ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಜ.5-ಹಾಸನ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ವಿಮರ್ಶಾ -vimarsha ಜ.5 ರಂದು ವಿವಿಧ ಹುದ್ದೆಗಳ ನೇಮಕಾತಿಗೆ:      ನೇರ ಸಂದರ್ಶನ  ಹಾಸನ . ( ಕರ್ನಾಟಕ ವಾರ್ತೆ):-   ಹಾಸನದ ಹೆಸರಾಂತ ಕಂಪನಿಗಳು ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲು ಜ.5 ರಂದು ಬೆಳಿಗ್ಗೆ 10 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ಮೂಲಕ ಆಯ್ಕೆ ನಡೆಯಲಿದೆ.        8ನೇ ತರಗತಿ ಎಸ್.ಎಸ್.ಎಲ್.ಸಿ/ ಪಿ.ಯು.ಸಿ/ ಐ.ಟಿ.ಐ/ ಡಿಪ್ಲೋಮೋ, ಯಾವುದೇ ಪದವಿ/ ನಲ್ಲಿ ತೇರ್ಗಡೆ ಹೊಂದಿದ 18 ರಿಂದ 30 ವರ್ಷ ಒಳಪಟ್ಟ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳ್ಳುತ್ತಿದ್ದು, ಆಸಕ್ತ ನಿರುದ್ಯೋಗಿ ಯುವಕ/ ಯುವತಿಯರು  ತಮ್ಮ ಸ್ವವಿವರಗಳು ಆಧಾರ್ ಕಾರ್ಡ್ ಮತ್ತು ಶೈಕ್ಷಣಿಕ ದಾಖಲಾತಿಗಳ ಜೆರಾಕ್ಸ್ ಪ್ರತಿಗಳೊಂದಿಗೆ ಕಛೇರಿಗೆ ಹಾಜರಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.               ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಇವರನ್ನು  ಖುದ್ದಾಗಿ ಅಥವಾ ದೂ.ಸ : 08172-296374 ಅಥವಾ  8722606874 / 8660141863 ಅನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. ಕೋವಿಡ್ -19 ಇರುವ ಹಿನ್ನೆಲೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಎಲ್ಲಾ ರೀತಿಯ ಮುಂಜಾಗ್ರತಾ  ಕ್ರಮಗಳನ್ನ  ಪಾಲಿ

ಗ್ರಾಮ ಪಂಚಾಯಿತಿ ಚುನಾವಣಿ ಮತ ಎಣಿಕೆ ಸಿದ್ಧತೆ : ಮದ್ಯ ಮಾರಾಟ ನಿಷೇಧ ಮತ್ತು ನಿಷೇಧ್ಜ್ಞಾನೆ ಜಾರಿ.

ಗ್ರಾ.ಪಂ ಚುನಾವಣೆ ಮತ ಎಣಿಕೆಗೆ ಸಿದ್ದತೆ :-  ಮದ್ಯ ಮಾರಾಟ ನಿಷೇಧ ಹಾಗೂ ನಿಷೇಧ್ಜ್ಞಾನೆ ಜಾರಿ (ಕರ್ನಾಟಕ ವಾರ್ತೆ) :  ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಡಿ.30 ರಂದು ನಡೆಯಲಿದ್ದು ಆಯಾ ತಾಲ್ಲೂಕಿನಲ್ಲಿ ಮತ ಎಣಿಕೆ ಕೇಂದ್ರಗಳನ್ನು ಈಗಾಗಲೇ ಗುರುತಿಸಿ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಚುನಾವಣೆ ನಡೆದ ಕ್ಷೇತ್ರಗಳಿಗೆ  ಅನುಗಣವಾಗಿ ಟೇಬಲ್‍ಗಳನ್ನು ಅಳವಡಿಸಿಕೊಂಡು ಎಣಿಕೆ ಕಾರ್ಯ ನಡೆಸಲಾಗುವುದು ಮತ ಎಣಿಕೆ ಕೇಂದ್ರಗಳ ವಿವರ :- ಹಾಸನ-ಸರ್ಕಾರಿ ಕಲಾ ಕಾಲೇಜು ಒಟ್ಟು 65 ಟೇಬಲ್‍ಗಳು 195 ಸಿಬ್ಬಂದಿಗಳು, ಅರಸೀಕೆರೆ-ಸೆಂಟ್ ಮೇರಿಸ್ ಪ್ರೌಢ ಶಾಲೆಯಲ್ಲಿ ಒಟ್ಟು 88 ಟೇಬಲ್‍ಗಳು 264 ಸಿಬ್ಬಂದಿಗಳು, ಚನ್ನರಾಯಪಟ್ಟಣ - ನವೋದಯ ಪದವಿ ಪೂರ್ವ ಕಾಲೇಜಿನಲ್ಲಿ  ಒಟ್ಟು 88 ಟೇಬಲ್‍ಗಳು 264 ಸಿಬ್ಬಂದಿಗಳು, ಹೊಳೆನರಸೀಪುರ - ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಒಟ್ಟು 50 ಟೇಬಲ್‍ಗಳು 150 ಸಿಬ್ಬಂದಿಗಳು,  ಆಲೂರು-ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 30 ಟೇಬಲ್‍ಗಳು 90 ಸಿಬ್ಬಂದಿಗಳು, ಅರಕಲಗೂಡು-ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಒಟ್ಟು 93 ಟೇಬಲ್‍ಗಳು 279 ಸಿಬ್ಬಂದಿಗಳು, ಬೇಲೂರು-ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 74 ಟೇಬಲ್‍ಗಳು 222 ಸಿಬ್ಬಂದಿಗಳು, ಸಕಲೇಶಪುರ-ಸಂತ ಜೋಸೆಫ್ ಶಾಲೆಯಲ್ಲಿ ಒಟ್ಟು 33 ಟೇಬಲ್ 99 ಸಿಬ್ಬಂದಿಗಳು. ಒಟ್ಟು 08 ತಾಲ್ಲೂಕುಗಳಲ್ಲಿ 521

