ  ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಔಷಧಿಗಳನ್ನು ಒದಗಿಸುವಂತೆ ಸೂಚಿಸಿದರಲ್ಲದೆ, ಮುಂಗಾರು ಮಳೆಯಿಂದ ಕೆಲವು ಬೆಳೆಗಳು ನಾಶವಾಗಿದ್ದು, ಬೆಳೆ ವಿಮೆ ಪಡೆಯಲು ಸಹಕಾರಿಯಾಗುವಂತೆ ತಾಲೂಕುಗಳಿಗೆ ಖುದ್ದು ಭೇಟಿ ನೀಡಿ ಸಮೀಕ್ಷೆ ನಡೆಸಿ ನಿಖರವಾದ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

 ಕೃಷಿ ಉತ್ಪನ್ನ ಸಂಸ್ಕರಣೆಗೆ  ಟಾರ್ಪಲ್‍ಗಳ ಬೇಡಿಕೆ ಹೆಚ್ಚಾಗುತ್ತಿದ್ದು ಅವುಗಳನ್ನು  ಇನ್ನೂ ಹೆಚ್ಚಿನ ಪ್ರಮಾಣದಲ್ಲಿ  ವಿತರಿಸಿ ಎಂದು ಅಧ್ಯಕ್ಷರು ಹೇಳಿದರು.

ಬೆಳೆ ವಿಮೆ ಸಂಬಂಧಿಸಿದಂತೆ  ಯಾವೆಲ್ಲ ಬೆಳೆಗಳು ಹಾನಿಯಾಗಿವೆ ಅವುಗಳ ಮಾಹಿತಿ ನೀಡಿ ಎಂದರಲ್ಲದೆ ಬೆಳೆ ಕಟಾವು ಸಮಯದಲ್ಲಿ ಆಯಾ ಸ್ಥಳಗಳನ್ನು ಖುದ್ದಾಗಿ ಭೇಟಿ ನೀಡಿ ಹಾಗೂ ಪ್ರತಿ ವರ್ಷ ಪ್ರತಿ ಹಳ್ಳಿಗಳಲ್ಲೂ ಬೆಳೆ ಕಟಾವು ಸಮೀಕ್ಷೆ ಯಾಗಬೇಕು ಎಂದರು.

ಜಾನುವಾರುಗಳಿಗೆ ಯಾವುದೇ ರೋಗ ರುಜಿನಗಳು ಬಾರದಂತೆ ನಿಗಧಿತ ಲಸಿಕೆಗಳನ್ನು ಹಾಕುವುದರ ಮೂಲಕ ತಡೆಗಟ್ಟುವುದರ ಜೊತೆಗೆ ನೀರು ಮತ್ತು ಮೇವಿಗೆ ತೊಂದರೆಯಾಗದಂತೆ ಎಚ್ಚರವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ಕೋವಿಡ್ 19 ಎರಡನೇ ಅಲೆ ಸಂಬಂಧಿಸಿದಂತೆ ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯದಿಂದ ಬರುವವರು ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಹಾಗೂ ಜಿಲ್ಲೆಗೆ ಎರಡನೇ ಕೋವಿಡ್ ಅಲೆ ಅಪ್ಪಳಿಸದಂತೆ  ಎಚ್ಚರ ವಹಿಸಿ ಎಂದರಲ್ಲದೆ, ತಾಲ್ಲೂಕು ಆಸ್ಪತ್ರೆಗಳಲ್ಲಿ ರಾತ್ರಿ ವೇಳೆ ವೈದ್ಯರನ್ನು ನಿಯೋಜಿಸಿ ಎಂದು ಶ್ವೇತಾ ದೇವರಾಜ್ ತಿಳಿಸಿದರು.

ಶಾಲೆಗಳಿಂದ ಹೊರಗುಳಿದ ವಿದ್ಯಾರ್ಥಿಗಳನ್ನು ಮರಳಿ ಶಾಲೆಗೆ ಕರೆ ತರಲು ಪೋಷಕರೊಂದಿಗೆ ಮಕ್ಕಳ ಮನವೊಲಿಸುವಂತೆ ಶಿಕ್ಷಣ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ ಎಸ್.ಎಸ್. ಎಲ್.ಸಿ ಪರೀಕ್ಷೆಗೆ ಪೂರ್ವ ಸಿದ್ಧತಾ ಪರೀಕ್ಷೆ ತಯಾರಿ ನಡೆಸಿ ಎಂದು ಶ್ವೇತಾ ದೇವರಾಜ್ ಹೇಳಿದರು.

