ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

#ಕನ್ನಡ ರಾಜ್ಯೋತ್ಸವ:ಹಾಸನ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಹಾಸನ :ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆ

ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆ ಹಾಸನ,ನ.01(ಕರ್ನಾಟಕ ವಾರ್ತೆ):- ಜಿಲ್ಲಾಡಳಿತದ ವತಿಯಿಂದ ಇಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣ ವಾಗಿ ಆಚರಿಸಿಲಾಯಿತು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ. ಗೋಪಾಲಯ್ಯ ಅವರು ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ಸಂದೇಶ ನೀಡಿದರು. ಕರ್ನಾಟಕ ರಾಜ್ಯದ ಉದಯ, ನಾಡು ನುಡಿಯ ಹಿರಿಮೆ ಗರಿಮೆ, ಪರಂಪರೆ, ಇತಿಹಾಸ, ಐತಿಹಾಸಿಕ ಸ್ಥಳಗಳ ಬಗ್ಗೆ ವಿವರಿಸಿ ಮೆಚ್ಚುಗೆಯ ನುಡಿಗಳನ್ನಾಡಿದರು ಹಾಗೂ ರಾಜ್ಯವನ್ನಾಳಿದ ರಾಜ ಮನೆತನಗಳು, ನಾಡು ನುಡಿಯನ್ನ ಕಟ್ಟಿ ಬೆಳೆಸಿದ ಮಹನೀಯರನ್ನು ಸ್ಮರಿಸಿದ ಸಚಿವರು ಮುಂದೆಯೂ ಸಾಮರಸ್ಯದ ಸಹಬಾಳ್ವೆ ಮೂಲಕ ಎಲ್ಲರೂ ರಾಜ್ಯದ ಸರ್ವಾಂಗೀಣ ಅಭಿವೃದ್ದಿಗೆ ಶ್ರಮಿಸೋಣ ಎಂದು ಸಚಿವ ಗೋಪಾಲಯ್ಯ ಅವರು ಕರೆ ನೀಡಿದರು. ಇದೇ ವೇಳೆ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿರುವ ಹಂಪನಹಳ್ಳಿ ತಿಮ್ಮೇಗೌಡ, ಅನುಸೂಯಮ್ಮ ಹಾಗೂ ಜಿಲ್ಲಾ ಮಟ್ಟದಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾದ ಗಣ್ಯರು ಸಾಧಕರು ಹಾಗೂ ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ಸೇವೆ ಸಲ್ಲಿಸಿದ ಸರ್ಕಾರಿ ಹಾಗೂ ಖಾಸಗಿ ವೈದ್ಯರು, ಅಧಿಕಾರಿ ಸಿಬ್ಬಂದಿ, ಪೋಲಿಸ್ ಅಧಿಕಾರಿಗಳು, ನಗರಸಭೆ ನೌಕರರು ಹಾಗೂ ರೈತರನ್ನು ಜಿಲ್ಲಾಡಳಿತದ ಪರವಾಗಿ ಸಚಿವರು ಸನ್ಮಾನಿಸಿದರು. ಆರೋಗ್ಯ ಮತ್ತು