ವಿಮರ್ಶಾ-vimarsha

ವಿಮರ್ಶಾ -ಸುದ್ದಿ ನೋಟ

ವಿಮರ್ಶಾ -vimarsha ವಿಮರ್ಶಾ -ಸುದ್ದಿ ನೋಟ 17/12/2020 👇👇👇👇👇👇👇👇👇👇👇👇   https://www.facebook.com/100028372331773/posts/373926456896429/?app=fbl #ವಿಮರ್ಶಾ -vimarsha  ಪ್ರಧಾನ ಸಂಪಾದಕರು :- ಹರೀಶ್ ಹೆಚ್ ಆರ್  ಕೋಟೆ  ಸುದ್ದಿ ಸಂಪಾದಕರು:- ನಾಗೇಂದ್ರ.ಹೆಚ್. ಎನ್. 

ಕಸಾಪ ಎಂಕ ನಾಣಿ ಸೀನರ ಹಿಡಿತದಲ್ಲಿ ನಲುಗಿದೆ-ಕೋಟೆ ಕಾಲಂ

ವಿಮರ್ಶಾ -vimarsha ಕೋಟೆ ಕಾಲಂ ಕಸಾಪ ಎಂಕ ನಾಣಿ ಸೀನರ ಹಿಡಿತದಲ್ಲಿ ನಲುಗಿದೆ. ಜಿಲ್ಲಾಕನ್ನಡಸಾಹಿತ್ಯ ಪರಿಷತ್ತು ಎಂಕ ನಾಣಿ ಸೀನರ ಹಿಡಿತದಲ್ಲಿ ನಲುಗಿದೆ ಸಾಹಿತಿಗಳು ವಿಚಾರವಂತರು ಜನಸಾಮಾನ್ಯರು ಅಲ್ಲಿಗೆ ಕಾಲಿಡದಂತಹ ಪರಿಸ್ಥಿತಿ ನಿರ್ಮಾಣ ವಾಗಿದೆ ಪ್ರತಿಯೊಂದರಲ್ಲಿಯೂ ಹಣ ಮಾಡುವುದನ್ನೆ ರೂಡಿಸಿಕೊಂಡಿದ್ದಾರೆ ಅಧ್ಯಕ್ಷರು ಭ್ರಷ್ಟಾಚಾರದ ಪರಮಾವಧಿ ತಲುಪಿದ್ದಾರೆ  ಈ ವಿಚಾರವನ್ನು ಹೇಳಿದವರು ಯಾರೋ ಹಾದಿಬೀದಿಯಲ್ಲಿ ಹೋಗುವವರಲ್ಲಾ ಈಗಿನ ಜಿಲ್ಲಾ ಕಸಾಪ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡರ ಒಡನಾಡಿ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಗಂಜಲಗೂಡು ಗೋಪಾಲೇಗೌಡ ಪತ್ರಿಕಾಗೋಷ್ಠಿಯಲ್ಲಿ ಆಡಿದ ಮಾತುಗಳು  ಮೊದಲೇ ಹೊತ್ತಿಉರಿಯುತ್ತಿರುವ ಜಿಲ್ಲಾ ಕಸಾಪ ಚುನಾವಣಾ ಕಣಕ್ಕೆ ಗೋಪಾಲೇಗೌಡರ ಎಂಟ್ರಿ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಬಿಚ್ಚಿಟ್ಟ ವಿಚಾರಗಳನ್ನು ಗಮನಿಸಿದಾಗ ಪರಿಷತ್ತಿಗೆ ಫಿನಾಯಿಲ್ ಹಾಕಿ ತೊಳೆಯಬೇಕಾದುದು ಅನಿವಾರ್ಯ ಎನಿಸುತ್ತದೆ ಕಸಾಪ ಜಿಲ್ಲಾಧ್ಯಕ್ಷರ ಮೇಲೆ ನೇರವಾಗಿ ಆರೋಪಿಸಿದ ಗೋಪಾಲೇಗೌಡ ಪರಿಷತ್ತಿನಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ದುನಿಯಾ ಎಂಬ ಶೀರ್ಷಿಕೆ ಅಡಿಯಲ್ಲಿ ಲೇಖನ ಬರೆದಾಗ ಮಂಜೇಗೌಡರು ನನ್ನ ಮೇಲೆ ಹಲ್ಲೆಮಾಡಿ ಕೊಲೆಯತ್ನ ನಡೆಸಿದ್ದು ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ ಎಂದು ಆಪಾದಿಸಿದ್ದು ಮಾತ್ರ ಎಲ್ಲರೂ ಆಶ್ಚರ್ಯ ಚಕಿತರನ್ನಾಗುವಂತೆ ಮಾಡಿತು ಈ ಅವ್ಯವಹಾರಗಳ ಬಗ್ಗೆ ಪ್ರಶ್ನಿಸಿದ್ದಕ್ಕೆ ನನ್ನನ್ನು ತಾಲ

jobs oppurtunities -ಉದ್ಯೋಗಾವಕಾಶಗಳು.