ವಸತಿ ನಿಲಯಗಳಿಗೆ ವಿದ್ಯಾರ್ಥಿಗಳು ಬರಲು ಹಿಂಜರಿಯುತ್ತಿದ್ದು ವಸತಿ ನಿಲಯಗಳಲ್ಲಿ ಎರಡು ದಿನಕ್ಕೊಮ್ಮೆ ಸ್ಯಾನಿಟಸರ್ ಮಾಡಿ ಮಾಸ್ಕ್ ಬಳಕೆ ಮತ್ತು ಸಾಮಾಜಿಕ ಅಂತರ  ಕಾಪಾಡುವಂತೆ ನೋಡಿಕೊಳ್ಳಿ ಎಂದರಲ್ಲದೆ ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳಿಗೆ ಉತ್ತಮ ಪೌಷ್ಟಿಕ ಆಹಾರ ನೀಡಿ ಎಂದರು.

ಗಂಗಾ ಕಲ್ಯಾಣ ಯೋಜನೆಯಡಿ ಕೊರೆದಿರುವ ಕೊಳವೆ ಬಾವಿಗಳಿಗೆ ಆದಷ್ಟು ಬೇಗ  ವಿದ್ಯುತ್ ಸಂಪರ್ಕ ಕಲ್ಪಿಸಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

 ಪಿಂಚಣಿ ಸೌಲಭ್ಯ ಸಮಸ್ಯೆಗಳನ್ನು ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು ಹಾಗೂ ಕೋವಿಡ್ ಲಾಕ್‍ಡೌನ್ ವೇಳೆಯಲ್ಲಿ ಕೆಲವು ಸ್ಥಳಗಳಿಗೆ ಸಾರಿಗೆ ವ್ಯವಸ್ಥೆ ಕಡಿತ ಗೊಂಡಿದ್ದು, ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ತೆರಳಲು ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ. ಎ ಪರಮೇಶ್ ಅವರು ಮಾತನಾಡಿ ಸಿ ಮತ್ತು ಡಿ ವರ್ಗಕ್ಕೆ ಸೇರಿರುವಂತಹ ಶಾಲೆಗಳಲ್ಲಿ ಕುಡಿಯುವ ನೀರು ಶೌಚಾಲಯ ಕಾಂಪೌಂಡ್ ಕಾಮಗಾರಿಗಳನ್ನು ನರೇಗಾ ಯೋಜನೆಗಳನ್ನು ಬಳಸಿಕೊಂಡು  ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಿ ಎಂದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಯಾವುದೇ ಆತಂಕವಿಲ್ಲದೆ  ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಿ ಎಂದು ಬಿ.ಎ ಪರಮೇಶ್ ಅವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ನಾಗರಾಜ್, ಉಪ ಕಾರ್ಯದರ್ಶಿ ಚಂದ್ರ ಶೇಖರ್, ಪೊಲೀಸ್ ಉಪ ಅಧೀಕ್ಷಕರಾದ ಪುಟ್ಟಸ್ವಾಮಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹಾಸನ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗಾವಕಾಶಗಳು.

ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ನೆಲೆಸಿರುವ ಗೃಹಿಣಿಯರು, ನಿವೃತ್ತ ಅಧಿಕಾರಿಗಳು /ನೌಕರರು ಮತ್ತು ನಿರುದ್ಯೋಗಿಗಳಿಗೆ ಆರ್ಥಿಕ ವಲಯದಲ್ಲಿ ಹೂಡಿಕೆ ಇಲ್ಲದೆ ವೃತ್ತಿ ಅವಕಾಶಗಳು / ವ್ಯಾಪಾರ ಅವಕಾಶಗಳು  ಪುರುಷ ಮತ್ತು  ಮಹಿಳೆಯರಿಗೆ   ವಯಸ್ಸಿನ ಮಿತಿ: - 25 ರಿಂದ 65 ವರ್ಷಗಳು.  ದಯವಿಟ್ಟು ನಿಮ್ಮ ವಿವರಗಳನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ.  freelanceadvertisingthassan@gmail.com  ಅಥವಾ  ಸಂಪರ್ಕಿಸಿ  ವಾಟ್ಸಾಪ್ ಸಂದೇಶಗಳು ಮಾತ್ರ  7090899728  Career opportunities /business opportunities with out an investments in financial sector for housewives ,retired officials /employees and unemployed persons residing in Hassan district, Karnataka state India For both male and female. Age limit:- 25 to 65 years. Please send your details to below email id. freelanceadvertisingathassan@gmail.com Or  Contact  WhatsApp messages only 070908 99728

