ವಿಷಯಕ್ಕೆ ಹೋಗಿ

ಕಮ್ಯುನಿಸಂ ಮತ್ತು ಸಮ ಸಮಾಜ ನಿರ್ಮಾಣ ಹೋರಾಟಗಾರ.

                 ಮೂಲ ಲೇಖನ:-
             ವಿವೇಕಾನಂದ .ಎಚ್.ಕೆ


ಕಮ್ಯುನಿಸ್ಟ್ ಜಗತ್ತಿನ ಗ್ಲಾಮರಸ್ ಹೀರೋ ಆರ್ನೆಸ್ಟ್ ಚೆಗುವಾರ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಹೇಳುತ್ತಾ.........ಜೂನ್ 14.........

ಬಂಡವಾಳ ಶಾಹಿ ವ್ಯವಸ್ಥೆಯ ಕಾರ್ಪೊರೇಟ್ ಸಂಸ್ಕೃತಿ ಬಹುತೇಕ ಇಡೀ ಜಗತ್ತನ್ನು ಆಕ್ರಮಿಸಿರುವಾಗ, ಜಾಗತೀಕರಣದ ಮುಕ್ತ ಮಾರುಕಟ್ಟೆಯ ಹೊಸ ಪೀಳಿಗೆ ಮುಖ್ಯವಾಹಿನಿಯಲ್ಲಿ ಮಹತ್ವ ಪಡೆದಿರುವಾಗ ಕಾರ್ಲ್ ಮಾರ್ಕ್ಸ್, ಮಾವೋ, ಸ್ಟಾಲಿನ್, ಕ್ಯಾಸ್ಟ್ರೋ ಮುಂತಾದವರು ಈ ಕೊಳ್ಳುಬಾಕ ಸಂಸ್ಕೃತಿಯ ಜನರ ನಡುವೆ ವಿಲನ್ ರೀತಿಯಲ್ಲಿ ಬಿಂಬಿತವಾಗುತ್ತಿರುವಾಗ, ಬಹುತೇಕ ಯುವ ಸಮೂಹ ಸಂಪರ್ಕ ಕ್ರಾಂತಿಯ ಪರಿಣಾಮವಾಗಿ ಸೂಕ್ಷ್ಮತೆ ಕಳೆದುಕೊಂಡಿರುವಾಗ, ಈಗಲೂ ಈ ವ್ಯವಸ್ಥೆಯ ಬಂಡಾಯಗಾರರಿಗೆ 
" ಚೆ " ಅತ್ಯಂತ ಆಕರ್ಷಕ ಮತ್ತು ಸ್ಪೂರ್ತಿದಾಯಕವಾಗಿದ್ದಾರೆ.

ಚೆಗುವಾರ ಅವರ ಹೋರಾಟದ ಹಾದಿಯನ್ನು ಮೆಚ್ಚುತ್ತಲೇ ಅವರ ಅಭಿಮಾನಿಗಳಾಗಿ ಈಗಲೂ ಸಾಮಾಜಿಕ ಜಾಲತಾಣಗಳ ಪ್ರೊಫೈಲ್ ಪಿಕ್ಚರ್ ಚೆಗುವಾರ ಆಗಿರುವುದನ್ನು ಕಾಣಬಹುದು.

ಆಧುನಿಕ ಸಂಕೀರ್ಣ ಜೀವನಶೈಲಿಯ ಮೋಹಕ್ಕೆ ಒಳಗಾಗಿ ವಸ್ತು ಸಂಸ್ಕೃತಿ ಮಾನವೀಯ ಮೌಲ್ಯಗಳನ್ನು ವ್ಯಾಪಾರವಾಗಿಸಿರುವಾಗ ಪ್ರತಿಯೊಬ್ಬರು ಕಮ್ಯುನಿಸ್ಟರೇ. ಆದರೆ ಕಾರಣ ಮತ್ತು ರೂಪಗಳು - ಸ್ವರೂಪಗಳು ಮಾತ್ರ ಭಿನ್ನ.