ವಿಮರ್ಶಾ -vimarsha  ಹೆಚ್ಚಿನ ವಿವರಗಳಿಗೆ ಈ ಕೆಳಕಂಡ ಕೊಂಡಿಯನ್ನು ಸಂಪರ್ಕಿಸಿ.  For more details please click below link. 👇👇👇👇👇👇👇👇 https://youtu.be/MbCoA_xDKUo      ಪ್ರಧಾನ ಸಂಪಾದಕರು :-         ಹರೀಶ್ ಹೆಚ್ ಆರ್                 ಕೋಟೆ              ಸುದ್ದಿ ಸಂಪಾದಕರು :-       ನಾಗೇಂದ್ರ.ಹೆಚ್. ಎನ್ 

ಗ್ರಾಮ ಪಂಚಾಯಿತಿ ಕದನ -ಕೋಟೆ ಕಾಲಂ

ಕೋಟೆ ಕಾಲಂ:- ಗ್ರಾಮ ಪಂಚಾಯತಿ ಕದನ. -ಹರೀಶ್ ಹೆಚ್ ಆರ್   ಕೋಟೆ.  ನೋಡು ಸಂಸಾರದಲ್ಲಿ ರಾಜಕೀಯ ನಿನ್ನ ಮನೆ ಯಲ್ಲಿ ನೀನೆ ಪರಕೀಯ..... ಸಿ.ಅಶ್ವತ್ ಅವರ ಕಂಚಿನ ಕಂಠದಲ್ಲಿ ಬರುತ್ತಿದ್ದ ಹಾಡು ಕೇಳಿದವನಿಗೆ ಒಂದು ಕ್ಷಣ ಗ್ರಾಮಪಂಚಾಯತಿ ಚುನಾವಣೆ ದ್ರಶ್ಯಾವಳಿಗಳು ಕಣ್ಣ ಮುಂದೆಯೇ ಹಾದು ಹೋದವು ಡಿಸೆಂಬರ್ ತಿಂಗಳಿನಲ್ಲಿ ಎರಡು ಹಂತದಲ್ಲಿ ನಡೆಯಲಿರುವ ಗ್ರಾಮ ಪಂಚಾಯತಿ ಚುನಾವಣೆ ಮುಗಿಯುವಷ್ಟರಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಅದೆಷ್ಟು ಕುರುಕ್ಷೇತ್ರ ರಾಮಾಯಣ ನಡೆಯುತ್ತವೆಯೋ ಅದೆಷ್ಟು ತಲೆಗಳು ಉರುಳುತ್ತವೋ ದ್ವೇಶದ ದಳ್ಳುರಿಗೆ ಅದೆಷ್ಟು ಮನೆಗಳು ಆಹುತಿಯಾಗುತ್ತವೋ ಬಲ್ಲವರ್ಯಾರು ಪ್ರಶಾಂತತೆ ಹಾಗೂ ಲವಲವಿಕೆಯಿಂದ ಕೂಡಿದ ಗ್ರಾಮಾಂತರ ಪ್ರದೇಶದ ಜನರ ಮನಸ್ಸು ಬುದ್ದಿಗೆ ಲಕ್ವಾಹೊಡೆಯುವುದೇ ಗ್ರಾಮಪಂಚಾಯತಿ ಚುನಾವಣೆಗಳಲ್ಲಿ ಈ ಸಂದರ್ಭದಲ್ಲಿ ಅಣ್ಣತಮ್ಮಂದಿರೇ ಶತ್ರುಳಾಗುತ್ತಾರೆ ಕಷ್ಟಕ್ಕಾಗುವ ಬಂಧುವೇ ಕತ್ತಿಮಸೆಯುತ್ತಾನೆ ಹೆಂಡತಿ ಮಕ್ಕಳೆ ಮನೆ ಯಜಮಾನನ ಮಾತನ್ನು ಕಾಲ ಕಸವಾಗಿ ಕಾಣುತ್ತಾರೆ ದಾಯಾದಿ ದ್ವೇಷತಾರಕಕ್ಕೇರುತ್ತದೆ ಊರೇ ಇಬ್ಬಾಗವಾದರೆ ಜಾತಿ ಉಪ ಜಾತಿಯ ಪ್ರಜ್ಞೆ ಹೆಚ್ಚಾಗಿ ಯಾರನ್ನೂ ಯಾರೂ ನಂಬದಂತಾಗುತ್ತದೆ, ಕಳೆದ ಚುನಾವಣೆಯ ಸಂದರ್ಭದಲ್ಲಿ ಒಡೆದ ಮನಸ್ಸುಗಳೆ ಇನ್ನೂ ಒಂದಾಗಿಲ್ಲಾ ಅಷ್ಟರಲ್ಲಿ ಮತ್ತೆ ಚುನಾವಣೆ ಬಂದಿದ್ದು ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚಿನ ಬಿರುಸು ಕಂಡು ಬರಲಿದೆ ಈ ಬಾರೀ ಕರೋನಾ ಪಿಡುಗಿನಿಂದ ತತ್ತರಿಸಿ ಊರಿಗೆ ವಾ

ಶ್ರೀ ಬಿಂದು ಮಾಧವ ಶರ್ಮ ಸ್ವಾಮೀಜಿ ವೃಂದಾವನೋಹರಣ.

