ಕರಾವಳಿ ಕರ್ನಾಟಕದಲ್ಲಿ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರತೀಯ ಹವಾಮಾನ ಇಲಾಖೆ ಕರಾವಳಿ ಕರ್ನಾಟಕಕ್ಕೆ ಕಿತ್ತಳೆ ಮತ್ತು ಹಳದಿ ಎಚ್ಚರಿಕೆಯನ್ನು ನೀಡಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜಿಲ್ಲಾಡಳಿತ ಶಾಲೆಗಳಿಗೆ ರಜೆ ಘೋಷಿಸಿದೆ ಎಂದು . ಭಾರೀ ಮಳೆಯಿಂದಾಗಿ ಅನ್ಮೋಡ್ ಘಾಟ್ನಲ್ಲಿ ಭೂಕುಸಿತ ವರದಿಯಾಗಿದೆ. ಕಳಸ-ಹೊರನಾಡು ನಡುವೆ ಸಂಚಾರಕ್ಕೆ ಅಡ್ಡಿಯಾಗಿದ್ದು, ಹಲವು ಸೇತುವೆಗಳು ಮುಳುಗಡೆಯಾಗಿವೆ. ಮಂಗಳೂರು ಸುತ್ತಮುತ್ತ ಹಲವಾರು ಮರಗಳು ಧರೆಗುರುಳಿವೆ. ದಕ್ಷಿಣ ಕನ್ನಡದಲ್ಲಿ ಮನೆಗಳಿಗೆ ಹಾನಿಯಾಗಿದೆ. ಅಪಾರ ಮಟ್ಟದಲ್ಲಿ ಆಸ್ತಿಪಾಸ್ತಿಗೆ ಹಾನಿಯಾಗಿದೆ.
ಸುದ್ದಿ ಕೃಪೆ:-ಪ್ರಸಾರ ಭಾರತಿ
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ
Vimarsha.info