ಆರೋಗ್ಯ ಮತ್ತು ಸಂತ್ರೃಪ್ತ ಜೀವನ

ಬಂಧುಗಳೇ, ಪ್ರತಿಯೊಂದು ಜನರು ನೆಮ್ಮದಿಯಿಂದ ಬದುಕಲು ಇಷ್ಟಪಡುತ್ತಾರೆ, ಆದರೂ ಹಲವಾರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ, ಅದರಲ್ಲಿ  ಮುಖ್ಯ ಸಮಸ್ಯೆಗಳು ಅಂದರೆ ಆರೋಗ್ಯ ಮತ್ತು ಹಣಕಾಸು ಮತ್ತು  ಉದ್ಯೋಗ ಭದ್ರತೆ. ನಮ್ಮಲ್ಲಿ ಮೇಲ್ಕಂಡ  ಸಮಸ್ಯೆಗಳಿಗೆ ಸಮಂಜಸವಾದ ಪರಿಹಾರವಿದೆ , ನೀವು ಆತಂಕ ಪಡುವ ಅಗತ್ಯವಿಲ್ಲ, ಬನ್ನಿ ನಮ್ಮೂಡನೆ ಸೇರಿರಿ, ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳರಿ.   ನಾವು ಸಂವಹನ ಮಾಡಲು ಅಂತರ್ಜಾಲ ಮತ್ತು ನೇರ ಭೇಟಿ ಕಾರ್ಯಕ್ರಮ ಮೂಲಕ  ಕೆಲವೊಂದು ಮಾರ್ಗದರ್ಶನಗಳನ್ನು ನೀಡುತ್ತೇವೆ, ಅದಕ್ಕಾಗಿ ನೀವು ನಿಮ್ಮ ವಾಟ್ಸಾಪ್ ಸಂಖ್ಯೆಯನ್ನು ನಮಗೆ ಕಳುಹಿಸಿದರೆ, ಮಾರ್ಗದರ್ಶನ ಅವಕಾಶ ನಿಮಗೆ ಲಭಿಸುತ್ತದೆ.

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ (92) ವಿಧಿವಶ. ನಾಳೆ ಅಂತ್ಯಕ್ರಿಯೆ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ:- ತಡ ರಾತ್ರಿ ನಿಧನರಾಗಿರುವ ಎಸ್.ಎಂ ಕೃಷ್ಣ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ ಕೃಷ್ಣ ಇತ್ತೀಚೆಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ  ಎಸ್.ಎಂ.ಕೃಷ್ಣ (92) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ    ಕೊನೆಯುಸಿರೆಳೆದಿದ್ದಾರೆ. ಎಸ್​ಎಂ ಕೃಷ್ಣ ಅವರು ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಮಂಡ್ಯದ ಸೋಮನಹಳ್ಳಿಯಲ್ಲಿ 1932ರಲ್ಲಿ ಜನಿಸಿದ್ದ ಅವರು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದುಕೊಂಡಿದ್ದರು. ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಸ್ಪೀಕರ್ ಆಗಿಯೂ ಸೇವೆ ಸಲ್ಲಿಕೆ ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು. 1971 ರಿಂದ 2014ರವರೆಗೆ ವಿವಿಧ ಕಾಲಘಟ್ಟದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಗಿದ್ದರು. ನಾಳೆ ಎಸ್​​ಎಂ ಕೃಷ್ಣ ಅವರ ಅಂತ್ಯಕ್ರಿಯೆ; ಬೆಂಗಳೂರಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ.. ಫೋಟೋ ಕೃಪೆ :-ವಿಕಿಪೀ...