ವಿಮರ್ಶಾ -ಸುದ್ದಿ ನೋಟ

   ಕೆ. ಡಿ. ಪಿ  ತ್ರೈಮಾಸಿಕ  ಸಭೆ  ಮತ್ತು ಜಿಲ್ಲಾ ಸಚಿವರ ಪ್ರವಾಸ                   ಜಿಲ್ಲಾ ಪಂಚಾಯತ್. ಹಾಸನ                 ಕೆ.ಗೋಪಾಲಯ್ಯ ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು  ಹಾಸನ ಸರ್ಕಾರಿ ವಸತಿ ಅಥಿತಿ ಗೃಹಕ್ಕೆ ಆಗಮಿಸಲಿದ್ದಾರೆ. ಜಿಲ್ಲಾ 10.30 ಕ್ಕೆ ಜಿಲ್ಲಾಪಂಚಾಯಿತಿ ಹೊಯ್ಸಳ ಸಂಭಾಂಗಣದಲ್ಲಿ ನಡೆಯುವ 2020 ನೇ ಸಾಲಿನ ಹಾಸನ ತ್ರೈ ಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಹಿಸಲಿದ್ದಾರೆ. ಸಂಜೆ 4.30ಕ್ಕೆ ಹಾಸನದಿಂದ ಬೆಂಗಳೂರಿಗೆ ರಸ್ತೆ ಮಾರ್ಗವಾಗಿ ತೆರಳಲಿದ್ದಾರೆ. **************************** ಅಂತರಾಷ್ಟ್ರೀಯ ದತ್ತು ಮಾಸಾಚರಣೆ - ಈ ಬಾರಿ ನವೆಂಬರ್ ತಿಂಗಳನ್ನು ಅಂತರಾಷ್ಟ್ರೀಯ ದತ್ತು ಮಾಸಾವನ್ನಾಗಿ ಆಚರಿಸಲಾಗುತ್ತದೆ.       ಪ್ರಸ್ತುತ ಬಾಲಾನ್ಯಾಯ (ಮಕ್ಕಳ ಪಾಲನೆಮತ್ತು ರಕ್ಷಣೆ) ಅಧಿನಿಯಮ -2015 ಅಡಿಯಲ್ಲಿ ಹಾಸನ ಜಿಲ್ಲೆಯಲ್ಲಿ ತವರು ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಮತ್ತು ಕಾಮಧೇನು ಶಿಶುಕೇಂದ್ರ ಎಂಬ ಎರಡು ವಿಶೇಷ ದತ್ತು ಕೇಂದ್ರಗಳು ಕಾರ್ಯನಿರ್ವಹಿಸುತ್ತಿದೆ. ಸದರಿ ಸಂಸ್ಥೆಗಳು ಸರ್ಕಾರದ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುತ್ತಿದ್ದು, ಆಸಕ್ತರು ನಿಯಮನುಸಾರ ಕೇಂದ್ರಗಳಲ್ಲಿ ಮಕ್ಕಳನ್ನು ಕಾನೂನುಬದ್ಧವಾಗಿ ದತ್ತು ತೆಗೆದುಕೊಳ್ಳಬಹುದು ಎಂದು ತಿಳಿಸಲಾಗಿದೆ.        ಕುಟುಂಬ ವ್ಯವಸ್ಥೆಯಲ್ಲ