ಇಡೀ ಸಾಮಾಜಿಕ ಶೈಕ್ಷಣಿಕ ರಾಜಕೀಯ ಕೌಟುಂಬಿಕ ಧಾರ್ಮಿಕ ಮುಂತಾದ ಎಲ್ಲಾ ಕ್ಷೇತ್ರಗಳು ಹಣ ಕೇಂದ್ರಿತವಾಗಿರುವಾಗ ಶೋಷಣೆಯೇ ಅದರ ಮೂಲ ಧರ್ಮವಾಗಿರುವಾಗ ಶೋಷಿತರೆದೆಯಲ್ಲಿ ಬಂಡಾಯದ ಕಿಚ್ಚು‌ ಸಹಜವಾಗಿ ಕಿಡಿ ಹೊತ್ತುತ್ತದೆ. ಅಲ್ಲೆಲ್ಲಾ  ಚೆಗುವಾರ ನೆನಪಾಗುತ್ತಲೇ ಇರುತ್ತಾರೆ.

ಇಷ್ಟು ವಿಶಾಲ ಮತ್ತು ವ್ಯಾಪಕತೆ ಪಡೆದ ಕಮ್ಯುನಿಸಂ ಇಂದು ಏಕೆ ತನ್ನ ಅಸ್ತಿತ್ವಕ್ಕಾಗಿ ಚಡಪಡಿಸುತ್ತಿದೆ ಎಂಬ ಪ್ರಶ್ನೆ ಸಹಜವಾಗಿ ಸಾಮಾನ್ಯ ಜನರಲ್ಲಿ ಮೂಡುತ್ತದೆ. ಶೋಷಿತರ ಪರ  ಶೋಷಕರ ವಿರುದ್ಧದ ಧ್ವನಿ ಏರುತ್ತಲೇ ಇರಬೇಕಾದ ಸಂದರ್ಭದಲ್ಲಿ ಕ್ಷೀಣವಾಗುತ್ತಿರುವುದು ಎಲ್ಲರನ್ನೂ ಕಾಡುತ್ತಿದೆ.

ಅಪ್ ಕೋರ್ಸ್ ಕಮ್ಯುನಿಸ್ಟ್ ಮೂಲಭೂತವಾದಿಗಳು ಇದನ್ನು ಒಪ್ಪುವುದಿಲ್ಲ. ಇದು ತಾತ್ಕಾಲಿಕ ಹಿನ್ನಡೆ. ಈ ಜಗತ್ತಿನಲ್ಲಿ ಮತ್ತೆ ತನ್ನ ಸಿದ್ದಾಂತ ಜನ ಸಾಮಾನ್ಯರ ಒಡಲಾಳದಿಂದ ಎದ್ದು ಬರುತ್ತದೆ. ಮನುಷ್ಯ ಜೀವಿಯ ನಿಜವಾದ ಪ್ರಗತಿ ಮತ್ತು ಸಮ ಸಮಾಜದ ಕನಸು ಈಡೇರಲು ಕಮ್ಯುನಿಸ್ಟ್ ಸಿದ್ದಾಂತ ಬೇಕೆ ಬೇಕು ಎನ್ನುತ್ತಾರೆ.

