ಕೇಂದ್ರ ಸಚಿವ ಅಮಿತ್ ಶಾ ಕರ್ನಾಟಕ ಭೇಟಿ ವಿಮರ್ಶಾ-ದಿನಸುದ್ದಿ ಬೆಂಗಳೂರಿನಲ್ಲಿ ನ್ಯಾಟ ಗ್ರಿಡ್ ಘಟಕ ಉದ್ಘಾಟನೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ಬೆಂಗಳೂರಿನ ಸಾತನೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಿಸಾಸ್ಟರ್ ರಿಕವರಿ ಸೆಂಟರ್ (NATIONAL INTELLIGENCE GRID) ನ್ಯಾಟಗ್ರಿಡ್ ನ ಬೆಂಗಳೂರು ಕ್ಯಾಂಪಸ್ ನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉಪಸ್ಥಿತರಿದ್ದರು ವಿಶ್ವಗುರು ಜಗಜ್ಯೋತಿ ಬಸವೇಶ್ವರರ ಜಯಂತಿ ಆಚರಣೆ ವಿಶ್ವಗುರು ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿಯ ಅಂಗವಾಗಿ ಇಂದು ಬೆಂಗಳೂರಿನಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಷಾ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಶ್ರೀ ಬಸವೇಶ್ವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಭಕ್ತಿಯ ನಮನಗಳನ್ನು ಸಲ್ಲಿಸಿದರು. ಇದೇ ಸಂದರ್ಭದಲ್ಲಿ ರಾಜ್ಯ ಸಚಿವರಾದ ಶ್ರೀ ಗೋವಿಂದ ಕಾರಜೋಳ ಮತ್ತು ಬಿಜೆಪಿ ನಾಯಕರಾದ ಸಿ.ಟಿ .ರವಿ ಕೂಡ ಉಪಸ್ಥಿತರಿದ್ದರು ಸುದ್ದಿ ಕೃಪೆ -ವಾರ್ತಾ ಮತ್ತು ಜನಸಂಪರ್ಕ ಇಲಾಖೆ ಕರ್ನಾಟಕ ಸರ್ಕಾರ @diprkarnataka
News/information/advertising/entertainment