PMKVY -ಪಿಎಂಕೆವಿವೈ

ರಾಜ್ಯ ಪ್ರಶಸ್ತಿ ವಿಜೇತ ಹಂಪನಹಳ್ಳಿ ತಿಮ್ಮೇಗೌಡರಿಗೆ ಪತ್ರಕರ್ತರುಗಳಿಂದ ಅಭಿನಂದನೆ

ಹಾಸನ ಜಿಲ್ಲೆಯ  ಪತ್ರಕರ್ತರುಗಳಿಂದ ಜನಪದ ಕ್ಷೇತ್ರದಲ್ಲಿ ರಾಜ್ಯಪ್ರಶಸ್ತಿಗೆ ಭಾಜನರಾದ ಜಾನಪದ ತಜ್ಞ ಡಾ.ಹಂಪನಹಳ್ಳಿ ತಿಮ್ಮೇಗೌಡರಿಗೆ  ಅಭಿನಂದನೆ.:- ಜಿಲ್ಲೆಯಲ್ಲಿ ಎಲ್ಲಾ ಪ್ರಾಕಾರದ ಸಾಹಿತ್ಯ ಹಾಗೂ ಸಾಹಿತಿಗಳು ಶ್ರೀಮಂತವಾಗಿದ್ದಾರೆ ಆದರೆ ಇತ್ತೀಚೆಗೆ ಅದಕ್ಕೆ ಪೂರಕ ವಾತಾವರಣ ಸೃಷ್ಟಿಯಾಗುತ್ತಿಲ್ಲ ಎಂದು ರಾಜ್ಯ ಪ್ರಶಸ್ತಿಗೆ ಭಾಜನರಾದ ಜನಪದ ತಜ್ಞ ಡಾ.ಹಂಪನಹಳ್ಳಿ ತಿಮ್ಮೇಗೌಡ ವಿಷಾದಿಸಿದ್ದಾರೆ ಇತ್ತೀಚೆಗೆ  ತಮ್ಮ ನಿವಾಸದಲ್ಲಿ ಅಭಿನಂದಿಸಿದ ಮಾಧ್ಯಮ ಪ್ರತಿನಿಧಿ ಗಳೊಂದಿಗೆ ಮಾತನಾಡಿದ ಅವರು  ಯುವ ಸಾಹಿತಿಗಳಿಗೆ ಹಾಗೂ ಪ್ರತಿಭಾವಂತ ಸಾಹಿತಿಗಳಿಗೆ ಸಾಹಿತ್ಯ ಪರಿಷತ್ತು ಪ್ರೋತ್ಸಾಹ ನೀಡಬೇಕು ಆದರೆ ಇತ್ತೀಚಿನ ವರ್ಷ ಗಳಲ್ಲಿ ಅಂತಹ ವಾತಾವರಣ ಮಾಯವಾಗಿದೆ ಎಂದರು ಎಲ್ಲಾ ಸಾಹಿತ್ಯಾಸಕ್ತರು ಕನ್ನಡ ಪರ ಹೋರಾಟಗಾರರು ಸಾಹಿತಿಗಳು ಸೇರಿ ಸಾಹಿತ್ಯಪರಿಷತ್ತನ್ನು ಸಾಹಿತ್ಯಾತ್ಮಕ ಚಟುವಟಿಕೆ ಗಳ ಕೇಂದ್ರವನ್ನಾಗಿಸಬೇಕಿದ್ದು ಈ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಬೇಕಾದುದು ಅನಿವಾರ್ಯ ಎಂದರು ಈ ಸಂದರ್ಭದಲ್ಲಿ ಪತ್ರಕರ್ತರುಗಳಾದ ಕೆ.ಅರ್.ಮಂಜುನಾಥ್, ಬಿ.ಅರ್.ಉದಯಕುಮಾರ್,ಹೆಚ್.ಅರ್.ಹರೀಶ್ ಕೋಟೆ,ಪ್ರಕಾಶ್ ಬೆಳವಾಡಿರವರುಗಳು ಡಾ.ಹಂಪನಹಳ್ಳಿ ದಂಪತಿಗಳನ್ನು ಸನ್ಮಾನಿಸಿದರು #ಹಂಪನಹಳ್ಳಿ ತಿಮ್ಮೇಗೌಡರು ಪ್ರಧಾನ  ಸಂಪಾದಕರು:- ಹರೀಶ್ ಹೆಚ್ ಆರ್  ಕೋಟೆ.  ಸುದ್ದಿ ಸಂಪಾದಕರು :- ನಾಗೇಂದ್ರ.ಹೆಚ್.ಎನ್. 

ಶಾಲು ಕೊಡವಿ ಎದ್ದು ಹೋದೆಯಲ್ಲೋ-ಕೋಟೆ ಕಾಲಂ

ಶಾಲು ಕೊಡವಿ ಎದ್ದು..... ಹೋದೆಯಲ್ಲೋ..-ಕೋಟೆ ಕಾಲಂ. ಸಿಕ್ಕಿದಾಗಲೆಲ್ಲಾ ಮೊದಲು ಜಗಳವೇ ಅದಕ್ಕೆ ಕಾರಣವಾಗಲೀ ಇಂತದ್ದೆ ನಿರ್ದಿಷ್ಟ ವಿಚಾರವಾಗಲಿ ಬೇಕೆಂದಿಲ್ಲಾ.. ಒಟ್ಟಾರೆ ಜಗಳವಾಡಿಕೊಂಡೆ ಮಾತಿಗೆ ಶುರುವಿಟ್ಟರೆ ಅರ್ಧ ಗಂಟೆ ಇಬ್ಬರು ಆ ಜಾಗಬಿಟ್ಟು ಕದಲುತ್ತಿರಲಿಲ್ಲ ನಡುವೆ ಅವನಿಗೆ ಪ್ರೀತಿಪಾತ್ರನಾದ ನನ್ನ ಮಗ ಮಯೂರನ ಬಗ್ಗೆ ವಿಚಾರಿಸುವುದನ್ನು ಮರೆಯುತ್ತಿರಲಿಲ್ಲ ಕೊಟ್ಟೂರು ಶ್ರಿನಿವಾಸ ಎಂದರೇ ಮೆಲುಮಾತಿನ ನಗುನಗುತ್ತಲೇ ಇರುವ ಸ್ನೇಹಜೀವಿ ಯಾವತ್ತೂ ಯಾರಿಗೂ ಕೇಡನ್ನು ಬಯಸಲಿಲ್ಲ ಹಣಕಾಸು ಲಾಭದ ಬಗ್ಗೆ ಮಾತನ್ನೇ ಆಡಲಿಲ್ಲ ಅಂತಹ ಗೆಳೆಯ ನಮ್ಮೊಡನಿಲ್ಲಾ ಎಂಬುದನ್ನು ಈಗಲೂ ಅರಗಿಸಿಕೊಳ್ಳಲು ಆಗುತ್ತಿಲ್ಲ ಬಿಸಿಲ ಬೆಂಗಾಡು ಬಳ್ಳಾರಿಯ ಕೊಟ್ಟೂರಿನ ಶ್ರೀನಿವಾಸ ಹಾಸನದ ಕೊಟ್ಟೂರು ಶ್ರೀನಿವಾಸ ನಾಗಿಯೇ ಬದುಕಿದ ವ್ಯಕ್ತಿ ಆತನ ಪತ್ನಿ ಪ್ರಮೀಳ ಅವರಿಗೆ ಸರ್ಕಾರಿ ನೌಕರಿ ಸಿಕ್ಕಿದ್ದರಿಂದ ಅನಿವಾರ್ಯ ವಾಗಿ ಹಾಸನಕ್ಕೆ ಬಂದಾತ ಹಾಸನದ ಮಣ್ಣಿನ ಮಗನಾಗಿ ಇಲ್ಲಿಯೇ ಬದುಕನ್ನು ಮುಗಿಸಿ ಪಂಚಭೂತಗಳಲ್ಲಿ ಲೀನವಾದನು ವಿದ್ಯಾರ್ಥಿ ದಿಸೆಯಲ್ಲಿ ಅರ್ ಎಸ್ ಎಸ್ ನಿಂದ ಆಕರ್ಷಿತರಾಗಿ ಕೆಲಕಾಲ ಸ್ವಯಂಸೇವಕ ರಾಗಿಯೂ ಇದ್ದರು ಅದೇಕೋ ಆತನ ಜಾಯಮಾನಕ್ಕೆ ಒಗ್ಗದ ಕಾರಣ ಅಲ್ಲಿ ಮುಂದುವರೆಯಲಿಲ್ಲ ಹಾಸನಕ್ಕೆ ಬಂದ ಬಳಿಕ ದಲಿತ ಮುಖಂಡ ಚಂದ್ರಪ್ರಸಾದ ತ್ಯಾಗಿ ಅವರ ಸಂಪರ್ಕಕ್ಕೆ ಬಂದವನೆ ದಲಿತ ಚಳುವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು ಸಾಕಷ್ಟು ಹೋರಾಟಗಳಲ್ಲಿ ಸಕ್ರಿಯ