ಭವಿಷ್ಯ‌ ಏನೇ ಇರಲಿ ಈ ಕ್ಷಣದಲ್ಲಿ ಕಮ್ಯುನಿಸಂ ಖಂಡಿತ ಜನಪ್ರಿಯತೆ ಕಳೆದುಕೊಂಡು ಕುಸಿಯುತ್ತಿದೆ. ಅದಕ್ಕೆ ಹಲವಾರು ಕಾರಣಗಳು ಇರಬಹುದು. ಜಾಗತೀಕರಣದ ನಂತರ ಬದಲಾದ ಕಾರ್ಮಿಕ ಶೋಷಣೆಯ ವಿವಿಧ ರೂಪಗಳು ಪರೋಕ್ಷವಾಗಿ ಮೇಲ್ನೋಟಕ್ಕೆ ಗುರುತಿಸಲು ಸಾಧ್ಯವಾಗುತ್ತಿಲ್ಲ. ಜೀವನದ ಜಂಜಾಟದಲ್ಲಿ ಹಣ ಕೇಂದ್ರ ಬಿಂದುವಾಗಿ ಕುಳಿತುಕೊಂಡಿದೆ. ಸ್ಪರ್ಧೆ ಮನುಷ್ಯನ ಚಿಂತನಾ ಶಕ್ತಿಯನ್ನು ರಾಕ್ಷಸ ಪ್ರವೃತ್ತಿಯೆಡೆಗೆ ಕೊಂಡೊಯ್ದಿದೆ. ಬಹುತೇಕ ಜನರು ಮುಖವಾಡಗಳ ಮರೆಯಲ್ಲಿ ಬದುಕುತ್ತಿದ್ದಾರೆ. ನಡೆ ನುಡಿ ನಡುವೆ ಬೃಹತ್ ಕಂದಕ ಸೃಷ್ಟಿಯಾಗಿದೆ.

ಇಂತಹ ಸನ್ನಿವೇಶದಲ್ಲಿ ಕಮ್ಯುನಿಸಮ್ಗೆ ಹೆಚ್ಚು ಅವಕಾಶ ಇಲ್ಲ ಎಂದು ಭಾವಿಸಲಾಗುತ್ತದೆ. ಹಾಗೆಂದು ಶೋಷಣಾ ಮುಕ್ತ ಸಮ ಸಮಾಜ ಸೃಷ್ಟಿಯಾಗಿಲ್ಲ. ಈಗ ಹಿಂದಿಗಿಂತಲೂ ಹೆಚ್ಚು ಅಸಮಾನತೆ ಮತ್ತು ಅಮಾನವೀಯತೆ ಇದೆ. ಆದರೆ ಈಗ ಚೆಗುವಾರ ಇಲ್ಲ.

ಚೆ ಈಗ ಯಾಕೆ ಹೆಚ್ಚು ನೆನಪಾಗುತ್ತಾರೆ ಎಂದರೆ ಒಬ್ಬ ಹೋರಾಟಗಾರ ಹೇಗಿರಬೇಕು ಎಂಬುದಕ್ಕೆ ವಿಶ್ವದ ಕೆಲವೇ ಮಾದರಿ ವ್ಯಕ್ತಿತ್ವಗಳಲ್ಲಿ ಚೆಗುವಾರ ಸಹ ಒಬ್ಬರು. ಅವರ ಓದು, ಅಧ್ಯಯನ, ಚಿಂತನೆ, ಪ್ರವಾಸ, ಜನ ಸಂಪರ್ಕ, ಗ್ರಹಿಕೆ ಮತ್ತು ಅವೆಲ್ಲವನ್ನೂ ಮೀರಿದ ವಿಶಾಲ ಹೃದಯವಂತಿಕೆ ಮತ್ತು ಮನಸ್ಥಿತಿ ಅವರನ್ನು ಒಬ್ಬ ಅತ್ಯಂತ ಆಳದ ಮತ್ತು ತೀಕ್ಷ್ಣ ಹೋರಾಟಗಾನಾಗಿ ರೂಪಿಸಿದೆ.

