ಆಶಾ ಕಾರ್ಯಕರ್ತೆಯರಿಗೆ ಗೌರವ ಧನದ ಚೆಕ್ ವಿತರಣೆ ಹಾಸನ ಆ.04. (ಕರ್ನಾಟಕ ವಾರ್ತೆ): ಕೊರೋನಾ ವೈರಸ್ ಸೋಂಕು ನಿಯಂತ್ರಣಕ್ಕೆ ತರಲು ಹಗಲಿರುಳೆನ್ನದೆ ಶ್ರಮಿಸುತ್ತಿರುವ ಕೊರೋನಾ ವಾರಿಯರ್ಸ್ ಗಳಾದ ಸುಮಾರು 150 ಆಶಾ ಕಾರ್ಯಕರ್ತೆಯರಿಗೆ ಹೇಮಾವತಿ ಸಕ್ಕರೆ ಕಾರ್ಖಾನೆ ಯಿಂದ ನೀಡಲಾಗಿದ್ದ 3000 ರೂಪಾಯಿ ಮೊತ್ತದ ಗೌರವ ಧನದ ಚೆಕ್ ಅನ್ನು ಚನ್ನರಾಯಪಟ್ಟಣದ ಶ್ರೀನಿವಾಸಪುರದಲ್ಲಿಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ರವರು ವಿತರಿಸಿದರು. ಈ ಸಮಾರಂಭದಲ್ಲಿ ಶಾಸಕರಾದ ಸಿ.ಎನ್. ಬಾಲಕೃಷ್ಣ, ಜಿಲ್ಲಾಧಿಕಾರಿಗಳಾದ ಆರ್.ಗಿರೀಶ್, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಬಿ.ಎ.ಪರಮೇಶ್, ಸಚಿವರ ಆಪ್ತ ಕಾರ್ಯದರ್ಶಿ ಗಳಾದ ಕಾಂತರಾಜ್ ರವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
News/information/advertising/entertainment