ಎಲ್ಲಾ ಬಿಟ್ಟ ಮಗ....ಬಂಗಿ ನೆಟ್ಟ-ಕೋಟೆ ಕಾಲಂ.

ಎಲ್ಲಾ ಬಿಟ್ಟ ಮಗ .....ಬಂಗಿ ನೆಟ್ಟ- ಕೋಟೆ ಕಾಲಂ. ಎಲ್ಲಾ ಬಿಟ್ಟ ಮಗ ಬಂಗಿನೆಟ್ಟ ಅನ್ನುವ ಹಾಗೆ ಸಿ.ಎಂ. ಯಡಿಯೂರಪ್ಪನವರ ಮಗ ಅವರ ಉತ್ತರಾಧಿಕಾರಿ ಎಂದೇ ಬಿಂಬಿತರಾಗಿರುವ ಬಿ.ವೈ. ವಿಜಯೇಂದ್ರ ಮಾಡುತ್ತಿರುವ ಯಡವಟ್ಟುಗಳು ಕೆಲಸವಿಲ್ಲದೆ ಮಗುವಿನ ಹಿಂಭಾಗ ಕೆತ್ತಿದ ಎಡಬಿಡಂಗಿಯಂತಿದೆ ನಮ್ಮ ರಾಜ್ಯದಲ್ಲಿ ಜಾತಿ ಎನ್ನುವುದು ಜೇನುಗೂಡಿನ ಪ್ರತಿ ರೂಪದಂತೆ ಅದಕ್ಕೆ ಕೈ ಹಾಕಬೇಕಾದರೆ ಎಂತಹ ಮುತ್ಸದ್ದಿ ರಾಜಕಾರಣಿಯೇ ಅಗಲಿ ಹತ್ತುಬಾರಿ ಯೋಚಿಸುತ್ತಾರೆ ಆದರೆ ಉಪಚುನಾವಣೆ ಫಲಿತಾಂಶ ಹಾಗೂ ತನ್ನ ತಂತ್ರಗಳು ಫಲ ಕೊಡುತ್ತಿರುವುದರಿಂದ ನೆಲಕಾಣದಂತಾಗಿರುವ ವಿಜಯೇಂದ್ರ ಅತಿ ಉತ್ಸಾಹದಿಂದ ಮಾಡಿದ ಮರಾಠಾ ಪ್ರಾಧಿಕಾರದ ಎಡವಟ್ಟು ರಾಜಕಾರಣದ ಕೊನೆಯ ಇನ್ನಿಂಗ್ಸ್ನಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವ ಉಮೇದಿನಲ್ಲಿ ಬಿಗಿಯಾಗಿ ಪ್ಯಾಡ್ ಹಾಗೂ ಅಬ್ಡಾಮನ್ ಗಾರ್ಡ್ ಕಟ್ಟಿಕೊಂಡಿರುವ ರಾಜಾಹುಲಿ ಯನ್ನು ಹಿಟ್ ವಿಕೇಟ್ ಮಾಡಿ ಪೆವಿಲಿಯನ್ ಗೆ ಕಳುಹಿಸುವ ಸಾಧ್ಯತೆಗಳಿವೆ, ಬಸವ ಕಲ್ಯಾಣದಲ್ಲಿ ಉಪ ಚುನಾವಣೆ ಹಿನ್ನಲೆಯಲ್ಲಿ ನಡೆದ ಸಭೆಯಲ್ಲಿ ಮರಾಠರನ್ನು ಓಲೈಸಲು ಬಿ.ವೈ. ವಿಜಯೇಂದ್ರ ಅಭಿವೃದ್ದಿ ನಿಗಮ ಮಾಡುವುದಾಗಿ ಭರವಸೆ ನೀಡಿದರು ಮಗನ ಮಾತನ್ನು ಚಾಚೂತಪ್ಪದೆ ಪಾಲಿಸುವ ಸಿಎಂ ಶಿರಸಾವಹಿಸಿ ಅದಕ್ಕೆ ಚಾಲನೆ ನೀಡಿ ಸಂಪುಟ ಸಭೆಯಲ್ಲಿ ಸಣ್ಣಪುಟ್ಟ ಹೆಸರು ಬದಲಾವಣೆಯೊಂದಿಗೆ ಅನುಮೋದನೆ ನೀಡಿ ಕನ್ನಡಿಗರ ಹಿತಾಸಕ್ತಿಗೆ ಕೊನೆಯ ಮೊಳೆ ಹೊಡೆದರು ಉತ್ತರ ಕರ್ನಾಟಕ ಭಾಗದಲ್ಲಿ