" ಜಗತ್ತಿನ ಎಲ್ಲಾ ಶೋಷಿತರು ನನ್ನ ಸಂಗಾತಿಗಳು " ಎಂಬ ಅರ್ಥದ ವಾಕ್ಯ ಮನದಲ್ಲಿ ಮೂಡಲು ಅಸಾಧ್ಯವಾದ - ಅಗಾಧವಾದ ಮಾನಸಿಕ ವಿಶಾಲತೆ ಬೇಕಾಗುತ್ತದೆ. 
" ಆಸೆಯೇ ದುಃಖಕ್ಕೆ ಮೂಲ " ಎಂಬ ಗೌತಮ ಬುದ್ಧರ ಚಿಂತನೆ ಒಡಮೂಡಲು ಅವರು ಸಹ ಅಪಾರ ದೇಹ ಮನಸ್ಸುಗಳನ್ನು ದಂಡಿಸಿದ್ದಾರೆ.

ಮಹಾತ್ಮ ಗಾಂಧಿ ಭಾರತ ಸ್ವಾತಂತ್ರ್ಯ ಹೋರಾಟಕ್ಕೆ ಒಂದು ದಿಕ್ಕು ತೋರಿಸುವ ಮೊದಲು ಓದಿನ ಜೊತೆಗೆ ಇಡೀ ಅವಿಭಜಿತ ಭಾರತವನ್ನು ಮೂರನೇ ದರ್ಜೆಯ ರೈಲಿನಲ್ಲಿ ಪ್ರಯಾಣಿಸಿ ಇಲ್ಲಿನ ಸಾಮಾಜಿಕ ಭೌಗೋಳಿಕ ವ್ಯವಸ್ಥೆಯನ್ನು ಅಧ್ಯಯನ ಮಾಡುತ್ತಾರೆ. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಭಾರತದ ಸಂವಿಧಾನದ ಕರಡು ರಚಿಸುವ ಮೊದಲು ಜಗತ್ತಿನ ಯಾರು ಓದದಷ್ಟು ವಿದ್ವತ್ಪೂರ್ಣ ಅಧ್ಯಾಯಗಳನ್ನು ಓದಿರುವವರು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರು. ಸ್ವಾಮಿ ವಿವೇಕಾನಂದರು ಸಹ ವಿದೇಶ ಯಾತ್ರೆಗಳ ಜೊತೆಗೆ ಎರಡು ಬಾರಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ಮಾಡುತ್ತಾರೆ. ಆಧುನಿಕ ಹೋರಾಟಗಾರರು ಇದನ್ನು ಗಮನಿಸಬೇಕು.

ಮೊನ್ನೆ ಜನುಮದ ದಿನದ ನೆನಪಿನಲ್ಲಿ ಚೆ ಕುರಿತಾದ ಫೋಟೋ ಮತ್ತು ಲೇಖನಗಳ ‌ಸಂಭ್ರಮವನ್ನು ಸಾಮಾಜಿಕ ಜಾಲತಾಣಗಳಲ್ಲಿ ನೋಡಿದಾಗ ಈಗಲೂ ಕರುಳು ಚುರ್ ಎನ್ನುವ ಸೂಕ್ಷ್ಮತೆ ಹೊಂದಿರುವ ಅನೇಕರು ಇದ್ದಾರೆ. ಅವರೆಲ್ಲ ಸಣ್ಣ ಪ್ರಮಾಣದಲ್ಲಿಯಾದರೂ ಈ ಸಮಾಜದ ಶೋಷಿತರ ಧ್ವನಿಯಾಗುತ್ತಾರೆ ಎಂಬ ಭರವಸೆ ಮೂಡುತ್ತದೆ.....

ಕಮ್ಯುನಿಸಂ‌ ಎಂಬುದು ಈಗಿನ ಕೆಲವು ಮೂಲಭೂತವಾದಿ ಕಾಮ್ರೇಡ್ ಗಳ ಹಠವಾದಿ, ಪ್ರೀತಿಯಿಲ್ಲದ, ಕಲ್ಲು ಮನಸ್ಸಿನ ವರ್ತನೆಯ ಸಿದ್ದಾಂತವಲ್ಲ. ಅದು ಅತ್ಯಂತ ಜೀವಪರ ನಿಲುವಿನ ವೈಚಾರಿಕ ಪ್ರಜ್ಞೆ. ಇದನ್ನು ದ್ವೇಷಿಸುವ ಬಲಪಂಥೀಯ ಚಿಂತನೆಯವರು ಕೂಡ ಒಮ್ಮೆ ಕಣ್ಣಾಡಿಸಿ ಸರಿ ಎನಿಸಿದರೆ ಕೆಲವು ಅಂಶಗಳನ್ನು ತಮ್ಮ ಅಭಿಪ್ರಾಯಗಳಲ್ಲಿ ಸೇರಿಸಿಕೊಳ್ಳಬಹುದು.