ಹಾಸನ ಜಿಲ್ಲೆಯ ಕೋವಿಡ್ -19 ವರದಿ. 21/11/2020

ಹಾಸನ ಜಿಲ್ಲೆಯ ಕೋವಿಡ್ -19 ವರದಿ  21/11/2020 ಹಾಸನ ಜಿಲ್ಲೆಯ ಕೋವಿಡ್ -19 ವರದಿ.  #ವಿಮರ್ಶಾ -vimarsha      ಪ್ರಧಾನ ಸಂಪಾದಕರು:-        ಹರೀಶ್ ಹೆಚ್ ಆರ್                 ಕೋಟೆ              ಸುದ್ದಿ ಸಂಪಾದಕರು :-        ನಾಗೇಂದ್ರ.ಹೆಚ್ ಎನ್ 

ದೊಡ್ಡಗದ್ದವಳ್ಳಿ ಮಹಾಲಕ್ಷಿ ದೇವಾಲಯ ವಿಗ್ರಹ ಧ್ವಂಸ :ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಘಟನೆ ವಿವರ:-  ನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ರಾಜ್ಯದ ದೊಡ್ಡ ಪರಂಪರೆ, ಇತಿಹಾಸ ನಾಶವಾಗಿದೆ. ಹೊಯ್ಸಳರ ವಿಷ್ಣುವರ್ಧನನ ಕಾಲದ ಸಾ.ಶ. 1113 ರಲ್ಲಿ ವಜ್ರದ ವ್ಯಾಪಾರಿಗಳಿಂದ ಕಟ್ಟಿಸಲ್ಪಟ್ಟ ಹಾಸನ ಜಿಲ್ಲೆಯ ದೊಡ್ಡಗದ್ದವಳ್ಳಿ ಗ್ರಾಮದ ಚತುಷ್ಕೂಟ ಮಹಾಲಕ್ಷ್ಮಿ ದೇವಾಲಯದ ದಕ್ಷಿಣ ಗರ್ಭಗೃಹದಲ್ಲಿದ್ದ ಮಹಾಕಾಳಿ ಅಥವಾ ದಕ್ಷಿಣ ಭದ್ರಕಾಲಿ ಅಮ್ಮನವರ ವಿಗ್ರಹವನ್ನು ಒಡೆದು ಹಾಕಲಾಗಿದೆ. ( ಜಾರಿ‌ ಬಿದ್ದಿದೆ ಎಂದೂ‌ ಕೂಡ ಹೇಳಲಾಗುತ್ತಿದೆ) ಇಂತಹ ಪರಮ‌ನೀಚ ಕೃತ್ಯಕ್ಕೆ ಕಾರಣರಾದವರನ್ನು ಕಠಿಣ ಶಿಕ್ಷೆಗಳಿಂದ ದಂಡಿಸಬೇಕಿದೆ. ಇಂತಹ ಒಂದು ಭದ್ರಕಾಳಿಯ ವಿಗ್ರಹ ಅಪರೂಪದಲ್ಲಿ ಅಪರೂಪವಾಗಿತ್ತು. ಇದರ ರಕ್ಷಣೆಯ ಹೊಣೆ ಹೊತ್ತಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ( ASI) ಇದಕ್ಕೆ ಉತ್ತರಿಸಿ, ಜವಾಬು ನೀಡಬೇಕಿದೆ. ತನ್ನ ಅಸಮರ್ಥತೆಯನ್ನು ಒಪ್ಪಿಕೊಳ್ಳಬೇಕಿದೆ. ಸಾಲದ್ದಕ್ಕೆ ಪರಂಪರೆಯ ಸಪ್ತಾಹವನ್ನು ಆಚರಿಸುತ್ತಿರುವ ಈ ವಾರದಲ್ಲಿ ಇದು ರಾಜ್ಯಕ್ಕೆ, ಪರಂಪರೆಗೆ ಆದ ದೊಡ್ಡ ನಷ್ಟವಾಗಿದೆ. ಭಕ್ತಾದಿಗಳ ಮನಸಿಗೆ ತುಂಬಾ ದುಃಖವಾಗಿದೆ. ಇದಕ್ಕೆ ಕಾರಣರಾದವರಿಗೆ ಧಿಕ್ಕಾರವಿರಲಿ ಎಂದು ಕೂಗುತ್ತಿದ್ದಾರೆ ಅದಾಗಿಯೇ ಬಿದ್ದು ಒಡೆದು ಹೋಯಿತು ಎಂಬ ಸಬೂಬು ಹೇಳದಿರಲಿ. ಸರಿಯಾದ ರೀತಿಯಲ್ಲಿ ತನಿಖೆ ನಡೆದು ಸತ್ಯ ಹೊರಬರಲಿ ಭಕ್ತಾದಿಗಳು ಆಗ್ರಹ ಪಡಿಸಿದ್ದಾರೆ.  ಸ್ಥಳ ಪರಿಚಯ:-  ದೊಡ್ಡಗದ್ದವಳ್ಳಿಯು ಹಾಸನ ಜಿಲ್ಲೆಯ ಒಂದು ಹಳ್ಳಿ. ಇದು ಹೊಯ್ಸಳ ಶೈಲಿಯ ಪುರಾತನ

Udaya varadi-ಉದಯ ವರದಿ

ವಿಮರ್ಶಾ -vimarsha ph-9164551901/7090899728

ವಿಮರ್ಶಾ -vimarsha

ವಿಮರ್ಶಾ -vimarsha come join with us,ಬನ್ನಿ ನಮ್ಮೂಂದಿಗೆ ಕೈ ಜೋಡಿಸಿ. vimarsha infomedia vimarsha.info

ವಿಮರ್ಶಾ -ಸುದ್ದಿ ನೋಟ

ನವೆಂಬರ್ 19 ರಿಂದ ವಿದ್ಯುತ್ ಹರಿಸಲಾಗುವುದು,ವಿದ್ಯುತ್ ಗೋಪುರ ಹತ್ತದಂತೆ ಎಚ್ಚರಿಕೆ  ಹಾಸನ (ಕರ್ನಾಟಕ ವಾರ್ತೆ):  ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರೀನಿವಾಸಪುರದಲ್ಲಿರುವ ಮೆ|| ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯಿಂದ 220/66/11 ಕೆ.ವಿ ಸ್ವೀಕರಣಾ ಕೇಂದ್ರಕ್ಕೆ ವಿದ್ಯುತ್ ರವಾನೆ ಮಾಡಲು220/66/11 ಕೆ.ವಿ ಯಾಚೇನಹಳ್ಳಿ ಸ್ವೀಕರಣಾ ಕೇಂದ್ರದಿಂದ ನೂತನವಾಗಿ 66 ಕೆ.ವಿ ವಿದ್ಯುತ್ ಮಾರ್ಗವನ್ನು ಸ್ವಯಂ ನಿರ್ಮಾಣ ಯೋಜನೆಯಡಿಯಲ್ಲಿ ನಿರ್ಮಾಣ ಮಾಡಲಾಗಿದ್ದು,  ಸದರಿ ವಿದ್ಯುತ್ ಮಾರ್ಗದಲ್ಲಿ ನ. 19 ರಂದು ಅಥವಾ ನಂತರ ದಿನಗಳಲ್ಲಿ 66ಕೆವಿ ವಿದ್ಯುತ್‍ನ್ನು ಹರಿಸಲಾಗುವುದು ಆದ್ದರಿಂದ ಸಾರ್ವಜನಿಕರು ಈ ಮಾರ್ಗದ ವಿದ್ಯುತ್ ಗೋಪುರವನ್ನು ಹತ್ತುವುದಾಗಲಿ, ಅವುಗಳಿಗೆ ದನ-ಕರುಗಳನ್ನು ಕಟ್ಟುವುದಾಗಲಿ, ಹಸಿರು ಬಳ್ಳಿ ಅಥವಾ ಲೋಹದ ತಂತಿಗಳನ್ನು ಎಸೆಯುವುದಾಗಲಿ ಮಾಡಬಾರದು. ಇದರಿಂದ ಸಾರ್ವಜನಿಕರ ಆಸ್ತಿ-ಪಾಸ್ತಿ ಮತ್ತು ಪ್ರಾಣಕ್ಕೆ ಹಾನಿಯಾಗುವ ಸಂಭವವಿರುತ್ತದೆ. ವಿದ್ಯುತ್ ಪ್ರಸರಣ ಮಾರ್ಗಗಳ ಕೆಳಭಾಗದಲ್ಲಿ ಯಾವುದೇತರಹದ ಚಟುವಟಿಕೆಗಳನ್ನು ಮಾಡಬಾರದಾಗಿ ಹಾಗೂ ವಿದ್ಯುತ್ ಮಾರ್ಗದ 18 ಮೀಟರ್ ಕಾರಿಡಾರ್ ಅಡಿಯಲ್ಲಿ ಯಾವುದೇ ರೀತಿಯ ಕಟ್ಟಡಗಳನ್ನು ಕಟ್ಟುವುದಾಗಲಿ ಅಥವಾ ಮರಗಳನ್ನು ಬೆಳೆಸುವುದಾಗಲಿ ಮಾಡಬಾರದು ಹಾಗೂ ಯಾವುದೇ ತರಹದ ದುಷ್ಕøತ್ಯಗಳಿಗೆ ಒಳಗೊಂಡ ಅಪಘಾತ ಅಥವಾ ಹಾನಿ ಸಂಭವಿಸಿದರೆ ಅವರೇ ಜವಾಬ್ಧಾರರಾಗಿರುತ್ತಾರೆ ಎ

Deepavali Dance and Music Festival