ನಮ್ಮೊಳಗೂ ಒಬ್ಬ ಆರ್ನೆಸ್ಟ್ ಚೆಗುವಾರ ಯಾವುದೋ ಒಂದು ಮೂಲೆಯಲ್ಲಾದರೂ ಸದಾ ಜೀವಂತವಾಗಿರಲಿ. ಅದು ಮಾನವೀಯ ಮೌಲ್ಯಗಳ ಹೋರಾಟದ ಬಹುದೊಡ್ಡ ಲಕ್ಷಣ ಎಂದು ಭಾವಿಸುತ್ತಾ......

ಪ್ರಬುದ್ಧ ಮನಸ್ಸು ಪ್ರಬುದ್ಧ ‌ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ - ಮನೆಗಳಲ್ಲಿ - ಮತಗಳಲ್ಲಿ - ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ ಎಚ್.ಕೆ.
9844013068.....

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹಾಸನ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗಾವಕಾಶಗಳು.

ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ನೆಲೆಸಿರುವ ಗೃಹಿಣಿಯರು, ನಿವೃತ್ತ ಅಧಿಕಾರಿಗಳು /ನೌಕರರು ಮತ್ತು ನಿರುದ್ಯೋಗಿಗಳಿಗೆ ಆರ್ಥಿಕ ವಲಯದಲ್ಲಿ ಹೂಡಿಕೆ ಇಲ್ಲದೆ ವೃತ್ತಿ ಅವಕಾಶಗಳು / ವ್ಯಾಪಾರ ಅವಕಾಶಗಳು  ಪುರುಷ ಮತ್ತು  ಮಹಿಳೆಯರಿಗೆ   ವಯಸ್ಸಿನ ಮಿತಿ: - 25 ರಿಂದ 65 ವರ್ಷಗಳು.  ದಯವಿಟ್ಟು ನಿಮ್ಮ ವಿವರಗಳನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ.  freelanceadvertisingthassan@gmail.com  ಅಥವಾ  ಸಂಪರ್ಕಿಸಿ  ವಾಟ್ಸಾಪ್ ಸಂದೇಶಗಳು ಮಾತ್ರ  7090899728  Career opportunities /business opportunities with out an investments in financial sector for housewives ,retired officials /employees and unemployed persons residing in Hassan district, Karnataka state India For both male and female. Age limit:- 25 to 65 years. Please send your details to below email id. freelanceadvertisingathassan@gmail.com Or  Contact  WhatsApp messages only 070908 99728

ಉತ್ತಮ ಫಲಿತಾಂಶ , ಹಣ ಉಳಿತಾಯ.

ನಾನು ನೆಟ್‌ಸರ್ಫ್ ಡೈರೆಕ್ಟ್‌ನೊಂದಿಗೆ ಕೆಲಸ ಮಾಡುತ್ತಿದ್ದೇನೆ. ನಾನು ನೆಟ್ಸರ್ಫ್ ಉತ್ಪನ್ನಗಳನ್ನು ನಿಯಮಿತವಾಗಿ ಬಳಸುತ್ತಿದ್ದೇನೆ. ನಾನು ನಿಮಗೆ ಈ ಉತ್ಪನ್ನಗಳನ್ನು ಬಲವಾಗಿ ಶಿಫಾರಸು ಮಾಡುತ್ತೇವೆ. 'NETSURF DIRECT' 5 ವಿವಿಧ ವಿಭಾಗಗಳಲ್ಲಿ 90 ಕ್ಕೂ ಹೆಚ್ಚು ಗಿಡಮೂಲಿಕೆ ಉತ್ಪನ್ನಗಳನ್ನು ನೀಡುತ್ತದೆ ಅಂದರೆ ಆರೋಗ್ಯ ರಕ್ಷಣೆ, ವೈಯಕ್ತಿಕ ಆರೈಕೆ, ಬಣ್ಣ ಸೌಂದರ್ಯವರ್ಧಕಗಳು, ಗೃಹ ಆರೈಕೆ ಮತ್ತು ಕೃಷಿ. ಈ ಉತ್ಪನ್ನಗಳನ್ನು ಭಾರತದಾದ್ಯಂತ 2.5 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ನಂಬಿದ್ದಾರೆ. ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೆಟ್‌ಸರ್ಫ್ ವರ್ಲ್ಡ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ ಮತ್ತು ಎಲ್ಲಾ ನೆಟ್‌ಸರ್ಫ್ ಉತ್ಪನ್ನಗಳ ಮೇಲೆ ಅತ್ಯಾಕರ್ಷಕ ಕೊಡುಗೆಗಳನ್ನು ಪಡೆದುಕೊಳ್ಳಿ. ಒಮ್ಮೆ ನೀವು ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿದ ನಂತರ, ನನ್ನ ಮೊಬೈಲ್ ಸಂಖ್ಯೆಯನ್ನು (8453502625) "ಉಲ್ಲೇಖಿಸಿದವರು" ನಲ್ಲಿ ನಮೂದಿಸಿ ಮತ್ತು ನಿಮ್ಮ 1ನೇ ಖರೀದಿಯಿಂದ ಪುನಃ ಪಡೆದುಕೊಳ್ಳಬಹುದಾದ ರೂ.100 ವೋಚರ್ ಅನ್ನು ಪಡೆಯಿರಿ. Andriod ಬಳಕೆದಾರರು: https://bit.ly/3SxEkfB ಆಪಲ್ ಬಳಕೆದಾರರು: https://apple.co/3Ace2JT   I am working with Netsurf Direct. I am using Netsurf products regularly. I strongly recommend these products to you .   'NETSURF DIRECT...

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ (92) ವಿಧಿವಶ. ನಾಳೆ ಅಂತ್ಯಕ್ರಿಯೆ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ:- ತಡ ರಾತ್ರಿ ನಿಧನರಾಗಿರುವ ಎಸ್.ಎಂ ಕೃಷ್ಣ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ ಕೃಷ್ಣ ಇತ್ತೀಚೆಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ  ಎಸ್.ಎಂ.ಕೃಷ್ಣ (92) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ    ಕೊನೆಯುಸಿರೆಳೆದಿದ್ದಾರೆ. ಎಸ್​ಎಂ ಕೃಷ್ಣ ಅವರು ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಮಂಡ್ಯದ ಸೋಮನಹಳ್ಳಿಯಲ್ಲಿ 1932ರಲ್ಲಿ ಜನಿಸಿದ್ದ ಅವರು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದುಕೊಂಡಿದ್ದರು. ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಸ್ಪೀಕರ್ ಆಗಿಯೂ ಸೇವೆ ಸಲ್ಲಿಕೆ ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು. 1971 ರಿಂದ 2014ರವರೆಗೆ ವಿವಿಧ ಕಾಲಘಟ್ಟದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಗಿದ್ದರು. ನಾಳೆ ಎಸ್​​ಎಂ ಕೃಷ್ಣ ಅವರ ಅಂತ್ಯಕ್ರಿಯೆ; ಬೆಂಗಳೂರಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ.. ಫೋಟೋ ಕೃಪೆ :-ವಿಕಿಪೀ...